• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 11:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 04T230133.066

ಬೆಂಗಳೂರು, ಫೆ. 4: “ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರ ಸ್ವಾಭಿಮಾನದ ಬದುಕು ಹಾಗೂ ಉದ್ಯೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಸ್ವಾಭಿಮಾನ ಉಳಿಸಿಕೊಂಡು ಉದ್ಯೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇತ್ತು. ಜನರ ಈ ಹಕ್ಕನ್ನು ಕೇಂದ್ರ ಬಿಜೆಪಿ ಸರ್ಕಾರ ಕಸಿದುಕೊಂಡಿದೆ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ವಿಬಿ ಗ್ರಾಮ್ ಜಿ ವಿರುದ್ಧ ಮುಖ್ಯಮಂತ್ರಿಯವರು ಮಂಡಿಸಿದ ನಿರ್ಣಯವನ್ನು ಬೆಂಬಲಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಡಿಸಿಎಂ ಶಿವಕುಮಾರ್ ಅವರು ಬುಧವಾರ ಮಾತನಾಡಿದರು.

RelatedPosts

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ

ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ

ADVERTISEMENT
ADVERTISEMENT

“ಈಗ ಹೊಸ ಕಾಯ್ದೆಯಲ್ಲಿ ಗುತ್ತಿಗೆದಾರನ ಬಳಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ. ಪಂಚಾಯಿತಿ ಮಟ್ಟದ‌ ಕೆಲಸಗಳನ್ನು ದೆಹಲಿಯಲ್ಲಿ ಕುಳಿತು ಹೇಗೆ ನಿರ್ಧಾರ ಮಾಡಲಾಗುತ್ತದೆ. ಎಐ ತಂತ್ರಜ್ಞಾನದ ಮೂಲಕ ಎಲ್ಲೆಲ್ಲಿ ಯಾವ ಕೆಲಸ ತೆಗೆದುಕೊಳ್ಳಬೇಕು ಎಂದು ತೀರ್ಮಾನ ಮಾಡುತ್ತಾರಂತೆ. ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲದ ತೀರ್ಮಾನ” ಎಂದರು.

ಮುಖ್ಯಮಂತ್ರಿಯವರು ತಂದಿರುವ ನಿರ್ಣಯಕ್ಕೆ ಬೆಂಬಲ

“ಮುಖ್ಯಮಂತ್ರಿಯವರು ವಿಬಿ ಗ್ರಾಮ್ ಜಿ ವಿರುದ್ಧ ತಂದಿರುವ ನಿರ್ಣಯಕ್ಕೆ ಅರ್ಥವಿದೆ. ರೈತರ ವಿರುದ್ಧ ತಂದಿದ್ದ ಕರಾಳ ಕಾಯ್ದೆಗಳನ್ನು ಹಿಂಪಡೆಯುವ ತನಕ ಹೇಗೆ ಹೋರಾಟ ಮಾಡಲಾಯಿತೋ ಅದೇ ರೀತಿ ಮನರೇಗಾ ಬದಲಾವಣೆ ವಿರುದ್ಧ ಅದನ್ನು ಮರುಜಾರಿ ಮಾಡುವ ತನಕ ನಾವು ಹೋರಾಟ ಮಾಡುತ್ತೇವೆ. ನಿರ್ಣಯಕ್ಕೆ ಇಡೀ ಆಡಳಿತ ಪಕ್ಷದ ಶಾಸಕರ ಬೆಂಬಲವಿದೆ. ಬಿಜೆಪಿಯವರಿಗೆ ಇದರ ಬಗ್ಗೆ ಮಾತನಾಡುವ ಹಕ್ಕು ನೀಡಲಾಗಿತ್ತು. ಆದರೆ ಅವರು ಸಭಾತ್ಯಾಗ ಮಾಡಿ ಅದನ್ನು ಕಳೆದುಕೊಂಡಿದ್ದಾರೆ” ಎಂದು ಕುಟುಕಿದರು.

“ಬೇರೆಯವರ ಜಮೀನಿನಲ್ಲಿ ಕೆಲಸ ಮಾಡುವುದಕ್ಕೆ ಹಿಂಜರಿಕೆಯಾಗುತ್ತದೆ ಎಂದಾದರೆ ರೈತರು ಅವರ ಸ್ವಂತ ಜಮೀನಿನಲ್ಲೇ ಕೃಷಿ ಹೊಂಡ ಮಾಡಿಕೊಳ್ಳಬಹುದು, ಮನೆ ಕಟ್ಟಿಕೊಳ್ಳಬಹುದು ಹೀಗೆ ಹಲವಾರು ಕೆಲಸಗಳನ್ನು ಮಾಡಿಕೊಳ್ಳಬಹುದು ಅದನ್ನೂ ಸಹ ನರೇಗಾ ಯೋಜನೆಯಡಿ ತಂದು ರೈತನೇ ಕೂಲಿ ಪಡೆಯಬಹುದು ಎಂದು ಸೋನಿಯಾಗಾಂಧಿ ಅವರ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ಅವಕಾಶ ನೀಡಿತ್ತು. ಅಂದು ಕೇಂದ್ರ ಸಚಿವರಾಗಿದ್ದವರು ಸಿ.ಪಿ. ಜೋಶಿ” ಎಂದರು.

ಕನಕಪುರ, ರಾಮನಗರಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಪ್ರಶಸ್ತಿ

“2013-18ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನನ್ನದೇ ಕನಕಪುರ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂಪಾಯಿ ಮೊತ್ತದ ನರೇಗಾ ಕಾಮಗಾರಿಗಳು ನಡೆದವು. ಸುಮಾರು 40 ಸಾವಿರ ಕೃಷಿ ಹೊಂಡಗಳು, 54 ಸಾವಿರ ದನದ ಕೊಟ್ಟಿಗೆ ನಿರ್ಮಾಣ ಮಾಡಲಾಯಿತು, 9,300 ಕ್ಕೂ ಹೆಚ್ಚು ಚರಂಡಿ ಕಾಮಗಾರಿಗಳು, 9 ಸಾವಿರ ಗ್ರಾಮೀಣ ರಸ್ತೆಗಳು, 4,200 ಕ್ಕೂ ಅಧಿಕ ನಾಲಾ ಅಭಿವೃದ್ಧಿ ಕಾಮಗಾರಿ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಯಿತು. ಇದಕ್ಕೆ ನಾವು ಅವ್ಯವಹಾರ ಮಾಡಿದ್ದೇವೆ ಎಂದು ಕೇಂದ್ರ ಸರ್ಕಾರ ಐದಾರು ಬಾರಿ ತನಿಖೆ ಮಾಡಿಸಿತು” ಎಂದರು.

“2017 ರಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಅತ್ಯುತ್ತಮ ಕೆಲಸ ಮಾಡಲಾಗಿದೆ ಎಂದು ರಾಮನಗರ ಜಿಲ್ಲೆಗೆ ಪ್ರಶಂಸೆ ನೀಡಿತು. ನನ್ನ ಕನಕಪುರ ಕ್ಷೇತ್ರವು ನರೇಗಾ ಅಡಿ ತೆಗೆದುಕೊಂಡಿದ್ದ ಕಾಮಗಾರಿಗಳನ್ನು ಸಂಪೂರ್ಣಗೊಳಿಸಿದ ಕಾರಣಕ್ಕೆ ಇಡೀ ದೇಶದಲ್ಲಿಯೇ ಮೊದಲ ಸ್ಥಾನ ಗಳಿಸಿತು. ನನ್ನನ್ನು ಕರೆದು ಪ್ರಶಸ್ತಿ ನೀಡಬೇಕು ಎಂದು ನಮ್ಮ ತಾಲ್ಲೂಕು ಪಂಚಾಯತಿ ಅಧ್ಯಕ್ಷರನ್ನು ಕರೆದು ಪ್ರಶಸ್ತಿ ನೀಡಲಾಯಿತು. ಅಂದು ಕೆ.ಎಸ್.ಈಶ್ವರಪ್ಪ ಅವರು ಸಚಿವರಾಗಿದ್ದರು” ಎಂದರು.

ಬಿಜೆಪಿ ಆಡಳಿತ ರಾಜ್ಯಗಳಲ್ಲೇ ನೂತನ ಕಾಯ್ದೆ ಜಾರಿ ಅಸಾಧ್ಯ

“ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೇ ನೂತನ ಕಾಯ್ದೆ ಜಾರಿಗೆ ತರಲು ಆಗುವುದಿಲ್ಲ. ಶೇ. 60/40 ಅನುದಾನ ಹಂಚಿಕೆಗೆ ಒಪ್ಪಲು ಆಗುವುದಿಲ್ಲ. ಶೇ.40 ರಷ್ಟು ಅನುದಾನ ಯಾರು ನೀಡಲು ಆಗುತ್ತದೆ. ಸ್ವಂತ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ ಎಂದಾದರೆ ಬೇರೆಯವರ ಜಮೀನಿಗೆ ತೆರಳಿ ಕೆಲಸ ಮಾಡಲು ಸಾಧ್ಯವೇ?” ಎಂದರು.

“ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆ ಉದ್ಯೋಗ ಗ್ಯಾರಂಟಿ ನೀಡುತ್ತಿತ್ತು. ಪ್ರತಿಪಕ್ಷ ಬಿಜೆಪಿಗೆ ಕೇಂದ್ರ ಸರ್ಕಾರ ತಂದಿರುವ ಹೊಸ ಕಾನೂನು ಬಗ್ಗೆ ಚರ್ಚೆ‌ ಮಾಡಲು ಬೇಕಾದಷ್ಟು ಅವಕಾಶವಿತ್ತು. ಸದನದಲ್ಲಿ ಬಿಜೆಪಿಯವರಿಗೆ ಹೇಳಲು ಧೈರ್ಯವಿಲ್ಲ. ಹೊರಗೆಯಾದರೂ ಇದರ ಬಗ್ಗೆ ಮಾತನಾಡಲಿ ಎಂಬುದು ನನ್ನ ಅಪೇಕ್ಷೆ” ಎಂದು ವ್ಯಂಗ್ಯವಾಡಿದರು.

“ಕಾಂಗ್ರೆಸ್ ಪಕ್ಷ, ಸರ್ಕಾರ ಮಹಾತ್ಮ ಗಾಂಧಿ ಅವರ ಹೆಸರನ್ನು ಮರಳಿ ತರುವ ತನಕ ಹೋರಾಟ ಮುಂದುವರೆಸಲಿದೆ” ಎಂದು ತಿಳಿಸಿದರು.

ನಮ್ಮ ಉದ್ಯೋಗ ನಮ್ಮ ಹಕ್ಕು ಎಂಬ ಅಂಶ ವಿಬಿ ಗ್ರಾಮ್ ಜಿ ಯೋಜನೆಯಲ್ಲಿ ಎಲ್ಲಿ ಪ್ರಸ್ತಾಪಿಸಲಾಗಿದೆ?

ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುವಾಗ ಮಾತನಾಡಿದ ಶಿವಕುಮಾರ್ ಅವರು, “ಉದ್ಯೋಗ ಖಾತರಿ ಯಾರಿಗಾಗಿ? ಈ ಯೋಜನೆ ನಿಂತಿರುವುದೇ ಗ್ರಾಮೀಣ ಭಾಗದ ಕಾರ್ಮಿಕರ ಸ್ವಾಭಿಮಾನದ ಬದುಕಿಗೆ ಆಧಾರವಾಗಿ ಈ ಯೋಜನೆ ರೂಪಿಸಬೇಕಾಗಿದೆ. ರೈತರು, ಕೃಷಿ ಕಾರ್ಮಿಕರು ತನ್ನ ಜಮೀನಿನಲ್ಲಿ ಕೆಲಸ ಮಾಡಿಕೊಳ್ಳುವುದಕ್ಕೆ ಈ ಯೋಜನೆ ಇರಬೇಕು. ಗುತ್ತಿಗೆದಾರನ ಕೈ ಕೆಳಗೆ ಹೋಗಿ ಕೆಲಸ ಮಾಡುವುದಕ್ಕೆ ಅಲ್ಲ. ಮನರೇಗಾ ಯೋಜನೆಯಲ್ಲಿ ತನ್ನ ಜಮೀನಿನಲ್ಲಿ ತೋಟಗಾರಿಕೆ ಬೆಳೆ, ಹೂ ಬೆಳೆ, ಸಾಕು ಪ್ರಾಣಿಗಳ ಕೊಟ್ಟಿಗೆ ನಿರ್ಮಾಣಕ್ಕೆ, ತನ್ನ ಜಮೀನು ಮಟ್ಟ ಮಾಡಿಕೊಳ್ಳಲು, ಮನೆ ಕಟ್ಟಿಕೊಳ್ಳಲು, ಇಂಗು ಗುಂಡಿ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ನಮ್ಮ ಉದ್ಯೋಗ ನಮ್ಮ ಹಕ್ಕು ಎಂಬ ಅಂಶ ನೂತನ ವಿಬಿ ಗ್ರಾಮ್ ಜಿ ಯೋಜನೆಯಲ್ಲಿ ಎಲ್ಲಿ ಪ್ರಸ್ತಾಪಿಸಲಾಗಿದೆ ಎಂದು ವಿವರಿಸಿ” ಎಂದು ಆಗ್ರಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T232419.459

ರಾತ್ರಿ ಫೋನ್ ನೋಡುವವರೇ, ಎಚ್ಚರ!: ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು.!

by ಶಾಲಿನಿ ಕೆ. ಡಿ
February 4, 2026 - 11:28 pm
0

Untitled design 2026 02 04T230133.066

ಮನರೇಗಾ ರದ್ದು ಮಾಡಿ ಕಾರ್ಮಿಕರ ಸ್ವಾಭಿಮಾನದ ಬದುಕು, ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರ: ಡಿಕೆಶಿ

by ಶಾಲಿನಿ ಕೆ. ಡಿ
February 4, 2026 - 11:06 pm
0

Untitled design 2026 02 04T224012.234

ಎಪ್ರಿಲ್ 30ಕ್ಕೆ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರ ತೆರೆಗೆ ಎಂಟ್ರಿ

by ಶಾಲಿನಿ ಕೆ. ಡಿ
February 4, 2026 - 10:45 pm
0

Untitled design 2026 02 04T222103.862

ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
February 4, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T222103.862
    ಲಿಫ್ಟ್‌ನಲ್ಲೇ ಸ್ಫೋಟಗೊಂಡ ಹೈಡ್ರೋಜನ್‌ ಬಲೂನ್‌; ಮೂವರಿಗೆ ಗಂಭೀರ ಗಾಯ
    February 4, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
  • Untitled design 2026 02 04T205941.369
    U19 World Cup: ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿ ಫೈನಲ್‌ಗೆ ಹಾರಿದ ಭಾರತ
    February 4, 2026 | 0
  • Untitled design 2026 02 04T202027.254
    ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ
    February 4, 2026 | 0
  • Untitled design 2026 02 04T195518.335
    ಬಿಜಿಎಸ್‌‌ನಲ್ಲಿ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿಗಳ ಜನ್ಮದಿನದ ಸಂಭ್ರಮ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version