ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

Untitled design 2026 02 13T083510.810

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮತ್ತು ಒಣಹವೆಯ ವಾತಾವರಣ ಕಡಿಮೆಯಾದ ಲಕ್ಷಣಗಳು ಕಾಣುತ್ತಿಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಹತ್ತಾರು ದಿನಗಳಿಂದ ಒಣ ಹವೆ ವಾತಾವರಣ ಆವರಿಸಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಚಳಿಯ ಅಬ್ಬರ ಇಂದೂ ಸಹ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದು ಸಂಪೂರ್ಣ ಒಣಹವೆ ಇರಲಿದೆ. ಸಮುದ್ರ ತೀರದ ಜಿಲ್ಲೆಗಳಾಗಿದ್ದರೂ ಸಹ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿದ್ದು, ಬಿಸಿಲಿದ್ದರೂ ಗಾಳಿಯಲ್ಲಿ ಚಳಿಯ ಅಂಶ ಕಂಡುಬರುತ್ತಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂಜಾನೆ ದಟ್ಟ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಏರಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದೆ. ಇಲ್ಲಿನ ಬಯಲು ಸೀಮೆಯಲ್ಲಿ ಬೀಸುವ ಶೀತಗಾಳಿಯಿಂದಾಗಿ ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತಗೊಂಡಿದೆ. ಗದಗ, ಧಾರವಾಡ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಒಣಹವೆಯ ಪರಿಣಾಮವಾಗಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ವರದಿಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಳೆದ ವಾರಕ್ಕೆ ಹೋಲಿಸಿದರೆ ಇಂದು ತುಸು ಸುಧಾರಿಸಿದೆ. ನಗರದಲ್ಲಿ ಇಂದು ಕನಿಷ್ಠ ತಾಪಮಾನ 16°C ಮತ್ತು ಗರಿಷ್ಠ ತಾಪಮಾನ 30°C ದಾಖಲಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸಲಿದೆ.

ಆರೋಗ್ಯದ ಬಗ್ಗೆ ಎಚ್ಚರವಿರಲಿ: ವೈದ್ಯರ ಸಲಹೆ

ಹವಾಮಾನದ ಈ ಹಠಾತ್ ಏರುಪೇರು ಮಕ್ಕಳ ಮತ್ತು ವೃದ್ಧರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಒಣಹವೆಯಿಂದಾಗಿ ಕೆಮ್ಮು, ನೆಗಡಿ ಮತ್ತು ಗಂಟಲು ನೋವಿನ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈದ್ಯರು ಕೆಲವು ಮುನ್ನೆಚ್ಚರಿಕೆಗಳನ್ನು ನೀಡಿದ್ದಾರೆ:

Exit mobile version