ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರವಲಯದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಇಬ್ಬರು ಯುವ ಪ್ರೇಮಿಗಳು ತಾವು ಓಡಿಸುತ್ತಿದ್ದ ಆಟೋ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುನವಳ್ಳಿ ಪಟ್ಟಣದ ನಿವಾಸಿಗಳಾದ ರಾಘವೇಂದ್ರ ಜಾಧವ್ (28) ಮತ್ತು ರಂಜೀತಾ ಚೋಬರಿ (26) ಎಂಬ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ದುರಂತದ ಹಿನ್ನೆಲೆಯಲ್ಲಿ ರಾಘವೇಂದ್ರ ಮತ್ತು ರಂಜೀತಾ ಹಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ಈ ಜೋಡಿಯ ಮದುವೆಗೆ ರಂಜೀತಾ ಅವರ ಮನೆಯವರು ಸಮ್ಮತಿ ನೀಡಿರಲಿಲ್ಲ. ಇದರಿಂದಾಗಿ, ಕುಟುಂಬದ ಒತ್ತಡದಿಂದ ರಂಜೀತಾ ಅವರನ್ನು ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಲಾಗಿತ್ತು. ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳದ ಕುಟುಂಬದ ನಿರ್ಧಾರದಿಂದ ಮನನೊಂದ ಈ ಜೋಡಿ, ತಮ್ಮ ಜೀವನವನ್ನೇ ಕೊನೆಗೊಳಿಸಿಕೊಳ್ಳುವ ನಿರ್ಧಾರಕ್ಕೆ ಬಂದಿತ್ತು.
ಘಟನೆಯ ದಿನ ಬೆಳಗ್ಗೆ, ರಾಘವೇಂದ್ರ ಮತ್ತು ರಂಜೀತಾ ಒಂದೇ ಆಟೋದಲ್ಲಿ ಚಿಕ್ಕನಂದಿ ಗ್ರಾಮದ ನಿರ್ಜನ ಪ್ರದೇಶಕ್ಕೆ ತೆರಳಿದ್ದರು. ಅಲ್ಲಿ, ಆಟೋದೊಳಗೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು. ಈ ಘಟನೆಯು ಸ್ಥಳೀಯರಿಗೆ ತಿಳಿದು, ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.