ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

Untitled design 2026 04 26T144550.414

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು ಓದುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ನಿರ್ಧಾರವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡುವಂತಹದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದೇಶದ ಹಿನ್ನೆಲೆ ಮತ್ತು ಉದ್ದೇಶ
ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (KSCPCR) ಈ ಕುರಿತು ಶಿಫಾರಸು ಮಾಡಿತ್ತು. ಈ ಶಿಫಾರಸಿನ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿರ್ಧಾರಕ್ಕೆ ಅನುಮೋದನೆ ನೀಡಿದ್ದಾರೆ. ಮಕ್ಕಳನ್ನು ಮತ್ತೆ ಓದಿನ ಕಡೆಗೆ ಸೆಳೆಯುವುದು ಮತ್ತು ಅವರಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸುವುದು ಇದರ ಮುಖ್ಯ ಗುರಿಯಾಗಿದೆ.

ಯಾರಿಗೆ ಅನ್ವಯ?
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ (Private) ಶಾಲೆಗಳಿಗೂ ಈ ನಿಯಮ ಅನ್ವಯಿಸುತ್ತದೆ. ಅಷ್ಟೇ ಅಲ್ಲದೆ, ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ, ಸಂತ ರೋಷಾ, ಮತ್ತು ಎಲ್ಲಾ ಹಾಸ್ಟೆಲ್‌‌ಗಳಲ್ಲೂ ಈ ಕ್ರಮ ಕಡ್ಡಾಯವಾಗಿದೆ. ಆದೇಶ ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಯಾವಾಗ ಮತ್ತು ಹೇಗೆ?
ಪ್ರತಿದಿನ ಬೆಳಗಿನ ಪ್ರಾರ್ಥನೆಯ (Assembly) ನಂತರ ಕನಿಷ್ಠ 10 ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಯನ್ನು ಓದಬೇಕು. ಈ ಸಮಯದಲ್ಲಿ ಪತ್ರಿಕಾ ವಾಚನಕ್ಕೆ ಪ್ರತ್ಯೇಕ ಕಾಲಾವಕಾಶವನ್ನು ವೇಳಾಪಟ್ಟಿಯಲ್ಲಿ ನಮೂದಿಸಬೇಕು. ವಿದ್ಯಾರ್ಥಿಗಳು ತಮ್ಮ ಇಷ್ಟದ ಯಾವುದೇ ಕನ್ನಡ ದಿನಪತ್ರಿಕೆಯಾದರೂ ವಿಜಯ ಕರ್ನಾಟಕ, ಪ್ರಜಾವಾಣಿ, ಕನ್ನಡ ಪ್ರಭ, ಕರ್ನಾಟಕ ಮಲ್ಲ, ಸಂಜೆವಾಣಿ ಯಾವುದನ್ನೇ ಆರಿಸಿಕೊಳ್ಳಬಹುದು.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಬಜೆಟ್‌‌‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕುರಿತು ಘೋಷಿಸಿದ್ದು, ಈ ನೂತನ ಆದೇಶವು ಅದರ ಮುಂದಿನ ಭಾಗವಾಗಿದೆ. ಅವರು ಮಾತನಾಡಿ, “ಡಿಜಿಟಲ್ ಮಾಧ್ಯಮದ ಅಮಿತ ಬಳಕೆ ಮಕ್ಕಳ ಏಕಾಗ್ರತೆಯನ್ನು ಕುಂದಿಸುತ್ತಿದೆ. ಪತ್ರಿಕೆ ಓದುವುದರಿಂದ ಮಕ್ಕಳಲ್ಲಿ ಆಲೋಚನಾ ಶಕ್ತಿ, ಪದಸಂಪತ್ತು ಮತ್ತು ಪ್ರಚಲಿತ ಜ್ಞಾನ ಹೆಚ್ಚಾಗುತ್ತದೆ. ಇದನ್ನು ಒಂದು ಅಭಿಯಾನವಾಗಿ ಮಾಡಬೇಕಿದೆ,” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳು

  1. ಸಾಮಾನ್ಯ ಜ್ಞಾನ: ಜಿಲ್ಲೆಯಿಂದ ಅಂತಾರಾಷ್ಟ್ರೀಯ ಮಟ್ಟದ ಸುದ್ದಿಗಳು ವಿದ್ಯಾರ್ಥಿಗಳಿಗೆ ತಲುಪುತ್ತವೆ. ಇದು ಮುಂದೆ ಕಾಂಪಿಟೇಟಿವ್ ಎಕ್ಸಾಮ್ಗಳಿಗೆ ಸಹಕಾರಿಯಾಗುತ್ತದೆ.

  2. ಬುದ್ಧಿಶಕ್ತಿ: ಪತ್ರಿಕೆಯಲ್ಲಿನ ಸಂಪಾದಕೀಯ, ಲೇಖನಗಳು ಮತ್ತು ವಿಶ್ಲೇಷಣೆಗಳು ಮಕ್ಕಳಲ್ಲಿ ತರ್ಕಬದ್ಧ ಚಿಂತನೆಯನ್ನು ಬೆಳೆಸುತ್ತವೆ.

  3. ಭಾಷಾ ಪ್ರೌಢಿಮೆ: ಪ್ರತಿದಿನ ಹೊಸ ಹೊಸ ಪದಗಳು, ನುಡಿಗಟ್ಟುಗಳು, ಛಂದಸ್ಸುಗಳ ಪರಿಚಯವಾಗುತ್ತದೆ. ಕನ್ನಡ ಭಾಷೆಯ ಮೇಲೆ ಹಿಡಿತ ಸುಧಾರಿಸುತ್ತದೆ.

  4. ಮೊಬೈಲ್ ವ್ಯಸನ ಕಡಿತ: ಪತ್ರಿಕೆ ಓದುವಂತಹ ಸಕಾರಾತ್ಮಕ ಅಭ್ಯಾಸವು ಮಕ್ಕಳನ್ನು ಮೊಬೈಲ್ ಮತ್ತು ರೀಲ್ಸ್ ವ್ಯಸನದಿಂದ ಹೊರಗೆಳೆಯುತ್ತದೆ.

  5. ವರ್ತಮಾನದ ರಾಜಕೀಯ: ರಾಜ್ಯ ಮತ್ತು ರಾಷ್ಟ್ರದ ರಾಜಕೀಯ ಪರಿಸ್ಥಿತಿಯನ್ನು ಅವರು ತಮ್ಮ ಹಂತದಲ್ಲೇ ಅರ್ಥಮಾಡಿಕೊಳ್ಳುತ್ತಾರೆ.

ಶಿಕ್ಷಕರು ವಿದ್ಯಾರ್ಥಿಗಳಿಗೆ ಪತ್ರಿಕೆಯ ಮುಖ್ಯ ಭಾಗಗಳನ್ನು ಗುರುತಿಸಲು ಸಹಾಯ ಮಾಡಬೇಕು. ಜೊತೆಗೆ, ಪ್ರತಿದಿನ ಯಾವುದಾದರೂ ಒಂದು ಮುಖ್ಯ ಸುದ್ದಿಯನ್ನು ತರಗತಿಯಲ್ಲಿ ಚರ್ಚಿಸಲು ಸ್ವಲ್ಪ ಕಾಲಾವಕಾಶ ಮಾಡಬೇಕು. ಪಾಲಕರು ಮನೆಯಲ್ಲೂ ಮಕ್ಕಳಿಗೆ ಕನ್ನಡ ಪತ್ರಿಕೆ ಓದಲು ಪ್ರೋತ್ಸಾಹಿಸಬೇಕು ಎಂದು ಸರ್ಕಾರ ಸೂಚಿಸಿದೆ.

Exit mobile version