ಸಕ್ಕರೆನಾಡು ಮಂಡ್ಯದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

11 (50)
ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಈಗ ಮಂಡ್ಯ ಜಿಲ್ಲೆಯನ್ನೂ ಈ ಮಹಾಮಾರಿ ಕಾಲಿಟ್ಟಿದೆ. ಸಕ್ಕರೆನಾಡಿನಲ್ಲಿ ಮೊದಲ ಕೊರೊನಾ ಪ್ರಕರಣ ದೃಢಪಟ್ಟಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ 60 ವರ್ಷದ ವೃದ್ಧೆಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಜಿಲ್ಲೆಯ ಮೊದಲ ಕೇಸ್ ಆಗಿದೆ.

ಕಳೆದ ಎರಡು ದಿನಗಳಿಂದ ತೀವ್ರ ಕೆಮ್ಮು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈ ವೃದ್ಧೆ, ಮನೆಯಲ್ಲಿಯೇ ಇದ್ದವರು. ಆದರೆ, ಕೆಮ್ಮಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ, ಕುಟುಂಬದವರು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷೆಯ ವರದಿಯಲ್ಲಿ ಸೋಂಕು ಇರುವುದು ಧೃಡಪಟ್ಟಿದೆ. ತಕ್ಷಣವೇ ವೃದ್ಧೆಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಿಮ್ಸ್ ಆಸ್ಪತ್ರೆಯಲ್ಲಿ ವೃದ್ಧೆಗೆ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ವೈದ್ಯರ ತಂಡವು ಸೋಂಕಿತರ ಆರೋಗ್ಯವನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ವೃದ್ಧೆಯ ಆರೋಗ್ಯ ಸ್ಥಿತಿಯು ಸದ್ಯಕ್ಕೆ ಸ್ಥಿರವಾಗಿದ್ದು, ವೈದ್ಯಕೀಯ ತಂಡವು ಎಚ್ಚರಿಕೆಯಿಂದ ಚಿಕಿತ್ಸೆಯನ್ನು ಮುಂದುವರೆಸಿದೆ.

ಈ ಪ್ರಕರಣದ ಬೆನ್ನಲ್ಲೇ, ಜಿಲ್ಲಾಡಳಿತವು ಎಚ್ಚರಿಕೆಯ ಕ್ರಮಗಳನ್ನು ತೀವ್ರಗೊಳಿಸಿದೆ. ಸೋಂಕಿತ ವೃದ್ಧೆಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಪ್ರಕ್ರಿಯೆ ಆರಂಭವಾಗಿದೆ. ಶ್ರೀರಂಗಪಟ್ಟಣದ ಅರಕೆರೆ ಗ್ರಾಮದಲ್ಲಿ ಸ್ಥಳೀಯ ಆರೋಗ್ಯ ಇಲಾಖೆಯು ಸಂಪರ್ಕ ಪತ್ತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢ

ಇದೇ ಸಂದರ್ಭದಲ್ಲಿ, ರಾಜ್ಯದ ಇತರ ಭಾಗಗಳಲ್ಲೂ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವೊಂದಕ್ಕೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯ ಇಲಾಖೆಯು ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮತ್ತು ಆಗಾಗ್ಗೆ ಕೈ ತೊಳೆಯುವುದರಂತಹ ಮೂಲಭೂತ ಮುಂಜಾಗ್ರತೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಜೊತೆಗೆ, ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣವೇ ವೈದ್ಯಕೀಯ ಸಲಹೆ ಪಡೆಯುವಂತೆ ಜನರಿಗೆ ತಿಳಿಸಲಾಗಿದೆ.

Exit mobile version