• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

ವೀರೇಶ ದಾನಿ by ವೀರೇಶ ದಾನಿ
July 17, 2026 - 9:01 pm
in ಕರ್ನಾಟಕ
0 0
0
Untitled design (10)

ಬೆಂಗಳೂರು, ಜುಲೈ 17, (ಕರ್ನಾಟಕ ವಾರ್ತೆ) : ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧದಲ್ಲಿ ರಾಜ್ಯ ಮಟ್ಟದ ರಫ್ತು ಉತ್ತೇಜನಾ ಸಮಿತಿ (SLEPC) ಸಭೆಯು ಯಶಸ್ವಿಯಾಗಿ ಜರುಗಿತು.

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಕರ್ನಾಟಕವು ಬರೋಬ್ಬರಿ ಶೇಕಡಾ 41 ರಷ್ಟು ಪಾಲು ಹೊಂದುವ ಮೂಲಕ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಹಾಗೆಯೇ, ದೇಶದ ಒಟ್ಟಾರೆ ರಫ್ತು ವಲಯದಲ್ಲಿ ಶೇ. 24 ರಷ್ಟು ಪಾಲು ಪಡೆದು ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ.

RelatedPosts

ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

ADVERTISEMENT
ADVERTISEMENT

ಇನ್ನು ಮರ್ಚಂಡೈಸ್ ರಫ್ತಿನಲ್ಲಿ ಶೇ. 7.78 ರಷ್ಟು ಪಾಲಿನೊಂದಿಗೆ ರಾಜ್ಯವು ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನ ನಂತರ ನಾಲ್ಕನೇ ಸ್ಥಾನದಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

​ಸಭೆಯಲ್ಲಿ ಭಾಗವಹಿಸಿದ್ದ ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ  ದರ್ಪಣ್ ಜೈನ್ ಅವರು, ವಿವಿಧ ವಲಯಗಳಲ್ಲಿ ಗುರುತಿಸಲಾದ ರಫ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ‘ರಫ್ತು ಉತ್ತೇಜನಾ ಮಿಷನ್’ (EPM) ಮೂಲಕ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುತ್ತಿರುವ ಬೃಹತ್ ಬೆಂಬಲ ಮತ್ತು ಪ್ರಯೋಜನಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು.

ಭಾರತ ಸರ್ಕಾರದ ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯವು (DGFT) ದೇಶದಾದ್ಯಂತ 120 ಆದ್ಯತೆಯ ಜಿಲ್ಲೆಗಳನ್ನು ಒಳಗೊಂಡ ‘ಡಿಸ್ಟ್ರಿಕ್ಟ್ ಆಸ್ ಎಕ್ಸ್‌ಪೋರ್ಟ್ ಹಬ್’ (DEH) ಉಪಕ್ರಮದ ಅಡಿಯಲ್ಲಿ ಕ್ರಮಗಳನ್ನು ಕೈಗೊಳ್ಳಲು ಕಾಲಮಿತಿಯ ಆಂದೋಲನವನ್ನು ಹಮ್ಮಿಕೊಂಡಿದೆ. ಇದರ ಮೊದಲ ಹಂತವಾಗಿ ಕರ್ನಾಟಕದ ಪ್ರಮುಖ 5 ಜಿಲ್ಲೆಗಳಾದ ಬೆಂಗಳೂರು ನಗರ, ಬೆಳಗಾವಿ, ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ಹೊರತುಪಡಿಸಿ (Beyond Bengaluru) ಜಿಲ್ಲೆಗಳಿಗೆ ವಿಶೇಷ ಆದ್ಯತೆ:

ಹೆಚ್ಚುವರಿ ಕಾರ್ಯದರ್ಶಿಗಳು ಜವಳಿ, ಉಡುಪುಗಳು, ರೇಷ್ಮೆ, ಚರ್ಮದ ವಸ್ತುಗಳು, ಕೃಷಿ ಮತ್ತು ಸಂಸ್ಕರಿಸಿದ ಆಹಾರಗಳಂತಹ ಕೆಲವು ವಲಯಗಳು ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ ರಫ್ತು ಸಾಮರ್ಥ್ಯವನ್ನು ಹೊಂದಿವೆ ಎಂದು ವಿವರಿಸಿದರು.

ವಿಯೆಟ್ನಾಂ ಸೇರಿದಂತೆ ಜಾಗತಿಕ ಯಶಸ್ವಿ ಮಾದರಿಗಳನ್ನು ಉಲ್ಲೇಖಿಸಿದ ಅವರು, ಪ್ರಮುಖ ಆಂಕರ್ ಕಂಪನಿಗಳು ಹಾಗೂ ಸ್ಯಾಮ್‌ಸಂಗ್‌ನಂತಹ ಜಾಗತಿಕ ದೈತ್ಯ ಕಂಪನಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೂಡಿಕೆ ಹಾಗೂ ರಫ್ತು ಸಹಭಾಗಿತ್ವವನ್ನು ವಿಸ್ತರಿಸಲು ಆಸಕ್ತಿ ಹೊಂದಿವೆ ಎಂದು ಸಭೆಗೆ ತಿಳಿಸಿದರು.

​ರಫ್ತು ಉತ್ತೇಜನಾ ಮಿಷನ್ (EPM) ಮೂಲಕ ದೊರೆಯುವ ಪ್ರಮುಖ ಸೌಲಭ್ಯಗಳು:

​ಬ್ಯಾಂಕುಗಳಿಗೆ ಗ್ಯಾರಂಟಿ ನೀಡುವುದು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಆವರ್ತಕ ನಿಧಿ (Revolving Fund) ಒದಗಿಸುವುದು.

​ವಿಮಾನ ನಿಲ್ದಾಣಗಳಲ್ಲಿ ಗೋದಾಮು ಸೌಲಭ್ಯಗಳನ್ನು ಬಳಸಿಕೊಳ್ಳಲು ರಫ್ತುದಾರರಿಗೆ ಆರ್ಥಿಕ ನೆರವು ನೀಡುವುದು.

ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳ ರಫ್ತುದಾರರಿಗೆ ಸರಕು ಸಾಗಣೆ ವೆಚ್ಚದ (Freight Charges) ಮೇಲೆ ಸಬ್ಸಿಡಿ ಸೌಲಭ್ಯ.

​ರಾಜ್ಯದಲ್ಲಿ ಖರೀದಿದಾರರು ಮತ್ತು ಮಾರಾಟಗಾರರ ಸಮಾವೇಶ (Buyer-Seller Meet) ಆಯೋಜನೆಗೆ ಕೇಂದ್ರದಿಂದ ಸಂಪೂರ್ಣ ಭರವಸೆ

​ಮುಖ್ಯ ಕಾರ್ಯದರ್ಶಿಗಳ ಮಹತ್ವದ ಸೂಚನೆಗಳು:

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯದಲ್ಲಿ ರಫ್ತು ಉತ್ತೇಜನಕ್ಕಾಗಿ ಮತ್ತು ಡಿ.ಇ.ಎಚ್ (D.E.H) ಉಪಕ್ರಮದ ನೋಡಲ್ ಸಂಸ್ಥೆಯಾದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರಕ್ಕೆ (VTPC) ಮಹತ್ವದ ನಿರ್ದೇಶನಗಳನ್ನು ನೀಡಿದರು.

ರಾಜ್ಯದ ರಫ್ತು ಸಾಮರ್ಥ್ಯವನ್ನು ಗರಿಷ್ಠ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳಲು ಹೆಚ್ಚಿನ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮಗಳನ್ನು (EMTP) ಹಾಗೂ ರಫ್ತು ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲು ಸೂಚಿಸಿದರು.

ಉದಯೋನ್ಮುಖ ರಫ್ತುದಾರರು, ಕೈಗಾರಿಕೆಗಳು ಮತ್ತು ವರ್ತಕರಿಗಾಗಿ ಪ್ರಾಯೋಗಿಕ ಕಾರ್ಯಾಗಾರಗಳನ್ನು ನಡೆಸುವ ಮೂಲಕ ರಫ್ತು ಉತ್ತೇಜನಾ ಕಾರ್ಯಗಳನ್ನು ಮತ್ತಷ್ಟು ಚುರುಕುಗೊಳಿಸಲು ಅವರು ಆದೇಶಿಸಿದರು.

​ಬ್ರಿಟನ್ (UK) ದೇಶದೊಂದಿಗೆ ಇತ್ತೀಚೆಗೆ ಮಾಡಿಕೊಳ್ಳಲಾದ ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ವಿವಿಧ FTA (CETA/CEPA) ಒಪ್ಪಂದಗಳಿಂದ ದೊರೆತಿರುವ ಸುವರ್ಣ ಅವಕಾಶಗಳನ್ನು ಬಳಸಿಕೊಂಡು ಎಲೆಕ್ಟ್ರಾನಿಕ್ಸ್, ಕೃಷಿ ಮತ್ತು ಆಹಾರ ಉತ್ಪನ್ನಗಳು, ಇಂಜಿನಿಯರಿಂಗ್, ಜವಳಿ, ಔಷಧೀಯ ಉತ್ಪನ್ನಗಳು ಮತ್ತು ರೇಷ್ಮೆ ಉತ್ಪನ್ನಗಳ ರಫ್ತನ್ನು ಗಣನೀಯವಾಗಿ ಹೆಚ್ಚಿಸಲು ಮುಖ್ಯ ಕಾರ್ಯದರ್ಶಿಗಳು ಕರೆ ನೀಡಿದರು.

​ಈ ಮಹತ್ವದ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, VTPC, ಭಾರತ ಸರ್ಕಾರದ DGFT ಪ್ರತಿನಿಧಿಗಳು, ಕೈಗಾರಿಕಾ ಸಂಸ್ಥೆಗಳು, ವಾಣಿಜ್ಯ ಮಂಡಳಿಗಳು ಹಾಗೂ ರಫ್ತು ಉತ್ತೇಜನಾ ಮಂಡಳಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ShareSendShareTweetShare
ವೀರೇಶ ದಾನಿ

ವೀರೇಶ ದಾನಿ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಪೊಲಿಟಿಕಲ್ ರಿಪೋರ್ಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಯಲ್ಲಿ ಜಿಲ್ಲಾ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ 14 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಅಪರಾಧ ವಿಭಾಗ ಇವರ ಆಸಕ್ತಿಯ ವಿಷಯಗಳು. ರಾಜಕೀಯ ವಿಷಯಗಳ ಬಗ್ಗೆ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸಿನಿಮಾ, ಕಾದಂಬರಿ ಪುಸ್ತಕಗಳ ಓದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (14)

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 9:51 pm
0

Untitled design (13)

ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ

by ಕವಿತಾ
July 17, 2026 - 9:37 pm
0

Untitled design (11)

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 9:13 pm
0

Untitled design (10)

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

by ವೀರೇಶ ದಾನಿ
July 17, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೃಷ್ಣ (25)
    ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ
    July 17, 2026 | 0
  • ಕೃಷ್ಣ (11)
    ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ
    July 17, 2026 | 0
  • Untitled design 2026 07 17T172418.329
    ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
    July 17, 2026 | 0
  • ಆಷಾಢ
    ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ
    July 17, 2026 | 0
  • 1122
    ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version