ಶಿವಮೊಗ್ಗದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Untitled design 2025 07 27t114305.421

ಶಿವಮೊಗ್ಗ: ದುಷ್ಕರ್ಮಿಗಳು ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ತಡರಾತ್ರಿ ನಡೆದಿದೆ. 38 ವರ್ಷದ ಯುವಕ ಮಣಿಕಂಠ ಕೊಲೆಯಾದ ದುರ್ದೈವಿ.

ಮಣಿಕಂಠ, ಗಾರೆ ಕೆಲಸಗಾರರಾಗಿ ಜೀವನ ಸಾಗಿಸುತ್ತಿದ್ದವನು. ತನ್ನ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ ಅವನು, ದಿನನಿತ್ಯದ ಕೆಲಸದಿಂದ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದ. ತಡರಾತ್ರಿ ಯಾರೋ ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ, ದೊಡ್ಡ ಕಲ್ಲಿನಿಂದ ತಲೆ ಮೇಲೆ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ತುಂಗಾನಗರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ಕೊಲೆಗೆ ನಿಖರ ಕಾರಣ ತಿಳಿಯದಿರುವುದರಿಂದ ತೀವ್ರ ತನಿಖೆಯನ್ನು ಆರಂಭಿಸಿದ್ದಾರೆ. ಮಣಿಕಂಠನಿಗೆ ಯಾರಾದರೂ ಶತ್ರುಗಳಿದ್ದರೆ, ಅಥವಾ ಇದು ವೈಯಕ್ತಿಕ ಕಾರಣಕ್ಕಾಗಿ ನಡೆದ ಕೃತ್ಯವೇ ಎಂಬುದನ್ನು ಪೊಲೀಸರು ತಿಳಿಯಲು ಪ್ರಯತ್ನಿಸುತ್ತಿದ್ದಾರೆ.

Exit mobile version