ಯುಗಾದಿ, ರಂಜಾನ್ ಹಬ್ಬಕ್ಕೆ ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್‌ನಲ್ಲಿ ಡಿಸ್ಕೌಂಟ್

Untitled design 2025 03 26t162335.093

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ವಿಶೇಷ ಬಸ್‌ಗಳು ಮಾರ್ಚ್ 28ರಿಂದ 30ರ ತನಕ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಿಗೆ ಸಂಚಾರ ನಡೆಸಲಿವೆ. ಮುಂಗಡ ಟಿಕೇಟು ಬುಕ್ಕಿಂಗ್‌ಗೆ ಶೇಕಡ 10 ರಷ್ಟು ರಿಯಾಯಿತಿಯನ್ನು KSRTC ನೀಡುತ್ತಿದೆ.

ವಿಶೇಷ ಬಸ್‌ಗಳ ವಿವರ:

KSRTC ಪ್ರಕಟಣೆಯ ಪ್ರಕಾರ, ಮಾರ್ಚ್ 30ರಂದು ಚಂದ್ರಮಾನ ಯುಗಾದಿ ಮತ್ತು ಮಾರ್ಚ್ 31ರಂದು ರಂಜಾನ್ ಹಬ್ಬವನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ತಮ್ಮ ಹುಟ್ಟೂರಿಗೆ ತೆರಳುವ ಸಾಧ್ಯತೆಯಿದೆ. ಅವರ ಅನುಕೂಲಕ್ಕಾಗಿ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ, ಸ್ಯಾಟಲೈಟ್ ಬಸ್ ನಿಲ್ದಾಣ, ಮತ್ತು ಶಾಂತಿನಗರ BMTC ಬಸ್ ನಿಲ್ದಾಣನಿಂದ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ನಗರಗಳಿಗೆ ವಿಶೇಷ ಬಸ್‌ಗಳು ಸಂಚರಿಸುತ್ತವೆ.

ADVERTISEMENT
ADVERTISEMENT
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಬೇರೆ ಜಿಲ್ಲೆಗಳಿಗೆ ಬಸ್‌ ವ್ಯವಸ್ಥೆ

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್‌ ಸೇವೆ.

ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಸಂಚಾರ:

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಿಗೆ ಸ್ಯಾಟಲೈಟ್ ನಿಲ್ದಾಣದಿಂದ ವಿಶೇಷ ಬಸ್‌ಗಳ ಸಂಚರಿಸಲಿದೆ. 

ಶಾಂತಿನಗರದಿಂದ ಹೊರರಾಜ್ಯದ ಸಂಪರ್ಕ:

ತಮಿಳುನಾಡು ಮತ್ತು ಕೇರಳದ ಪ್ರಮುಖ ನಗರಗಳು: ಮಧುರೈ, ಕುಂಭಕೋಣ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಕಡೆಗಳಿಗೆ ಶಾಂತಿನಗರ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳ ಸಂಚಾರ ನಡೆಸಲಿವೆ.

ಮುಂಗಡ ಬುಕ್ಕಿಂಗ್ ಹಾಗೂ ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. KSRTC ಆಫ್‌ಫಿಷಿಯಲ್ ವೆಬ್‌ಸೈಟ್ https://ksrtc.in/ ಮೂಲಕ ಇ-ಟಿಕೇಟ್‌ಗಳನ್ನು ಕಾಯ್ದಿರಿಸಬಹುದು. ಮುಂಗಡ ಬುಕ್ಕಿಂಗ್‌ನಲ್ಲಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಕಾಯ್ದಿರಿಸಿದರೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೆಯೇ ಹೋಗುವ ಹಾಗೂ ಬರುವ ಟಿಕೇಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ ಪ್ರಯಾಣದ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ದೊರೆಯಲಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಕ್ಕೆ ಹೋಗುವ ಮುನ್ನ ಮುಂಗಡ ಟಿಕೇಟ್‌ನಲ್ಲಿ ನಮೂದಿಸಿದ ಪಿಕ್‌ಅಪ್ ಪಾಯಿಂಟ್‌ಗಳ ವಿವರಗಳನ್ನು ಪರಿಶೀಲಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ KSRTC ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬಹುದು.

ಈ ಹಬ್ಬದ ಸಮಯದಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುವುದರಿಂದ ಮುಂಗಡ ಟಿಕೇಟ್‌ಗಳನ್ನು ಕಾಯ್ದಿರಿಸುವಂತೆ KSRTC ಪ್ರಕಟಣೆಯಲ್ಲಿ ಮನವಿ ಮಾಡಿದೆ.

Exit mobile version