ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ: ಹವಾಮಾನ ಇಲಾಖೆ ಎಚ್ಚರಿಕೆ

Untitled design 2026 04 01T070948.173

ಬೆಂಗಳೂರು: ಬೇಸಿಗೆಯ ಬಿಸಿಲ ಬೇಗೆಯ ನಡುವೆಯೇ ,ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಹೈ-ಅಲರ್ಟ್ ಘೋಷಿಸಿದೆ.

ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ವಿಶೇಷವಾಗಿ ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಮತ್ತು ಹಾಸನದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ತಾಪಮಾನದ ವಿವರ

ರಾಜ್ಯದಲ್ಲಿ ಅತಿ ಹೆಚ್ಚು ತಾಪಮಾನ ರಾಯಚೂರಿನಲ್ಲಿ ದಾಖಲಾಗಿದ್ದು, ಇಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಉಳಿದಂತೆ ಉತ್ತರ ಕರ್ನಾಟಕದ ಬಳ್ಳಾರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ತಾಪಮಾನ 36 ಡಿಗ್ರಿ ಆಸುಪಾಸಿನಲ್ಲಿದೆ.

ಪ್ರಮುಖ ನಗರಗಳ ತಾಪಮಾನ ವಿವರ (ಡಿಗ್ರಿ ಸೆಲ್ಸಿಯಸ್‌ನಲ್ಲಿ):
ನಗರ ಗರಿಷ್ಠ ಕನಿಷ್ಠ ನಗರ ಗರಿಷ್ಠ ಕನಿಷ್ಠ
ಬೆಂಗಳೂರು 33 19 ಹುಬ್ಬಳ್ಳಿ 34 23
ಮಂಗಳೂರು 32 26 ಧಾರವಾಡ 34 23
ಮೈಸೂರು 35 21 ಕಲಬುರಗಿ 36 25
ಶಿವಮೊಗ್ಗ 35 22 ರಾಯಚೂರು 37 25
ಮಡಿಕೇರಿ 32 19 ಬೆಳಗಾವಿ 33 22
ಮಂಡ್ಯ 36 21 ವಿಜಯಪುರ 36 24
ಉಡುಪಿ 32 26 ಕಾರವಾರ 31 27
Exit mobile version