ಉದ್ಯಮಿ ಸಿಜೆ ರಾಯ್ ಪ್ರಕರಣ: ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

Untitled design 2026 02 02T154939.525

ಕೇರಳ: ದೇಶದ ಪ್ರಮುಖ ಉದ್ಯಮ ಸಂಸ್ಥೆಯಾದ ಕಾನ್ಸಿಡೆಂಟ್ ಗ್ರೂಪ್ (Confident Group) ಮುಖ್ಯಸ್ಥ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಘಟನೆಯ ಹಿನ್ನೆಲೆ

ಜನವರಿ 30ರಂದು ಬೆಂಗಳೂರಿನಲ್ಲಿರುವ ಸಿಜೆ ರಾಯ್ ಅವರ ಕಚೇರಿಯ ಮೇಲೆ ಕೇರಳದ ಆದಾಯ ತೆರಿಗೆ (IT) ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದರು. ಕಚೇರಿಯಲ್ಲಿ ಕೆಲವು ದಾಕಲೆಗಳನ್ನ ಪರಿಶೀಲಿಸಿ ಅವುಗಳನ್ನ ವಶಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದಾಗ, ಅಧಿಕಾರಿಗಳು ಕೇಳಿದ ಕೆಲವು ದಾಖಲೆಗಳನ್ನು ತರಲು ರಾಯ್ ಅವರು ತಮ್ಮ ವೈಯಕ್ತಿಕ ಚೇಂಬರ್‌ಗೆ ತೆರಳಿದ್ದರು. ಆದರೆ, ಅಲ್ಲಿಯೇ ತಮ್ಮ ಪರವಾನಗಿ (ಲೈಸೆನ್ಸ್‌) ಪಡೆದ ಪಿಸ್ತೂಲ್‌ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯು ಐಟಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಹಲವು ಅನುಮಾನಗಳನ್ನ ಹುಟ್ಟುಹಾಕಿದೆ.

ತೆರಿಗೆ ವ್ಯವಸ್ಥೆಯ ಮೇಲಿನ ಕಪ್ಪು ಚುಕ್ಕೆ-ಪಿಣರಾಯಿ ವಿಜಯನ್

ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಬ್ಬ ಯಶಸ್ವಿ ಉದ್ಯಮಿ ಈ ರೀತಿ ಸಾವನ್ನಪ್ಪಿರುವುದು ಭಾರತದ ತೆರಿಗೆ ಆಡಳಿತ ವ್ಯವಸ್ಥೆಯ ಮೇಲೆ ಬಿದ್ದ ಕಪ್ಪು ಚುಕ್ಕೆಯಾಗಿದೆ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ. ಐಟಿ ಅಧಿಕಾರಿಗಳು ದಾಳಿಯ ಸಂದರ್ಭದಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳನ್ನು (Protocols) ಗಾಳಿಗೆ ತೂರಿದ್ದಾರೆ ಎಂಬ ವರದಿಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಐಟಿ ಅಧಿಕಾರಿಗಳ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳು

ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಅಧಿಕಾರಿಗಳ ಹೊಣೆಗಾರಿಕೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ:

ನ್ಯಾಯಾಂಗ ತನಿಖೆಗೆ ಒತ್ತಾಯ

ಮಾಧ್ಯಮ ವರದಿಗಳು ಸತ್ಯವಾಗಿದ್ದರೆ, ಇದು ಐಟಿ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಗಂಭೀರ ಲೋಪವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ, ಸತ್ಯಾಸತ್ಯತೆಯನ್ನು ಹೊರತರಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಗತ್ಯ ಎಂದು ಅವರು ಮನವಿ ಮಾಡಿದ್ದಾರೆ.

Exit mobile version