• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡ್ತಿಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 7:25 pm
in Flash News, ಕರ್ನಾಟಕ
0 0
0
111 (2)

ಬೆಂಗಳೂರು : “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT

“ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಡು ನೋಡುವುದಾಗರೆ, ವಿದ್ಯಾರ್ಥಿಗಳು ಮೈಸೂರು ವಿವಿ ಹೆಸರಲ್ಲಿ ಪದವಿ ಪಡೆಯುದಕ್ಕೂ, ಬೇರೆ ಇತರೆ ವಿವಿ ಹೆಸರಲ್ಲಿ ಪದವಿ ಪ್ರಮಾಣಪತ್ರ ಪಡೆಯುವುದಕ್ಕೆ ಎಷ್ಟು ವ್ಯತ್ಯಾಸವಿದೆ” ಎಂದು ವಿವರಿಸಿದರು.

“ಯಡಿಯೂರಪ್ಪನವರ ಪುತ್ರ ಸದನದಲ್ಲಿ ಇದ್ದಾರೆ. ಅವರ ಸಹೋದರಿಯ ಪುತ್ರ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಲು ಮುಂದಾದಾಗ. ಅವರು ಪಿಇಎಸ್ ಶಿಕ್ಷಣ ಸಂಸ್ಧೆಯಲ್ಲಿ ಓದಿದ್ದರು. ಅದು ಉತ್ತಮ ಸಂಸ್ಥೆಯಾದರೂ ಅದು ಅಧಿಕೃತ ವಿವಿಯಲ್ಲ ಎಂಬ ಕಾರಣಕ್ಕೆ ಅವರಿಗೆ ವಿದೇಶಿ ವಿವಿಯಲ್ಲಿ ಪ್ರವೇಶಾತಿ ನಿರಾಕರಿಸಲಾಗಿತ್ತು. ಎಸ್.ಎಂ ಕೃಷ್ಣ ಅವರು ವಿದೇಶಾಂಗ ಸಚಿವರಾಗಿದ್ದಾಗ ಅನೇಕ ಪ್ರಯತ್ನಗಳನ್ನು ಮಾಡಿ ಕೊನೆಗೆ ಅಲ್ಲಿ ಪ್ರವೇಶಾತಿ ಸಿಕ್ಕಿತು. ಇದು ಕೇವಲ ಒಂದು ಉದಾಹರಣೆಯಷ್ಟೇ. ಬೆಂಗಳೂರು ವಿವಿ, ಮೈಸೂರು ವಿವಿ ಪ್ರತಿಷ್ಠಿತ ವಿವಿಗಳಾಗಿವೆ. ಈ ವಿವಿಗಳ ಜಾರಿ ಕಾರ್ಯಸಾಧುವಲ್ಲ ಎಂದು ವಿಲೀನ ಮಾಡುತ್ತಿದ್ದೇವೆಯಷ್ಟೇ. ಈ ವಿಚಾರವಾಗಿ ನಾವು ಸಮಿತಿಯನ್ನು ರಚಿಸಿ ಅಧ್ಯಯನ ನಡೆಸಿದ್ದೇವೆ” ಎಂದು ಹೇಳಿದರು.

“ಡೈಲಾಗ್ ಸಂಪೂರ್ಣವಾಗಿ ಹೇಳಿ: ಅಶೋಕ್ ಒತ್ತಾಯ”

“ನಾನು ಕೂಡ ಶಿಕ್ಷಣದ ಮೇಲೆ ಆಸಕ್ತಿ ಹೊಂದಿರುವವನೆ” ಎಂದು ಡಿ.ಕೆ. ಶಿವಕುಮಾರ್ ಅವರು ಹೇಳಿದಾಗ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ನಿಮ್ಮ ಡೈಲಾಗ್ ಅನ್ನು ಮತ್ತೊಮ್ಮೆ ಸಂಪೂರ್ಣವಾಗಿ ಹೇಳಿ ಎಂದು ಒತ್ತಾಯಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಇದು ಕೇವಲ ಡೈಲಾಗ್ ಅಲ್ಲ. ನೀವು ಕಳುಹಿಸಿದ ತಿಹಾರ್ ಜೈಲಿಂದ ಬಂದ ನಂತರ ನಾನು ಪಕ್ಷದ ಕಚೇರಿಯಲ್ಲಿ ಈ ಮಾತನ್ನು ಹೇಳಿದ್ದೆ. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ನಾನು ರಾಜಕಾರಣಿ. ನಾನು ವಿದ್ಯಾರ್ಥಿಯಾಗಿದ್ದಾಗ ಹೆಚ್ಚು ಓದಲಿಲ್ಲ. ಫೈನಲ್ ಇಯರ್ ಡಿಗ್ರಿ ಮಾಡುವಾಗ ಪಕ್ಷ ನನ್ನನ್ನು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿತು. ನಂತರ 47ನೇ ವಯಸ್ಸಿಗೆ ಪದವಿ ಮಾಡಿದೆ” ಎಂದು ವಿರೋಧ ಪಕ್ಷದ ನಾಯರ ಆಸೆ ಈಡೇರಿಸಿದರು.

ಮಾತು ಮುಂದುವರಿಸಿದ ಶಿವಕುಮಾರ್ ಅವರು, “ನನಗೆ ಶಿಕ್ಷಣ ಕ್ಷೇತ್ರದ ಮೇಲೆ ಹೆಚ್ಚು ಆಸಕ್ತಿ ಇದೆ. ಈ ವಿಚಾರದಲ್ಲಿ ನೀವು ಉತ್ತಮ ಸಲಹೆಗಳನ್ನು ಕೊಟ್ಟರೆ ನಾವು ಅದನ್ನು ಪರಿಗಣಿಸುತ್ತೇವೆ. ಈಗ ನಿರ್ಮಿಸಿರುವ ಹೊಸ ವಿವಿಗಳಲ್ಲಿ ಹೋಗಿ ಕೆಲಸ ಮಾಡಲು ಯಾವುದೇ ಪ್ರಾಧ್ಯಾಪಕರು ಮುಂದೆ ಬರುತ್ತಿಲ್ಲ. ಒಬ್ಬರನ್ನು ಉಪಕುಲಪತಿಗಳನ್ನಾಗಿ ಹಾಗೂ ಮತ್ತೊಬ್ಬರನ್ನು ರಿಜಿಸ್ಟ್ರಾರ್ ಮಾಡಿದರೆ ಅದು ವಿಶ್ವವಿದ್ಯಾಲಯವಾಗುತ್ತದೆಯೇ?” ಎಂದು ಪ್ರಶ್ನಿಸಿದರು.

“ನೀವುಗಳು ವಿವಿಯನ್ನು ವಿಭಾಗ ಮಾಡಿದ್ದೀರಿ. ನಾವು ಆ ವಿವಿಗಳನ್ನು ವಜಾಗೊಳಿಸಲು ಆಗುವುದಿಲ್ಲ. ಹೀಗಾಗಿ ನಾವು ಅವುಗಳನ್ನು ಪ್ರಮುಖ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ. ನಮ್ಮ ಹಾಗೂ ನಿಮ್ಮ ನಡುವೆ ಇರುವ ವ್ಯತ್ಯಾಸ ಎಂದರೆ ನೀವು ಜನರನ್ನು ಒಡೆಯುತ್ತೀರಿ, ನಾವು ಜನರನ್ನು ಒಟ್ಟುಗೂಡಿಸುತ್ತೇವೆ” ಎಂದು ವಿರೋಧ ಪಕ್ಷಗಳ ನಾಯಕರಿಗೆ ಮಾತಿನಲ್ಲೇ ತಿವಿದರು.

ನಂತರ ಆರ್.ಅಶೋಕ್ ಅವರು ಮಾತನಾಡುತ್ತಾ, ಡಿ.ಕೆ. ಶಿವಕುಮಾರ್ ಅವರ ಹೃದಯ ಒಳ್ಳೆಯದೇ ಇರಬಹುದು, ಆದರೆ ಚಲನಚಿತ್ರ ರಂಗದ ಕಲಾವಿದರ ಮೇಲೆ ತೋರಿರುವ ನಟ್ಟು ಬೋಲ್ಟು ಭಾಷೆ ಸರಿಯಲ್ಲ ಎಂದು ತಿಳಿಸಿದರು. ಈ ವೇಳೆ ಮಧ್ಯೆ ಮಾತನಾಡಿದ ಅಶ್ವತ್ಥ್ ನಾರಾಯಣ ಅವರು ಇಂತಹ ಭಾಷೆ ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಬಳಸುವಂತಹದ್ದು, ಕರ್ನಾಟಕದಲ್ಲಿ ಬಳಸಬಾರದು ಎಂದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಶಿವಕುಮಾರ್ ಅವರು, “ನೀವು ರಾಮನಗರದಲ್ಲಿ ಬಳಸಿದ ಭಾಷೆ ಎಂತಹದ್ದು? ಗಂಡಸುತನದ ಬಗ್ಗೆ ಮಾತನಾಡಿದ್ದು ಸರಿಯೇ? ಗಂಡಸುತನದ ಬಗ್ಗೆ ಮಾತನಾಡಿ ಅಲ್ಲಿ ಒಂದು ಪಕ್ಷದ ಕಚೇರಿ ಆರಂಭಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ” ಎಂದು ತಿರುಗೇಟು ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version