ರಾಜ್ಯದಲ್ಲಿ ಇಂದೂ ಮುಂಗಾರು ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

BeFunky collage (20)

ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ತೀವ್ರಗತಿಯಲ್ಲಿ ಮುಂದುವರಿದಿದೆ. ಹವಾಮಾನ ಇಲಾಖೆಯು ಮುಂದಿನ 3 ರಿಂದ 4 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ?

ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು: ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ ಇತರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಖ್ಯ ಎಚ್ಚರಿಕೆಗಳು :

ಬೆಂಗಳೂರಿನ ಪರಿಸ್ಥಿತಿ : ಸೋಮವಾರ ಸುರಿದ ಭಾರೀ ಮಳೆಯಿಂದ ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದ್ದವು. ಇಂದೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಗರಿಷ್ಠ ತಾಪಮಾನ : ಕಲಬುರಗಿಯಲ್ಲಿ 42.4°C ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಸಲಹೆಗಳು :

Exit mobile version