ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆಪ್ ಕಡ್ಡಾಯ, 10 ಜನರಿಗೆ ಒಬ್ಬ ಮಾರ್ಗದರ್ಶಿ

WhatsApp Image 2026 04 17 at 10.13.08

ಬೆಂಗಳೂರು: ರಾಜ್ಯದ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸ್ಪಷ್ಟಪಡಿಸಿದರು.

ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌.ಓ.ಪಿ.) ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹೊಸ ನಿಯಮಗಳ ಬಗ್ಗೆ ವಿವರಿಸಿದರು.

ಮುಖ್ಯ ನಿಯಮಗಳು:

ಒಬ್ಬ ವ್ಯಕ್ತಿ ಮಾತ್ರ ನೋಂದಾಯಿಸಿದ್ದರೂ ಗೈಡ್ ಸೌಲಭ್ಯವನ್ನು ಒದಗಿಸಲಾಗುವುದು. ಗೈಡ್ ಇಲ್ಲದೆ ಯಾರಿಗೂ ಚಾರಣಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಸಚಿವರು ಒತ್ತಿ ಹೇಳಿದರು.

 

 

ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆಯಾಗಿ 3 ದಿನಗಳ ಕಾಲ ಕಾಡಿನಲ್ಲಿ ಕಳೆಯುವಂತಾದ ಘಟನೆ ಹಾಗೂ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ಬಾಲಕಿ ನಾಪತ್ತೆಯಾಗಿ ಶವವಾಗಿ ಪತ್ತೆಯಾದ ಘಟನೆಗಳ ಹಿನ್ನೆಲೆಯಲ್ಲಿ ಈ ಎಸ್‌.ಓ.ಪಿ. ರೂಪಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು.

ಇತರ ಮುಖ್ಯ ನಿಯಮಗಳು:

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಸ್‌.ಓ.ಪಿ. ಸಿದ್ಧಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದರು. ಎಲ್ಲ ಚಾರಣ ಪಥಗಳನ್ನು https://aranyavihaara.karnataka.gov.in/ ವೆಬ್‌ಸೈಟ್‌ನಲ್ಲಿ ಸೇರ್ಪಡೆಗೊಳಿಸಿ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸೂಚಿಸಿದ್ದಾರೆ.

Exit mobile version