• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಅತಿ ಹೆಚ್ಚು ಕೇಸ್ ದಾಖಲಿಸುವಲ್ಲಿ ಮಾದನಾಯಕನಹಳ್ಳಿ ಠಾಣೆಯೇ ಮೊದಲ ಸ್ಥಾನ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 31, 2025 - 8:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 12 31T200930.620

ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ನೆಲಮಂಗಲ: 2025ಕ್ಕೆ ವಿದಾಯ ಹೇಳುವ ಹೊತ್ತಿನಲ್ಲಿ ರಾಜ್ಯಾದ್ಯಂತ ದಾಖಲಾಗಿರುವ ಅಪರಾಧ ಪ್ರಕರಣಗಳ ಲೆಕ್ಕಾಚಾರ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪವಿಭಾಗ ವ್ಯಾಪ್ತಿಗೆ ಬರುವ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಕರ್ನಾಟಕದಲ್ಲೇ ಅತಿ ಹೆಚ್ಚು ಪ್ರಕರಣ ದಾಖಲಾಗಿರುವ ಠಾಣೆಯಾಗಿ ಮೊದಲ ಸ್ಥಾನ ಪಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ವರ್ಷದ ಕೊನೆಯಲ್ಲಿ ಒಟ್ಟು 1283 ಅಪರಾಧ ಪ್ರಕರಣ ದಾಖಲಾಗಿದ್ದು, ಇತರೆ ದೊಡ್ಡ ಜಿಲ್ಲೆಯನ್ನೇ ಹಿಂದಿಕ್ಕಿ ಅಪರಾಧ ಪ್ರಕರಣದಲ್ಲಿ ಕರ್ನಾಟಕದಲ್ಲೇ ಮೊದಲ ಸ್ಥಾನದಲ್ಲಿರುವುದು ಕಳವಳಕಾರಿ ಸಂಗತಿಯಾಗಿದೆ.

RelatedPosts

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

ADVERTISEMENT
ADVERTISEMENT

ಇದಕ್ಕೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನಿಂದಲೇ 175(UDR) ಪ್ರಕರಣ ದಾಖಲಾಗಿದೆ. ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳವು, ಜಾನುವಾರು ಕಳವು, ಮಿಸ್ಸಿಂಗ್ ಸೇರಿದಂತೆ ಒಟ್ಟು 1283 ಪ್ರಕರಣಗಳ ದಾಖಲಾಗಿವೆ. ಈ ಮೂಲಕ ಕರ್ನಾಟಕದಲ್ಲೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಪೊಲೀಸ್‌ ಠಾಣೆಯಾಗಿದೆ.

ಇನ್ನು ಅಪರಾಧದಲ್ಲಿ ದ್ವಿತೀಯ ಸ್ಥಾನ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆ 975, ತೃತೀಯ ಸ್ಥಾನ ವೈಟ್‌ಫೀಲ್ಡ್ ಪೊಲೀಸ್ ಠಾಣೆ 916, ನಾಲ್ಕನೇ ಸ್ಥಾನ ಯಲಹಂಕ ಪೊಲೀಸ್ ಠಾಣೆ 822,ಅದ್ರೆ ರಾಜ್ಯದಲ್ಲೇ ಅತಿ ಕಡಿಮೆ ಪ್ರಕರಣ ದಾಖಲಾದ ಪೊಲೀಸ್ ಪಟ್ಟಿ ನೋಡೊದಾರೆ ಕೊಡಗು ಜಿಲ್ಲೆಯ ಬಾಗಮಂಡಲ ಪೊಲೀಸ್ ಠಾಣೆ. ಈ ಠಾಣೆಯಲ್ಲಿ ಕೇವಲ 18 ಪ್ರಕರಣಗಳು ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ15 ಪ್ರಕರಣ, ಅತಿ ಕಡಿಮೆ ಅಂದ್ರೆ ಉತ್ತರ ಕನ್ನಡ ಜಿಲ್ಲೆಯ ಕದರ ಪೊಲೀಸ್ ಠಾಣೆಯಲ್ಲಿ ವರ್ಷದಲ್ಲಿ ಕೇವಲ 08 ಪ್ರಕರಣ ದಾಖಲಾಗಿವೆ.

ಅಪರಾಧದಲ್ಲಿ ಖ್ಯಾತಿ ಪಡೆದಿರುವ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ. ಅನೇಕ ಜಿಲ್ಲೆಗಳಿಗೆ ಸಂಪರ್ಕ ಹೊಂದಿರುವ ಬೆಂಗಳೂರು ಗೇಟ್‌ವೇ ಕೂಡ ಇದೇ ಆಗಿದೆ. ಇದರಿಂದ ದಾಖಲಾದ ಅಪರಾಧಗಳನ್ನು ಸಮರ್ಪಕವಾಗಿ ತನಿಖೆ ಮಾಡಲು ಸಿಬ್ಬಂದಿಗಳಿಗೆ ಕಷ್ಟವಾಗುತ್ತಿದೆ. ಒಂದು ಪೊಲೀಸ್ ಠಾಣೆಯಲ್ಲಿ ಸಾವಿರಗಟ್ಟಲೇ FIR ದಾಖಲಾದರೆ ತನಿಖೆ ಹೇಗೆ ಸಾಧ್ಯ ? ಎನ್ನುವ ಪ್ರಶ್ನೆ ಉದ್ಭವಿಸುತ್ತವೆ.

ಮಾಹಿತಿ ಪ್ರಕಾರ ನಗರಕ್ಕೆ ಹೊಂದಿಕೊಂಡಂತೆ 77 ಹಳ್ಳಿಗಳು, 35ಕ್ಕೂ ಹೆಚ್ಚು ಲೇಔಟ್​ಗಳು, 20ಕ್ಕೂ ಹೆಚ್ಚು ಗಣ್ಯ ವ್ಯಕ್ತಿಗಳು ವಾಸಿಸುವ ಐಷಾರಾಮಿ ಅಪಾರ್ಟ್ಮೆಂಟ್‌ಗಳು ಸೇರಿದಂತೆ ಸುಮಾರು 5ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚು ಕೂಲಿಕಾರ್ಮಿಕರು ವಾಸಿಸುವ ಸ್ಥಳವೂ ಆಗಿದೆ,
ಇನ್ನೂ ಪೊಲೀಸ್ ಠಾಣೆ ನಿರ್ಮಾಣ ಮಾಡಲು ನಿರ್ದಿಷ್ಟ ಜನಸಂಖ್ಯೆಯು ಭಾರತದಲ್ಲಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ಆದಾಗ್ಯೂ, ಭಾರತ ಸರ್ಕಾರವು ಪೊಲೀಸ್ ಠಾಣೆಗಳ ನಿರ್ಮಾಣಕ್ಕೆ ಸಾಮಾನ್ಯ ಮಾರ್ಗಸೂಚಿಗಳನ್ನು ನೀಡಿದೆ.

ಸಾಮಾನ್ಯವಾಗಿ ಪೊಲೀಸ್ ಠಾಣೆಯು ಒಂದು ಲಕ್ಷದಿಂದ ಐದು ಲಕ್ಷದವರೆಗಿನ ಜನಸಂಖ್ಯೆಯನ್ನು ಹೊಂದಿರಬಹುದು. ಆದಾಗ್ಯೂ, ನಗರ ಪ್ರದೇಶಗಳಲ್ಲಿ ಜನಸಂಖ್ಯೆಯ ಅಧಾರದ ಮೇಲೆ ಹೊಸ ಹೊಸ ಪೊಲೀಸ್ ಠಾಣೆಯನ್ನ ಮಾನದಂಡಗಳ ಅಧಾರದ ಮೇಲೆ ಕಾರ್ಯರಂಭ ಮಾಡಲಾಗಿದೆ. ಇದರ ಹೊರತುಪಡಿಸಿ ಕರ್ನಾಟಕ ರಾಜ್ಯದಲ್ಲಿ, ಪೊಲೀಸ್ ಠಾಣೆಯು ಸಾಮಾನ್ಯವಾಗಿ ಒಂದು ಲಕ್ಷದಿಂದ ಮಿತಿಮೀರಿ ಮೂರು ಲಕ್ಷದವರೆಗಿನ ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ ಪ್ರತಿ ವರ್ಷವೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಒಂದರಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಅತಿಹೆಚ್ಚು ವಾಹನ ಕಳವು, ಮನೆಗಳ್ಳತನ, ಕೊಲೆ, ಸುಲಿಗೆ ಸೇರಿದಂತೆ ಮಿಸ್ಸಿಂಗ್ ಪ್ರಕರಣಗಳ ಸಂಖ್ಯೆ ಈ ಠಾಣೆಯಲ್ಲೇ ಹೆಚ್ಚಾಗಿದೆ ಹೀಗಾಗಿ ಈ ಠಾಣೆಯ ಪ್ರತಿ ಸಿಬ್ಬಂದಿಯ ಪಾಡು ಹೇಳ ತೀರದಂತಾಗಿದೆ. ಬೆಂಗಳೂರು ನಗರಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸೇರಿಸುವ ಅದೇಶವಾಗಿದ್ರು, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ,
ಸಿಬ್ಬಂದಿ ಕೊರತೆ ಮಧ್ಯ ಇಷ್ಟೊಂದು ಪ್ರಮಾಣದಲ್ಲಿ ಎಫ್​ಐಆರ್ ದಾಖಲಾಗಿದ್ದು, ಅವುಗಳನ್ನು ಸಮರ್ಪಕವಾಗಿ, ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ತನಿಖೆ ಮಾಡಲು ಕಷ್ಟಕರವಾಗಿದೆ. ಹೀಗಾಗಿ ಕೇವಲ ಕೇಸ್‌ ದಾಕಲಿಸಲಾಗಿದೆ ಹಿರತು ಯಾವುದೇ ತನಿಖೆ ಮಾಡಲು ಸಾಧ್ಯವಾಗುತ್ತಿಲ್ಲ.

ಎಫ್​ಐಆರ್​ಗಳಿಗೆ ನೊಂದ ದೂರುದಾರರಿಗೆ ಸರಿಯಾದ ರೀತಿಯಲ್ಲಿ ನ್ಯಾಯ ಒದಗಿಸಬೇಕು ಅಂದ್ರೆ ಈ ಪೊಲೀಸ್ ಠಾಣೆ ಬೆಂಗಳೂರು ನಗರಕ್ಕೆ ಸೇರಲೇ ಬೇಕು, ಇಲ್ಲವೇ ಗೃಹ ಇಲಾಖೆ ಈ ಠಾಣೆಗೆ ಹೆಚ್ಚಿನ ಸಿಬ್ಬಂದಿಯನ್ನ ನೇಮಿಸಬೇಕು. ಇಲ್ಲಿನ ಜನಸಂಖ್ಯೆ ಆಧಾರದಲ್ಲಿ ಎರಡರಿಂದ ಮೂರು ಪೊಲೀಸ್ ಠಾಣೆಯಾಗಿ ಡಿವೈಡ್ ಮಾಡಿದ್ರೆ ಕ್ರೈಂ ರೇಟ್ ಕಡಿಮೆ ಮಾಡಬಹುದು. ಅಲ್ಲದೇ ಅನ್ಯಾಯಕ್ಕೊಳಗಾಗಿದವರಿಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸಬಹುದು. ಇದರಿಂದ ಆರೋಪಿಗಳಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ಒದಗಿಸಲು ಸಹಾಯವಾಗುತ್ತದೆ ಎಂದು ಗೃಹ ಇಲಾಖೆಗೆ ಮನವಿ ಮಾಡಲಾಗಿದೆ.

ಈ ಠಾಣಾ ವ್ಯಾಪ್ತಿ ಬಗ್ಗೆ ಗೃಹ ಇಲಾಖೆ ಗಮನಹರಿಸಿ ಇದಕ್ಕೊಂದು ಪರಿಹಾರ ಹುಡುಕಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕಿದೆ. ಆಗ ಮಾತ್ರ ಜನರು ಕೂಡ ನೆಮ್ಮದಿಯಾಗಿ ವಾಸಮಾಡಲು ಆಗುತ್ತೆ. ಖದೀಮರಿಗೂ ಸಹ ಭಯ ಇರುತ್ತೆ. ಆಗ ಆಟೋಮೆಟಿಕ್ ಕ್ರೈಮ್ ರೇಟ್ ಸಹ ಕಂಟ್ರೋಲ್​ಗೆ ಬರುತ್ತೆ. ಸರ್ಕಾರ ಈ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾದುನೋಡಬೇಕಿದೆ.

 

 

| Reported by: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T234117.739
    ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ
    January 16, 2026 | 0
  • Untitled design 2026 01 16T231201.941
    ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ
    January 16, 2026 | 0
  • Untitled design 2026 01 16T223823.105
    ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
    January 16, 2026 | 0
  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
  • Untitled design 2026 01 16T210251.670
    CCL 2026: ಪಂಜಾಬ್ ವಿರುದ್ಧ ಕಿಚ್ಚನ‌ ಪಡೆಗೆ ಭರ್ಜರಿ ಜಯ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version