ಹಾಸ್ಟೆಲ್‌‌ನಲ್ಲಿ ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ

Untitled design 2025 05 29t141227.252

ಕೊಡಗು: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ. ರಾಯಚೂರು ಮೂಲದ 19 ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ, ತನ್ನ ಕಾಲೇಜಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೇಜಸ್ವಿನಿ, ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಳು. ಪ್ರಥಮ ವರ್ಷದ ಎ.ಐ.ಎಂ.ಎಲ್ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ಯುವತಿ, ತನ್ನ ಶೈಕ್ಷಣಿಕ ಜೀವನದಲ್ಲಿ ಎದುರಿಸಿದ ಒತ್ತಡವನ್ನು ತಾಳಲಾರದೆ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ.

ಈ ಘಟನೆಯ ಒಂದು ದಿನ ಮೊದಲು, ತೇಜಸ್ವಿನಿ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಳು. ಆ ದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಮರುದಿನವೂ ಸಿಹಿತಿಂಡಿಗಳನ್ನು ಹಂಚಿದ್ದಳು. ಆ ದಿನ ಸಂಜೆ 4 ಗಂಟೆ ಸುಮಾರಿಗೆ ತರಗತಿಗೆ ಆಗಮಿಸಿದ ನಂತರ, ತೇಜಸ್ವಿನಿ ತನ್ನ ಹಾಸ್ಟೆಲ್ ಕೊಠಡಿಗೆ ತೆರಳಿದ್ದಳು. ಸುಮಾರು 4:30 ಗಂಟೆಗೆ ಆಕೆಯ ಸಹಪಾಠಿಯೊಬ್ಬಳು ಕೊಠಡಿಗೆ ಬಂದಾಗ, ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ನೇಹಿತರು ಎಷ್ಟೇ ಕೂಗಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿದರು. ಬಾಗಿಲನ್ನು ತೆಗೆದು ನೋಡಿದಾಗ, ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಯಿತು.

ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುವಾಗ ತೇಜಸ್ವಿನಿಯ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಅವಳು ತನಗೆ ಮುಂದೆ ಓದಲು ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾಳೆ. ಆರು ಬ್ಯಾಕ್ಲಾಗ್ ಇರುವುದರಿಂದ ಓದುವುದರಲ್ಲಿ ಆಸಕ್ತಿ ಕಳೆದುಕೊಂಡಿದ್ದೇನೆ ಎಂದು ಡೆತ್ ನೋಟ್‌‌ನಲ್ಲಿ ಬರೆದಿದ್ದಾಳೆ.

Exit mobile version