ಬೇಸಿಗೆಯ ನಡುವೆ ವರುಣನ ಎಂಟ್ರಿ: ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

Untitled design 2026 03 22T072401.872

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿರುವ ಬೆನ್ನಲ್ಲೇ, ವಾತಾವರಣದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ತಿಂಗಳಲ್ಲೇ ವರುಣನ ಆಗಮನವಾಗುತ್ತಿರುವುದು ಒಂದೆಡೆ ಬಿಸಿಯಿಂದ ತತ್ತರಿಸಿದ ಜನರಿಗೆ ತಂಪೆರೆದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳ ಮೇಲೆ ಮಿಶ್ರ ಪ್ರತಿಕ್ರಿಯೆ ಬೀರಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಂಭವವಿದೆ.

ರಾಜ್ಯದಾದ್ಯಂತ ತಾಪಮಾನದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಕಂಡುಬಂದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು, ಬಳ್ಳಾರಿ, ಬಾಗಲಕೋಟೆ ಮತ್ತು ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 34°C ದಾಖಲಾಗುವ ಮೂಲಕ ಅತಿ ಹೆಚ್ಚು ಶಾಖದ ಅನುಭವವಾಗುತ್ತಿದೆ. ಅದೇ ರೀತಿ ಮಲೆನಾಡಿನ ಭಾಗವಾದ ಚಿಕ್ಕಮಗಳೂರಿನಲ್ಲಿ ಕನಿಷ್ಠ ತಾಪಮಾನ 17°C ಗೆ ಇಳಿಕೆಯಾಗಿದ್ದು, ಮುಂಜಾನೆ ಚಳಿಯ ಅನುಭವವಾಗುತ್ತಿದೆ.

ಪ್ರಮುಖ ನಗರಗಳ ತಾಪಮಾನ ವಿವರ (ಗರಿಷ್ಠ – ಕನಿಷ್ಠ):
ಜನರಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಸಿಡಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಜನರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು ಎಂದು ಸೂಚಿಸಲಾಗಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದ ರೈತರು ಬೆಳೆಗಳ ಸುರಕ್ಷತೆಯ ಬಗ್ಗೆ ಗಮನಹರಿಸಬೇಕಿದೆ. ಹವಾಮಾನ ವೈಪರೀತ್ಯದಿಂದಾಗಿ ಕೆಲವು ಕಡೆ ತಂಪಾದ ಗಾಳಿ ಬೀಸಲಿದ್ದು, ಮಕ್ಕಳು ಮತ್ತು ವೃದ್ದರು ಎಚ್ಚರದಿಂದರಬೇಕು ಎಂದು ಸೂಚಿದಸಲಾಗಿದೆ.

Exit mobile version