ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಸಾ*ವು

Untitled design (36)

ಮೈಸೂರು: ರಮ್ಯಾ ಮತ್ತು ಬಸಪ್ಪ ದಂಪತಿಯ2 ವರ್ಷದ ಮಗು ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗುವೊಂದು ಧಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಜಯಗಿರಿ ಹಾಡಿಯಲ್ಲಿ ನಡೆದಿದೆ.

ತಾಯಿ ರಮ್ಯಾ ಮಗಳು ವೇದಾಳಿಗೆ ಸ್ನಾನ ಮಾಡಿಸಲು ಪಾತ್ರೆಯಲ್ಲಿ ಬಿಸಿನೀರನ್ನು ಇಟ್ಟಿದ್ದರು. ಬಿಸಿನೀರಿನ ಜೊತೆ ತಣ್ಣೀರು ಬೆರೆಸಲು ತಣ್ಣೀರು ತರಲು ಸ್ವಲ್ಪ ದೂರ ಹೋದ ಸಮಯದಲ್ಲಿ, ಎರಡು ವರ್ಷದ ವೇದಾ ಅಡ್ಡಾಡುತ್ತಿದ್ದಾಗ ಮಗು ಆ ಬಿಸಿನೀರಿನ ಪಾತ್ರೆಗೆ ಬಿದ್ದಿದೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೋಷಕರು ತೀವ್ರ ಸುಟ್ಟಗಾಯಗಳಿಗೆ ಒಳಗಾದ ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗುವಿಗೆ ತೀವ್ರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ಅಪ್ರಾಪ್ತ ಬಾಲಕನಿಗೆ ಬೈಕ್‌ ಕೊಟ್ಟಿದ್ದಕ್ಕೆ 25 ಸಾವಿರ ದಂಡ

ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ ವ್ಯಕ್ತಿಯ ವಿರುದ್ಧ ಚಿಕ್ಕಮಗಳೂರು ನ್ಯಾಯಾಲಯವು ಕಠಿಣ ಶಿಕ್ಷೆ ನೀಡಿದೆ. ಈ ಪ್ರಕರಣ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಅವರ ಮೇಲೆ ₹25,000 ದಂಡ ವಿಧಿಸುವ ಆದೇಶ ಹೊರಡಿಸಿದೆ.

ಅಪ್ರಾಪ್ತ ವಯಸ್ಕರು ಮೋಟಾರು ವಾಹನಗಳನ್ನು ಬಳಸುವುದರಿಂದ ಕಾನೂನು ಬಾಹಿರವಷ್ಟೇ ಅಲ್ಲ, ಅಪರಿಚಿತರು, ಸಂಚಾರ ನಿಯಮಗಳ ಜ್ಞಾನದ ಕೊರತೆ ಇರುತ್ತದೆ ಜೊತೆಗೆ ಅನುಭವ ಇಲ್ಲದ ಕಾರಣ ಅಪಘಾತ ಹೆಚ್ಚಾಗುವ ಸಾಧ್ಯತೆ ಇದೆ. ಹೀಗೆ ಹಲವು ಕಾರಣಗಳಿಂದ ಅತ್ಯಂತ ಅಪಾಯಕಾರಿ ಕೂಡ ಆಗಿದೆ. ಇಂತಹ ಸನ್ನಿವೇಶಗಳು ಗಂಭೀರ ಅಪಘಾತಗಳಿಗೆ ಕಾರಣವಾಗಬಲ್ಲವು. ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಪ್ರಾಪ್ತರಿಗೆ ವಾಹನ ನೀಡುವುದರ ತೀವ್ರ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ದಂಡ ನಿರ್ಣಯವು ಸಹಾಯ ಮಾಡುತ್ತದೆ. 

ಕುದುರೆಮುಖ ಚಾರಣಕ್ಕೆ ಹೋಗುತ್ತಿದ್ದ ಬಸ್‌ ಪಲ್ಟಿ: ಹಲವರಿಗೆ ಗಂಭೀರ ಗಾಯ

ಚಾರಣಿಕರ ಆಕರ್ಷಣೆಯ ಕೇಂದ್ರವಾದ ಕುದುರೆಮುಖಕ್ಕೆ ಚಾರಣಕ್ಕೆ ತೆರಳುತ್ತಿದ್ದ ಪ್ರವಾಸಿಗರನ್ನು ಹೊತ್ತ ಖಾಸಗಿ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸದ ಸಮೀಪದ ಕಂಚಿಗಾನೆ ಪ್ರದೇಶದಲ್ಲಿ ನಡೆದಿದೆ. 

 41 ಜನ ಪ್ರವಾಸಿಗರಿದ್ದ ಬಸ್ಸಿನಲ್ಲಿ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ನಂತರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರ ಸಹಾಯದೊಂದಿಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಬಸ್ಸಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಪ್ರವಾಸಿಗಳನ್ನು ಸುರಕ್ಷಿತವಾಗಿ ಹೊರತೆಗೆಯುವ ಕಾರ್ಯ ನಡೆಸಿದ್ದಾರೆ. ಅಪಘಾತದ ಕಾರಣ ಇನ್ನೂ ಅಧಿಕೃತವಾಗಿ ತಿಳಿಯದಿದ್ದರೂ, ವಾಹನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Exit mobile version