ಬೆಂಗಳೂರು: ಗಡಿಭಾಗದಲ್ಲಿ ಮರಾಠಿಗರ ಹಾವಳಿ ಒಂದು ಕಡೆಯಾದರೆ, ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡದಲ್ಲಿಯೇ ಹೆಸರು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು.. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರೆ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಾದ್ರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನ ಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು. ಸರ್ಕಾರಿ ಮತ್ತು ಖಾಸಗಿ ಉತ್ಪಾದಕರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.