ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Untitled design (100)

ಬೆಂಗಳೂರು: ಕರ್ನಾಟಕದಲ್ಲಿ ಭ್ರಷ್ಟಾಚಾರ ನಿವಾರಣೆಗಾಗಿ ಲೋಕಾಯುಕ್ತ ದಾಳಿ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಹಾಸನದ ಜ್ಯೋತಿ ಮೇರಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಧೋಲಪ್ಪ (ಕಲಬುರ್ಗಿ) ಮತ್ತು ಚಂದ್ರಕುಮಾರ್ (ಚಿತ್ರದುರ್ಗ), ಉಡುಪಿ ಆರ್ ಟಿಓ ಲಕ್ಷ್ಮಿನಾರಾಯಣ ಪಿ. ನಾಯಕ್, ಬೆಂಗಳೂರು ವೈದ್ಯಾಧಿಕಾರಿ ಮಂಜುನಾಥ್. ಜಿ, ದಾವಣಗೆರೆ ಕೆಆರ್‌ಐಡಿಎಲ್ ಎಇಇ ಜಗದೀಶ್ ನಾಯಕ್, ಹಾವೇರಿ ಕಂದಾಯ ಅಧಿಕಾರಿ ಅಶೋಕ್ ಸೇರಿದಂತೆ ವಿವಿದ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ವಿವಿಧ ಇಲಾಖೆಗಳ ಮೇಲಿನ ಭ್ರಷ್ಟಾಚಾರ ನಿಯಂತ್ರಣ ಕ್ರಮದ ಭಾಗವಾಗಿದೆ. ಅಧಿಕಾರಿಗಳ ನಡುವೆ ಸಾರ್ವಜನಿಕ ಹಾಗೂ ಇಲಾಖಾ ಸಂಪತ್ತು ದುರುಪಯೋಗಕ್ಕೆ ಕಾರಣವಾಗುವಂತಹ ಪ್ರಕರಣಗಳ ಕುರಿತು ತನಿಖೆ ನಡೆಯುತ್ತಿದೆ.

 

Exit mobile version