ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ

BeFunky collage (33)

ಕರ್ನಾಟಕ ಸರ್ಕಾರವು 2022ರಲ್ಲಿ ಹೊರಡಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದು, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಜನಿವಾರ, ರುದ್ರಾಕ್ಷಿ, ಪೇಟ ಮುಂತಾದ ಧಾರ್ಮಿಕ ಸಂಕೇತಗಳನ್ನು ಧರಿಸುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಹೊಸ ಆದೇಶದ ಮುಖ್ಯಾಂಶಗಳು:

ಸರ್ಕಾರದ ಉದ್ದೇಶ :

ಸರ್ಕಾರವು “ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರಬೇಕು” ಎಂದು ಹೇಳಿದೆ. ಯಾವುದೇ ಧಾರ್ಮಿಕ ಆಚರಣೆಯು ವಿದ್ಯಾರ್ಥಿಯ ಶಿಕ್ಷಣ ಹಕ್ಕಿಗೆ ಅಡ್ಡಿಯಾಗಬಾರದು ಎಂಬ ನಿಲುವನ್ನು ತೆಗೆದುಕೊಳ್ಳಲಾಗಿದೆ. ಜಗಜ್ಯೋತಿ ಬಸವಣ್ಣನವರ ‘ಇವ ನಮ್ಮವ’ ತತ್ವವನ್ನು ಉಲ್ಲೇಖಿಸಿ, ಶಿಕ್ಷಣ ಸಂಸ್ಥೆಗಳು ಸಾಮಾಜಿಕ ಸಾಮರಸ್ಯ ಮತ್ತು ಒಳಗೊಳ್ಳುವಿಕೆಯ ಕೇಂದ್ರಗಳಾಗಬೇಕು ಎಂದು ಒತ್ತಾಯಿಸಲಾಗಿದೆ.

ಈ ಹೊಸ ಮಾರ್ಗಸೂಚಿಗಳು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ಅನ್ವಯವಾಗುತ್ತವೆ.

ಈ ನಿರ್ಧಾರವು ಕಳೆದ ನಾಲ್ಕು ವರ್ಷಗಳಿಂದ ಚರ್ಚೆಯಲ್ಲಿದ್ದ ಹಿಜಾಬ್ ವಿವಾದಕ್ಕೆ ಅಂತ್ಯ ಹಾಕಿದೆ ಎಂದು ಸರ್ಕಾರ ವಿವರಿಸಿದೆ.

Exit mobile version