• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಾವಣಗೆರೆಯಲ್ಲಿ ಕೇಳಿ ಬಂತು ನಿಗೂಢ ಶಬ್ದ: ಬೆಚ್ಚಿಬಿದ್ದ ಜನರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 10:56 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2025 12 13T225455.218

ದಾವಣಗೆರೆ: ಭಯಂಕರ ಶಬ್ದ ಹಾಗೂ ಕೆಲ ಕ್ಷಣಗಳ ಕಾಲ ಭೂಮಿ ಕಂಪಿಸಿದ ಅನುಭವ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಸುತ್ತಮುತ್ತಲಿನ ಹಲವು ಜಿಲ್ಲೆಗಳ ಗ್ರಾಮಗಳಲ್ಲಿಯೂ ಅನುಭವವಾಗಿರುವುದು ಗ್ರಾಮಸ್ಥರಲ್ಲಿ ಭಯದ ಭೀತಿ ಹೆಚ್ಚಿಸಿದೆ.

ಏಕಾಏಕಿ ಭಾರೀ ಸ್ಫೋಟದ ಶಬ್ದ ಕೇಳಿಬಂದಿದ್ದು, ತಕ್ಷಣವೇ ಭೂಮಿ ಕೆಲ ಸೆಕೆಂಡುಗಳ ಕಾಲ ನಡುಗಿದ ಅನುಭವವಾಗಿದೆ. ಮನೆಯೊಳಗಿದ್ದ ಕೆಲ ಪಾತ್ರೆಗಳು ನೆಲಕ್ಕೆ ಬಿದ್ದಿದ್ದು, ಕೆಲವರು ಗೋಡೆಗಳು ಕಂಪಿಸಿದಂತೆ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ರಸ್ತೆಗಳಲ್ಲಿ ಸಂಚರಿಸುತ್ತಿದ್ದ ವಾಹನಗಳು ಹಾಗೂ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕೂಡ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಿದ್ದಾರೆ.

RelatedPosts

ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು

ಬೆಂಗಳೂರಲ್ಲಿ ಅಂಡಾಣು ಮಾರಾಟ ದಂಧೆ..? ಐವಿಎಫ್ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣು

ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಮುಹೂರ್ತ ಫಿಕ್ಸ್!

ADVERTISEMENT
ADVERTISEMENT

ಈ ನಿಗೂಢ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಮಾತ್ರವಲ್ಲದೆ, ಹಿರೇಮಲ್ಲನಹೊಳೆ, ಚಿಕ್ಕಮಲ್ಲನಹೊಳೆ, ಬಾಲರಾಮಪುರ, ದಿಬ್ಬದಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಅನುಭವವಾಗಿದೆ. ಅಲ್ಲದೆ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೊಲೋಮನಹಳ್ಳಿ, ಮಲ್ಲೋರಹಳ್ಳಿ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಕೆಂಚಮನಹಳ್ಳಿ, ಆಲೂರು ಗ್ರಾಮಗಳಲ್ಲಿಯೂ ಭಾರಿ ಶಬ್ದ ಹಾಗೂ ಕಂಪನದ ಅನುಭವವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಏಕಾಏಕಿ ಸಂಭವಿಸಿದ ಈ ಘಟನೆಗೆ ಭಯಗೊಂಡ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಘಟನೆ ಬಗ್ಗೆ ಗ್ರಾಮಸ್ಥರು ತಕ್ಷಣ ಜಗಳೂರು ತಹಸೀಲ್ದಾರ್ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕೂಡ ಗ್ರಾಮಗಳಿಗೆ ದೌಡಾಯಿಸಿದ್ದಾರೆ. ಜಗಳೂರು ಸಿಪಿಐ ಸಿದ್ದರಾಮಪ್ಪ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ಪ್ರಾಥಮಿಕವಾಗಿ ಯಾವುದೇ ಜೀವಹಾನಿ ಅಥವಾ ದೊಡ್ಡ ಮಟ್ಟದ ಆಸ್ತಿನಷ್ಟದ ವರದಿ ಇಲ್ಲ ಎಂದು ತಿಳಿಸಿದ್ದಾರೆ.

ಕೊಡಗಿನಲ್ಲಿ ಭೂಕಂಪನದ ಅನುಭವ: ಜನರಲ್ಲಿ ಹೆಚ್ಚಿದ ಆತಂಕ

ಕೊಡಗು : ಕರ್ನಾಟಕದ ಪ್ರವಾಸಿಗರ ಸ್ವರ್ಗ ಹಾಗೂ ಕನ್ನಡ ನಾಡಿನ ಕಾಶ್ಮೀರ ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಈ ಪ್ರದೇಶದ ಹಲವೆಡೆ ಭೂಮಿ ನಡುಗಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಬಂದಿದ್ದಾರೆ.

ಮಡಿಕೇರಿ ತಾಲ್ಲೂಕಿನ ಮದೆನಾಡು, ಜೋಡುಪಾಲ ಹಾಗೂ ಮೊಣ್ಣಂಗೇರಿ ಭಾಗಗಳಲ್ಲಿ ಭೂಕಂಪನದ ಅನುಭವ ಉಂಟಾಗಿದೆ. ಮನೆಯಲ್ಲಿದ್ದ ಸಾಮಾನುಗಳು ಅಲ್ಲಾಡಿದರೆ, ಗ್ರಂಥಾಲಯದಲ್ಲಿದ್ದ ಪುಸ್ತಕಗಳು ನಡುಗಿದವು. ಭೂಮಿ ದೊಡ್ಡದಾಗಿ ಗುಡುಗಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಈಗಾಗಲೇ 2018ರಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದ್ದರಿಂದ, ಮತ್ತೆ ಅದೇ ರೀತಿಯ ಅನಾಹುತವಾಗುವ ಭಯ ಜನರಲ್ಲಿದೆ.

ಭೂಕಂಪನದ ತೀವ್ರತೆ ಹಾಗೂ ಜನರ ಅನುಭವ

ಮದೆನಾಡು ಪಂಚಾಯಿತಿ ಸಿಬ್ಬಂದಿ ಶಿಲ್ಪ ಮತ್ತು ವೆಂಕಮ್ಮ ಮಾತನಾಡಿ, “ಇಂದು ಬೆಳಿಗ್ಗೆ 10.50ರ ಸಮಯದಲ್ಲಿ ಭೂಕಂಪನದ ಅನುಭವವಾಯಿತು. ಗ್ರಂಥಾಲಯದಲ್ಲಿ ಕುಳಿತು ಬರೆಯುತ್ತಿದ್ದಾಗ ಭೂಮಿ ನಡುಗಿದ ಅನುಭವವಾಗಿದ್ದು, ಪುಸ್ತಕಗಳ ರ್ಯಾಕ್‌ಗಳು ಅಲ್ಲಾಡಿದವು. ಈ ಅನುಭವದ ನಂತರ ವಿಷಯವನ್ನು ಜಿಲ್ಲಾಡಳಿತಕ್ಕೆ ತಕ್ಷಣ ತಿಳಿಸಿದೆವು” ಎಂದು ತಿಳಿಸಿದ್ದಾರೆ.

ಮಡಿಕೇರಿ ಸಮೀಪದ ದೇವಸ್ತೂರು ಗ್ರಾಮದಲ್ಲೂ ಈ ಘಟನೆ ನಡೆದಿದೆ. ಮನೆಗಳಲ್ಲಿನ ವಸ್ತುಗಳು ಅಲ್ಲಾಡಿದ ಅನುಭವ ಜನರಿಗೆ ಉಂಟಾಗಿದೆ. 2018ರಲ್ಲೂ ಇದೇ ರೀತಿಯ ಭೂಕಂಪನದ ಅನುಭವವಾಗಿದ್ದು, ನಂತರ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು ಎಂದು ಗ್ರಾಮಸ್ಥರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಜಿಲ್ಲಾಡಳಿತದ ಪ್ರತಿಕ್ರಿಯೆ

ಜಿಲ್ಲೆಯಲ್ಲಿ ಯಾವುದೇ ದೊಡ್ಡ ಅನಾಹುತವಾಗಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. “ಈ ಘಟನೆಯಿಂದ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ. ಗೋಡೆಗಳಲ್ಲಿ ಬಿರುಕು ಬೀಳುವುದು ಅಥವಾ ಸಾಮಾನುಗಳು ನೆಲಕ್ಕುರುಳುವುದು ಕಂಡುಬಂದಿಲ್ಲ. ಆದರೆ, ಈ ಘಟನೆಗೆ ಕಾರಣವೇನು ಎಂಬುದನ್ನು ಅರಿಯಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನರಲ್ಲಿ ಆತಂಕ

2018ರ ಭೂಕುಸಿತದಿಂದಾಗಿ ಈಗಲೂ ಜನರು ಭಯದಿಂದಲೇ ಜೀವನ ನಡೆಸುತ್ತಿದ್ದಾರೆ. “ನಮ್ಮ ಗ್ರಾಮ ಈಗಲೂ ಭೂಕುಸಿತದ ಅಪಾಯದಲ್ಲಿದೆ. ಪ್ರತೀ ಬಾರಿ ಭೂಮಿ ನಡುಗಿದಾಗ, ಮತ್ತೊಮ್ಮೆ ಭಾರೀ ಮಳೆಯಿಂದ ಗುಡ್ಡ ಕುಸಿಯುತ್ತದೆಯೇ ಎಂಬ ಭೀತಿ ಮೂಡುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈಗಾಗಲೇ ಮಡಿಕೇರಿಯಲ್ಲಿ ಭೂಮಿ ನಡುಗಿದನ್ನು ಗಮನಿಸಿ, ಜಿಲ್ಲಾಡಳಿತ ಮತ್ತು ಭೂಗರ್ಭ ಶಾಸ್ತ್ರಜ್ಞರು ಅಧ್ಯಯನ ನಡೆಸಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಭೂಕಂಪನದ ತೀವ್ರತೆ ಹೆಚ್ಚಾಗುತ್ತದೆಯೇ ಅಥವಾ ಇಂತಹ ಘಟನೆಗಳ ಸಂಭವನೀಯತೆ ಏನದು ಎಂಬುದರ ಮೇಲೆ ಹೆಚ್ಚಿನ ಅಧ್ಯಯನ ನಡೆಯಲಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T204236.234

ಮುಂಬೈ ಪೊಲೀಸರ ಜಾಗೃತಿ ಅಭಿಯಾನಕ್ಕೆ ಜಪಾನ್ ಕೋತಿ ಸಾಥ್: ಏನಿದು ‘ಪಂಚ್’ ಕಮಾಲ್ ?

by ಯಶಸ್ವಿನಿ ಎಂ
February 27, 2026 - 8:45 pm
0

Untitled design 2026 02 27T202345.670

ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!

by ಯಶಸ್ವಿನಿ ಎಂ
February 27, 2026 - 8:32 pm
0

Untitled design 2026 02 27T201413.349

ಅಬಕಾರಿ ಹಗರಣ: ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ಸಿಬಿಐ

by ಯಶಸ್ವಿನಿ ಎಂ
February 27, 2026 - 8:15 pm
0

Untitled design 2026 02 27T193818.894

ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು

by ಯಶಸ್ವಿನಿ ಎಂ
February 27, 2026 - 7:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T202345.670
    ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 884 ಕೋಟಿ ಲೂಟಿ ಹಣ ವಸೂಲಿಗೆ ಸರ್ಕಾರ ಮಾಸ್ಟರ್ ಪ್ಲಾನ್..!
    February 27, 2026 | 0
  • Untitled design 2026 02 27T193818.894
    ಮದುವೆ ಮಂಟಪದಲ್ಲಿ ಶಾಕ್: ವರನ ಅಸಲಿ ಮುಖ ತಿಳಿದು ಹಸೆಮಣೆ ತೊರೆದ ವಧು
    February 27, 2026 | 0
  • Untitled design 2026 02 27T175040.157
    ಬೆಂಗಳೂರಲ್ಲಿ ಅಂಡಾಣು ಮಾರಾಟ ದಂಧೆ..? ಐವಿಎಫ್ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣು
    February 27, 2026 | 0
  • ಬೆಂಗಳೂರು ಕರಗ
    ವಿಶ್ವ ವಿಖ್ಯಾತ ಬೆಂಗಳೂರು ಕರಗಕ್ಕೆ ಮುಹೂರ್ತ ಫಿಕ್ಸ್!
    February 27, 2026 | 0
  • Untitled design 2026 02 27T154220.184
    ಪೋಕ್ಸೋ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version