• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡ್ತಿಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 7:25 pm
in Flash News, ಕರ್ನಾಟಕ
0 0
0
111 (2)

ಬೆಂಗಳೂರು : “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು.

RelatedPosts

GBA ಚುನಾವಣೆ ಯಾವಾಗ?: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಸಿಎಂ ಕುರ್ಚಿ ಬಿಟ್ಟ ಬಳಿಕ ಸಿದ್ದರಾಮಯ್ಯ ಫುಲ್ ಸೈಲೆಂಟ್; ಮುಂದಿನ ಹೆಜ್ಜೆ ಏನು?

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ

ADVERTISEMENT
ADVERTISEMENT

“ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಡು ನೋಡುವುದಾಗರೆ, ವಿದ್ಯಾರ್ಥಿಗಳು ಮೈಸೂರು ವಿವಿ ಹೆಸರಲ್ಲಿ ಪದವಿ ಪಡೆಯುದಕ್ಕೂ, ಬೇರೆ ಇತರೆ ವಿವಿ ಹೆಸರಲ್ಲಿ ಪದವಿ ಪ್ರಮಾಣಪತ್ರ ಪಡೆಯುವುದಕ್ಕೆ ಎಷ್ಟು ವ್ಯತ್ಯಾಸವಿದೆ” ಎಂದು ವಿವರಿಸಿದರು.

“ಯಡಿಯೂರಪ್ಪನವರ ಪುತ್ರ ಸದನದಲ್ಲಿ ಇದ್ದಾರೆ. ಅವರ ಸಹೋದರಿಯ ಪುತ್ರ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಮುಂದಾದಾಗ. ಅವರು ಪಿಇಎಸ್ ಶಿಕ್ಷಣ ಸಂಸ್ಧೆಯಲ್ಲಿ ಓದಿದ್ದರು. ಅದು ಉತ್ತಮ ಸಂಸ್ಥೆಯಾದರೂ ಅದು ಅಧಿಕೃತ ವಿವಿಯಲ್ಲ ಎಂಬ ಕಾರಣಕ್ಕೆ ಅವರಿಗೆ ವಿದೇಶಿ ವಿವಿಯಲ್ಲಿ ಪ್ರವೇಶಾತಿ ನಿರಾಕರಿಸಲಾಗಿತ್ತು. ಎಸ್.ಎಂ ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅನೇಕ ಪ್ರಯತ್ನಗಳನ್ನು ಮಾಡಿ ಕೊನೆಗೆ ಅಲ್ಲಿ ಪ್ರವೇಶಾತಿ ಸಿಕ್ಕಿತು. ಇದು ಕೇವಲ ಒಂದು ಉದಾಹರಣೆಯಷ್ಟೇ. ಬೆಂಗಳೂರು ವಿವಿ, ಮೈಸೂರು ವಿವಿ ಪ್ರತಿಷ್ಠಿತ ವಿವಿಗಳಾಗಿವೆ. ಈ ವಿವಿಗಳ ಜಾರಿ ಕಾರ್ಯಸಾಧುವಲ್ಲ ಎಂದು ವಿಲೀನ ಮಾಡುತ್ತಿದ್ದೇವೆಯಷ್ಟೇ. ಈ ವಿಚಾರವಾಗಿ ನಾವು ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿದ್ದೇವೆ” ಎಂದು ಹೇಳಿದರು.

“ಡೈಲಾಗ್ ಸಂಪೂರ್ಣವಾಗಿ ಹೇಳಿ: ಅಶೋಕ್ ಒತ್ತಾಯ”

“ನಾನು ಕೂಡ ಶಿಕ್ಷಣದ ಮೇಲೆ ಆಸಕ್ತಿ ಹೊಂದಿರುವವನೆ” ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದಾಗ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ನಿಮ್ಮ ಡೈಲಾಗ್ ಅನ್ನು ಮತ್ತೊಮ್ಮೆ ಸಂಪೂರ್ಣವಾಗಿ ಹೇಳಿ ಎಂದು ಒತ್ತಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಇದು ಕೇವಲ ಡೈಲಾಗ್ ಅಲ್ಲ. ನೀವು ಕಳುಹಿಸಿದ ತಿಹಾರ್ ಜೈಲಿಂದ ಬಂದ ನಂತರ ನಾನು ಪಕ್ಷದ ಕಚೇರಿಯಲ್ಲಿ ಈ ಮಾತನ್ನು ಹೇಳಿದ್ದೆ. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ನಾನು ರಾಜಕಾರಣಿ. ನಾನು ವಿದ್ಯಾರ್ಥಿಯಾಗಿದ್ದಾಗ ಹೆಚ್ಚು ಓದಲಿಲ್ಲ. ಫೈನಲ್ ಇಯರ್ ಡಿಗ್ರಿ ಮಾಡುವಾಗ ಪಕ್ಷ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿತು. ನಂತರ 47ನೇ ವಯಸ್ಸಿಗೆ ಪದವಿ ಮಾಡಿದೆ” ಎಂದು ವಿರೋಧ ಪಕ್ಷದ ನಾಯರ ಆಸೆ ಈಡೇರಿಸಿದರು.

ಮಾತು ಮುಂದುವರಿಸಿದ ಶಿವಕುಮಾರ್ ಅವರು, “ನನಗೆ ಶಿಕ್ಷಣ ಕ್ಷೇತ್ರದ ಮೇಲೆ ಹೆಚ್ಚು ಆಸಕ್ತಿ ಇದೆ. ಈ ವಿಚಾರದಲ್ಲಿ ನೀವು ಉತ್ತಮ ಸಲಹೆಗಳನ್ನು ಕೊಟ್ಟರೆ ನಾವು ಅದನ್ನು ಪರಿಗಣಿಸುತ್ತೇವೆ. ಈಗ ನಿರ್ಮಿಸಿರುವ ಹೊಸ ವಿವಿಗಳಲ್ಲಿ ಹೋಗಿ ಕೆಲಸ ಮಾಡಲು ಯಾವುದೇ ಪ್ರಾಧ್ಯಾಪಕರು ಮುಂದೆ ಬರುತ್ತಿಲ್ಲ. ಒಬ್ಬರನ್ನು ಉಪಕುಲಪತಿಗಳನ್ನಾಗಿ ಹಾಗೂ ಮತ್ತೊಬ್ಬರನ್ನು ರಿಜಿಸ್ಟ್ರಾರ್ ಮಾಡಿದರೆ ಅದು ವಿಶ್ವವಿದ್ಯಾಲಯವಾಗುತ್ತದೆಯೇ?” ಎಂದು ಪ್ರಶ್ನಿಸಿದರು.

“ನೀವುಗಳು ವಿವಿಯನ್ನು ವಿಭಾಗ ಮಾಡಿದ್ದೀರಿ. ನಾವು ಆ ವಿವಿಗಳನ್ನು ವಜಾಗೊಳಿಸಲು ಆಗುವುದಿಲ್ಲ. ಹೀಗಾಗಿ ನಾವು ಅವುಗಳನ್ನು ಪ್ರಮುಖ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ. ನಮ್ಮ ಹಾಗೂ ನಿಮ್ಮ ನಡುವೆ ಇರುವ ವ್ಯತ್ಯಾಸ ಎಂದರೆ ನೀವು ಜನರನ್ನು ಒಡೆಯುತ್ತೀರಿ, ನಾವು ಜನರನ್ನು ಒಟ್ಟುಗೂಡಿಸುತ್ತೇವೆ” ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಾತಿನಲ್ಲೇ ತಿವಿದರು.

ನಂತರ ಆರ್.ಅಶೋಕ್ ಅವರು ಮಾತನಾಡುತ್ತಾ, ಡಿ.ಕೆ. ಶಿವಕುಮಾರ್ ಅವರ ಹೃದಯ ಒಳ್ಳೆಯದೇ ಇರಬಹುದು, ಆದರೆ ಚಲನಚಿತ್ರ ರಂಗದ ಕಲಾವಿದರ ಮೇಲೆ ತೋರಿರುವ ನಟ್ಟು ಬೋಲ್ಟು ಭಾಷೆ ಸರಿಯಲ್ಲ ಎಂದು ತಿಳಿಸಿದರು. ಈ ವೇಳೆ ಮಧ್ಯೆ ಮಾತನಾಡಿದ ಅಶ್ವತ್ಥ್ ನಾರಾಯಣ ಅವರು ಇಂತಹ ಭಾಷೆ ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಬಳಸುವಂತಹದ್ದು, ಕರ್ನಾಟಕದಲ್ಲಿ ಬಳಸಬಾರದು ಎಂದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಶಿವಕುಮಾರ್ ಅವರು, “ನೀವು ರಾಮನಗರದಲ್ಲಿ ಬಳಸಿದ ಭಾಷೆ ಎಂತಹದ್ದು? ಗಂಡಸುತನದ ಬಗ್ಗೆ ಮಾತನಾಡಿದ್ದು ಸರಿಯೇ? ಗಂಡಸುತನದ ಬಗ್ಗೆ ಮಾತನಾಡಿ ಅಲ್ಲಿ ಒಂದು ಪಕ್ಷದ ಕಚೇರಿ ಆರಂಭಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ” ಎಂದು ತಿರುಗೇಟು ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 11T134950.979

ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

by ದಿಶಾ ಕೆ. ಎಸ್.
July 11, 2026 - 2:57 pm
0

Web Photo Editor 2026 07 11T134950.979

ಮಾತು ತಪ್ಪಿದ್ರಾ ಪ್ರಜ್ವಲ್..? ಸಿಕ್ಸ್‌‌ಪ್ಯಾಕ್‌‌ ಸೀಕ್ರೆಟ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 2:13 pm
0

Web Photo Editor 2026 07 11T123932.149

ಸಿನಿಪ್ರಿಯರಿಗೆ ಸಿಹಿಸುದ್ದಿ: ‘ರಾಮಾಯಣ’ ಟ್ರೇಲರ್ ರಿಲೀಸ್ ಡೇಟ್ ಅನೌನ್ಸ್

by ದಿಶಾ ಕೆ. ಎಸ್.
July 11, 2026 - 1:39 pm
0

Web Photo Editor 2026 07 11T123932.149

GBA ಚುನಾವಣೆ ಯಾವಾಗ?: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

by ದಿಶಾ ಕೆ. ಎಸ್.
July 11, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version