ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ರಾತ್ರಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ವಿಧಾನಸಭೆ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ತಿಮ್ಮಾಪುರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದರು.
ಜೊತೆಗೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸಭಾಧ್ಯಕ್ಷರು ಸದನವನ್ನು ಮುಂದೂಡಿದರೂ ಸಹ, ಶಾಸಕರು ಸದನದಿಂದ ಹೊರಬರದೆ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಈ ವೇಳೆ ಶಾಸಕರು ಸದನದ ಒಳಗೆ ಜಾಗಟೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಹಾಡುಗಳನ್ನಾಡಿ ಪ್ರತಿಭಟನೆ ನಡೆಸಿದ್ದಾರೆ.
ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರು ಅಬಕಾರಿ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಂಧೆ ಮತ್ತು ಹಣ ವಸೂಲಿಯ ಹಗರಣವನ್ನು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ. ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಗಂಭೀರ ಆರೋಪ ಮಾಡಿದರು. ಈ ವೇಳೆ ಸಚಿವ ತಿಮ್ಮಾಪುರ ಪರವಾಗಿ ಆಡಳಿತ ಪಕ್ಷದ ಇತರ ಸಚಿವರು ಸಮರ್ಥನೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಸದನದಲ್ಲಿ ಭಾರಿ ಗದ್ದಲವಾಗಿದೆ.
ಸ್ಪೀಕರ್ ಆದೇಶದ ನಡುವೆಯೂ ಪ್ರತಿಭಟನೆ
ಗದ್ದಲ ಮತ್ತು ಘೋಷಣೆಗಳು ಮಿತಿಮೀರಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು. ಆದರೆ, ಕಲಾಪ ಮುಂದೂಡಿದ ನಂತರವೂ ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆಯಲು ನಿರಾಕರಿಸಿದರು. ಸಚಿವ ತಿಮ್ಮಾಪುರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು.
ಸಚಿವ ತಿಮ್ಮಾಪುರ ಅವರ ಭ್ರಷ್ಟಾಚಾರಕ್ಕೆ ಸಾಕ್ಷ್ಯಗಳಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ. ಹಗರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಗುಡುಗಿದ್ದಾರೆ. ರಾತ್ರಿಯಿಡೀ ಸದನದಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿರುವ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ





