ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎನ್ ರಾಜಣ್ಣ

Untitled design 2025 08 11t154448.629

ಬೆಂಗಳೂರು: ಕಾಂಗ್ರೆಸ್‌‌ ಸರ್ಕಾರದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಈ ಅಚ್ಚರಿ ನಿರ್ಧಾರದಿಂದ ಕಾಂಗ್ರೆಸ್ ಸರ್ಕಾರದ ಒಳಾಂಗಣ ರಾಜಕೀಯದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ.

ಮಾಹಿತಿಯ ಪ್ರಕಾರ, ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿಯಾದ ರಾಜಣ್ಣ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಹೈಕಮಾಂಡ್ ನಾಯಕರಿಂದ ಬಂದ ಸೂಚನೆಯ ಮೇರೆಗೆ ಈ ರಾಜೀನಾಮೆ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿಧಾನಸೌಧದಲ್ಲಿ ನಡೆದ ಭೇಟಿಯಲ್ಲಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆ.ಎನ್. ರಾಜಣ್ಣ ನಡುವೆ ಸ್ವಲ್ಪ ಹೊತ್ತು ಮಾತುಕತೆ ನಡೆಯಿತು. ಅದರ ಬಳಿಕ, ರಾಜಣ್ಣ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಅವರಿಗೆ ಸಲ್ಲಿಸಿದರು.

Exit mobile version