ಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವವನ್ನು ತರುವಂತಹ ಕೆಲಸ ಮಾಡಬಾರದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಹೇಳಿದ್ದಾರೆ.
ಸದನದಲ್ಲಿ ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಸಭಾಧ್ಯಕ್ಷರು ನೀಡುವ ಸೂಚನೆಗಳನ್ನು ಪಾಲನೆ ಮಾಡಬೇಕು. ಸದನದಲ್ಲಿ ವಿರೋಧ ಪಕ್ಷದ ಶಾಸಕರು ಸ್ವಾಭಾವಿಕವಾಗಿ ವಿರೋಧ ವ್ಯಕ್ತ ಪಡಿಸುವುದು ಸಹಜ ಆದರೆ ವಿರೋಧ ಪಕ್ಷದ ಸದಸ್ಯರು ಅಗೌರವವನ್ನು ತರುವಂತಹ ಕೆಲಸ ಮಾಡಿದ್ದಾರೆ.
ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರಕ್ಕೂ ಲೆಕ್ಕಿಸದೆ ಸದನದಲ್ಲಿ ಅತಿರೇಕವಾಗಿ ವರ್ತಿಸಿದ ಕಾರಣ ಹಾಗೂ ಸಭಾಧ್ಯಕ್ಷರು ಬಿಲ್ಗಳ ಮಂಡನೆ ಮಾಡುವ ಸಂದರ್ಭದಲ್ಲಿ ಕಾಗದ ಪತ್ರಗಳನ್ನು ಅವರ ಮೇಲೆ ಎಸೆಯುವುದು ಸರಿಯಲ್ಲಾ ಎಂದು ಹೇಳಿದ್ದಾರೆ.
ಶಾಸಕರು ಅವರ ಸಮಸ್ಯೆಗಳಿಗೆ ಪರಿಹಾರವನ್ನು ತೆಗೆದುಕೊಳ್ಳುವ ಬಗ್ಗೆ ಮಾತನಾಡಬೇಕು ಅದನ್ನು ಬಿಟ್ಟು ಅವರೇ ಈ ರೀತಿಯಾಗಿ ವರ್ತಿಸಿದರೆ ಕ್ಷೇತ್ರದಲ್ಲಿ ಜನರ ಸಮಸ್ಯೆಗಳಿಗೆ ಯಾವರೀತಿ ಸ್ಪಂದಿಸುತ್ತಾರೆ ಹೇಳಿ ಎಂದರು.
ಸದನದಲ್ಲಿ ಚರ್ಚೆಗಳು ನಡೆಯುತ್ತಿದ್ದಂತಹ ಸಂದರ್ಭದಲ್ಲಿ ಶಾಸಕರ ವರ್ತನೆ ಸರಿ ಇಲ್ಲದ ಕಾರಣ ಸಭಾಧ್ಯಕ್ಷರು ಕೆಲವು ಶಾಸಕರನ್ನು ಅಮಾನತು ತೆಗೆದುಕೊಂಡು ತೀರ್ಮಾನ ಸರಿಯಾಗಿದೆ ಎಂದರು. ಸದನದ ಗೌರವ ಕಾಪಾಡುವುದು ಎಲ್ಲಾ ಶಾಸಕರ ಕರ್ತವ್ಯ ಎಂದರು.
18 ಬಿಜೆಪಿ ಶಾಸಕರು 6 ತಿಂಗಳ ಕಾಲ ಸಸ್ಪೆಂಡ್
ಬಿಜೆಪಿ 18 ಶಾಸಕರನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ. ಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿಸಿ, ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು.
ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್ ಹೊರಡಿಸಿದರು. ಬಳಿಕ ಮಾರ್ಷಲ್ಸ್ ಮುನಿರತ್ನರನ್ನು ಸೇರಿ, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.