• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ತಲೆಗೆ ಹೂವು ಮುಡಿದು, ಹಣೆಗೆ ಕುಂಕುಮ ಇಟ್ಟು ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿ: ಮುನಿರತ್ನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 25, 2025 - 4:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 08 25t160119.977

ಬೆಂಗಳೂರು (ಆ.25): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದು, ಮರುಪರಿಶೀಲನೆಗೆ ಆಗ್ರಹಿಸಿದ್ದಾರೆ.

ಈ ನಡುವೆ, ಬಾನು ಮುಷ್ತಾಕ್ ಅವರು ಕನ್ನಡ ಭುವನೇಶ್ವರಿ ಕುರಿತು ಹೇಳಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದು, “ಹೇಗಿದ್ದರೂ ಬಾನು ಮುಷ್ತಾಕ್ ಅವರು ಜಾತ್ಯಾತೀತರಲ್ಲವೇ. ತಲೆಗೆ ಹೂವು ಮುಡಿದು, ಹಣೆಗೆ ಕುಂಕುಮ ಧರಿಸಿ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿ” ಎಂದು ಸವಾಲು ಹಾಕಿದ್ದಾರೆ.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

ಬಾನು ಮುಷ್ತಾಕ್ ಅವರು ನಮ್ಮ ನೆಲದ ಮಗಳು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ದಸರಾ ಸಂಭ್ರಮವು ಹಿಂದೂ ಧರ್ಮದ ಹಬ್ಬವಾಗಿದ್ದು, ಅದರ ಸಾಂಪ್ರದಾಯಿಕ ಮಹತ್ವವನ್ನು ಕಾಪಾಡಬೇಕು ಎಂದು ಮುನಿರತ್ನ ಹೇಳಿದ್ದಾರೆ. “ಬಾನು ಮುಷ್ತಾಕ್ ಹಣೆಗೆ ಕುಂಕುಮ, ತಲೆಗೆ ಹೂವು ಮುಡಿದು ಉದ್ಘಾಟನೆ ಮಾಡಲಿ. ಹೇಗಿದ್ದರೂ ಜಾತ್ಯಾತೀತರಲ್ಲವೇ. ಹಿಂದೂ ಧರ್ಮದ ಹಬ್ಬ ಇದು. ಹೀಗಾಗಿ ಕುಂಕುಮ, ಹೂವು ಮುಡಿದು ಕಾರ್ಯಕ್ರಮ ಉದ್ಘಾಟಿಸಲಿ” ಎಂದು ಅವರು ಸವಾಲು ಎಸೆದಿದ್ದಾರೆ. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ದಸರಾ ಮಹೋತ್ಸವವು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದ್ದು, ಪ್ರತಿ ವರ್ಷ ಸೆಪ್ಟೆಂಬರ್-ಅಕ್ಟೋಬರ್ ನಡುವೆ 10 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಬಾನು ಮುಷ್ತಾಕ್ ಅವರ ಕೃತಿ ‘ಎದೆಯ ಹಣತೆ’ಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ಸಿಗುತ್ತಿರುವುದು ಸಂತಸದ ಸಂಗತಿ ಎಂದು ಸಿಎಂ ಹೇಳಿದ್ದಾರೆ. ಅಲ್ಲದೆ, ಬಾನು ಅವರು ರೈತ ಸಂಘಟನೆ, ಕನ್ನಡ ಚಳವಳಿ ಮತ್ತು ಪ್ರಗತಿಪರ ಚಿಂತನೆಯ ಹಿನ್ನೆಲೆಯುಳ್ಳವರು ಎಂದು ಪ್ರಶಂಸಿಸಿದ್ದಾರೆ.

ಆದರೆ, ಬಿಜೆಪಿ ನಾಯಕರು ಈ ಆಯ್ಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು, “ದಸರಾ ಜಾತ್ಯಾತೀತ ಪ್ರತೀಕವಲ್ಲ, ಅದು ಧಾರ್ಮಿಕ ಆಚರಣೆ. ಇಸ್ಲಾಂ ಧರ್ಮದಲ್ಲಿ ಮೂರ್ತಿ ಪೂಜೆಯನ್ನು ಧಿಕ್ಕರಿಸಲಾಗಿದೆ. ಬಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಯನ್ನು ದೇವರು ಎಂದು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಸರ್ಕಾರ ಧಾರ್ಮಿಕ ಸಂಪ್ರದಾಯಗಳನ್ನು ಕೆಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ, “ದಸರಾ ಉದ್ಘಾಟನೆ ಬಾನು ಮುಷ್ತಾಕ್ ಅವರ ಇಸ್ಲಾಂ ನಂಬಿಕೆಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ಇದರ ನಡುವೆ, ಧರ್ಮಸ್ಥಳದ ಕುರಿತು ಮುನಿರತ್ನ ಅವರು ಮಾತನಾಡಿದ್ದು, “ಧರ್ಮಸ್ಥಳದ ಮೇಲೆ ಷಡ್ಯಂತರ ಮಾಡ್ತಾ ಇರೋರೆಲ್ಲಾ ಸಮೀರ್‌ನ ಅಪ್ಪನ ಮಕ್ಕಳು. ಸಮೀರನ ಅಪ್ಪನ ಮಕ್ಕಳು ಧರ್ಮಸ್ಥಳವನ್ನು ಮೆಕ್ಕಾ ಮಾಡಲು ಪ್ಲಾನ್ ಮಾಡಿದ್ದರು. ವೀರೇಂದ್ರ ಹೆಗ್ಗಡೆ ಜೈನ್ ಅಂತಿರಲ್ಲ. ಅವರು ಸತ್ತಾಗಲೂ ಚಿತೆಯನ್ನೆ ಏರೋದು. ನಮ್ಮ ಹಿಂದುಗಳಲ್ಲಿ ಎರಡು ವಿಧ. ಒಂದು ಹೆಣ ಹೂಳೋದು ಇನ್ನೊಂದು ಚಿತೆ. ಹೀಗಾಗಿ ಹೆಗ್ಗಡೆಯವರು ಕೂಡ ನಮ್ಮ ಹಿಂದೂನೇ” ಎಂದು ಹೇಳಿದ್ದಾರೆ.

ಸುಜಾತಾ ಭಟ್ ಕುರಿತು ಮಾತನಾಡಿದ ಮುನಿರತ್ನ, “ಸುಜಾತಾ ಭಟ್ ಒಳ್ಳೆಯ ಕಲಾವಿದೆ. ಅವರು ಮೊದಲೆ ಸಿಕ್ಕಿದ್ರೆ ಒಳ್ಳೆಯ ಪಾತ್ರ ನೀಡಬಹುದಿತ್ತು. ಅವರು ಬೆಸ್ಟ್ ಆಕ್ಟರ್. ನಾನು ಒಬ್ಬ ನಿರ್ಮಾಪಕನಾಗಿ ಹೇಳ್ತಿದ್ದೇನೆ. ಅವರು ಒಳ್ಳೆಯ ನಟಿ. ನಮ್ಮ ಸಿನಿಮಾದಲ್ಲಿ ಸಹ ಕಲಾವಿದರ ಕೊರತೆ ಇದೆ. ಸುಜಾತಾ ಭಟ್ ನೈಜವಾಗಿ ಆಕ್ಟ್ ಮಾಡ್ತಾರೆ” ಎಂದು ಲೇವಡಿ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಕುರಿತು ಪ್ರಶ್ನಿಸಿದ ಮುನಿರತ್ನ, “ಡಿಕೆ ಶಿವಕುಮಾರ್ ಇದನ್ನು ಈಗ ಷಡ್ಯಂತರ ಎಂದು ಹೇಳ್ತಾರೆ. ಮೊದಲೆ ಯಾಕೆ ಇದನ್ನು ಹೇಳಿಲ್ಲ. ಯಾಕೆ ಅನಾಮಿಕನ ವಿಚಾರಣೆ ಮಾಡಿಲ್ಲ” ಎಂದು ಕೇಳಿದ್ದಾರೆ.

ಬಾನು ಮುಷ್ತಾಕ್ ಅವರು ಈ ವಿವಾದಕ್ಕೆ ಪ್ರತಿಕ್ರಿಯಿಸಿ, “ದಸರಾ ಉದ್ಘಾಟನೆಗೆ ಆಹ್ವಾನ ಬಂದಿರುವುದು ಸಂತಸ ತಂದಿದೆ. ನನ್ನ ತಂದೆ ಕೆಆರ್‌ಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು, ಪ್ರತಿ ವರ್ಷ ದಸರಾ ನೋಡಲು ಹೋಗುತ್ತಿದ್ದೆ” ಎಂದು ಹೇಳಿದ್ದಾರೆ. ಆದರೆ, ವಿರೋಧಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (65)
    ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ
    August 10, 2026 | 0
  • ಬಲಿಷ್ಠ (63)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
    August 10, 2026 | 0
  • ಬಲಿಷ್ಠ (61)
    ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
    August 10, 2026 | 0
  • ಬಲಿಷ್ಠ (59)
    ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ
    August 10, 2026 | 0
  • ಬಲಿಷ್ಠ (55)
    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version