• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಂದಿನಿ ಉತ್ಪನ್ನ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಂಬುದು ಸುಳ್ಳು: ಕೆಎಂಎಫ್ ಎಂಡಿ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 19, 2026 - 6:52 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 02 19T184951.845

RelatedPosts

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

ADVERTISEMENT
ADVERTISEMENT

ಬೆಂಗಳೂರು: ನಂದಿನಿ ಬ್ರಾಂಡ್‌ನ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಉಂಟಾಗುತ್ತದೆ ಎಂಬ ಆರೋಪಗಳು ಸಂಪೂರ್ಣ ಆಧಾರರಹಿತ ಮತ್ತು ಸುಳ್ಳು ಎಂದು Karnataka Milk Federation (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಈ ಸುದ್ದಿಯಿಂದ ಗ್ರಾಹಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕೆಲವು ದಿನಗಳ ಹಿಂದೆ ಡಾ. ಶರಣ್ಯ ಸಂತೋಷ್ ಎಂಬುವವರ ಹೇಳಿಕೆಯ ಒಂದು ವಿಡಿಯೋ ಹಾಗೂ ಪೋಸ್ಟ್‌ಗಳು ವೈರಲ್ ಆಗಿದ್ದವು. ಅದರಲ್ಲಿ ನಂದಿನಿ ಬ್ರಾಂಡ್‌ನ ಕೆಲವು ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಅಪಾಯವಿದೆ ಎಂದು ಆರೋಪಿಸಲಾಗಿತ್ತು. ಈ ಹೇಳಿಕೆಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದಂತೆ, ಗ್ರಾಹಕರಲ್ಲಿ ಗೊಂದಲ ಮತ್ತು ಭೀತಿ ಉಂಟಾಯಿತು.

ಈ ಕುರಿತು ಸ್ಪಷ್ಟನೆ ನೀಡಿರುವ ಕೆಎಂಎಫ್ ಎಂಡಿ ಶಿವಸ್ವಾಮಿ, “ನಂದಿನಿ ಉತ್ಪನ್ನಗಳನ್ನು ಸಂಪೂರ್ಣ ನೈಸರ್ಗಿಕ ವಿಧಾನದಲ್ಲಿ ತಯಾರಿಸಲಾಗುತ್ತದೆ. ನಮ್ಮ ಯಾವುದೇ ಉತ್ಪನ್ನಗಳಲ್ಲಿ ಹಾನಿಕಾರಕ ಕೆಮಿಕಲ್‌ಗಳನ್ನು ಬಳಸುವುದಿಲ್ಲ. ಇದುವರೆಗೆ ನಮ್ಮ ಉತ್ಪನ್ನಗಳ ಬಗ್ಗೆ ಯಾವುದೇ ಗಂಭೀರ ದೂರು ದಾಖಲಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ,” ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಪರೀಕ್ಷೆಯಲ್ಲಿ ಸುರಕ್ಷಿತವೆಂದು ದೃಢೀಕರಣ

ಅಪಪ್ರಚಾರದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (Food Safety Department) ನಂದಿನಿ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿದೆ. ಇಲಾಖೆಯ ವರದಿ ಪ್ರಕಾರ, ಕೆಎಂಎಫ್ ಉತ್ಪನ್ನಗಳು ಎಲ್ಲ ಮಾನದಂಡಗಳಿಗೆ ಅನುಗುಣವಾಗಿವೆ ಮತ್ತು ಸಂಪೂರ್ಣ ಸುರಕ್ಷಿತವಾಗಿವೆ ಎಂದು ತಿಳಿಸಿದೆ.

ಮೈಸೂರು ಪಾಕ್, ಮಿಲ್ಕ್ ಪೇಡಾ, ಪನ್ನೀರ್, ವೆನಿಲಾ ಮಿಲ್ಕ್ ಶೇಕ್ ಸೇರಿದಂತೆ ವಿವಿಧ ಉತ್ಪನ್ನಗಳ ಪರೀಕ್ಷೆಯಲ್ಲಿ ಯಾವುದೇ ಅಪಾಯಕಾರಿ ಅಂಶ ಪತ್ತೆಯಾಗಿಲ್ಲ. ಇದರಿಂದ ಗ್ರಾಹಕರು ಆತಂಕಪಡಬೇಕಾದ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಅಪಪ್ರಚಾರ ಮಾಡಿದವರ ವಿರುದ್ಧ ಕಾನೂನು ಕ್ರಮ

ನಂದಿನಿ ಬ್ರಾಂಡ್‌ಗೆ ಮಾನಹಾನಿ ಉಂಟುಮಾಡುವ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಮಾಡಿರುವವರ ವಿರುದ್ಧ ಕೆಎಂಎಫ್ ಈಗಾಗಲೇ ಎಫ್‌ಐಆರ್ ದಾಖಲಿಸಿದೆ. ಈ ರೀತಿಯ ಸುಳ್ಳು ಪ್ರಚಾರಗಳಿಂದ ಬ್ರಾಂಡ್‌ ಗೌರವಕ್ಕೆ ಧಕ್ಕೆಯಾಗಿದ್ದು, ಕೋಟ್ಯಾಂತರ ಗ್ರಾಹಕರಲ್ಲಿ ಅನಗತ್ಯ ಭಯ ಸೃಷ್ಟಿಯಾಗಿದೆ ಎಂದು ಕೆಎಂಎಫ್ ಹೇಳಿದೆ.

ಸಾಮಾಜಿಕ ಜಾಲತಾಣ ‘ಎಕ್ಸ್’ (ಹಳೆಯ ಟ್ವಿಟರ್) ನಲ್ಲಿ ಕೆಎಂಎಫ್ ಅಧಿಕೃತ ಪ್ರಕಟಣೆ ಹೊರಡಿಸಿ, “ನಂದಿನಿ ಉತ್ಪನ್ನಗಳನ್ನು ಅಸುರಕ್ಷಿತವೆಂದು ತಪ್ಪಾಗಿ ಪ್ರಚಾರ ಮಾಡಲಾಗುತ್ತಿದೆ. ನಮ್ಮ ಬ್ರಾಂಡ್‌ನೊಂದಿಗೆ ಬಾಲ್ಯದಿಂದಲೇ ಬೆಳೆದಿರುವ ಲಕ್ಷಾಂತರ ಕುಟುಂಬಗಳ ವಿಶ್ವಾಸವನ್ನು ಕುಂದಿಸಲು ದುರುದ್ದೇಶಪೂರಿತ ಪ್ರಯತ್ನ ನಡೆದಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ,” ಎಂದು ತಿಳಿಸಿದೆ.

ಗ್ರಾಹಕರಿಗೆ ಮನವಿ

ಕೆಎಂಎಫ್ ಅಧಿಕಾರಿಗಳು ಗ್ರಾಹಕರಿಗೆ ಯಾವುದೇ ಅಪಪ್ರಚಾರಕ್ಕೆ ಒಳಗಾಗದೇ, ಅಧಿಕೃತ ಮಾಹಿತಿಯನ್ನೇ ನಂಬುವಂತೆ ಮನವಿ ಮಾಡಿದ್ದಾರೆ. “ನಂದಿನಿ ಉತ್ಪನ್ನಗಳು ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತಯಾರಿಸಲಾಗುತ್ತದೆ. ಗ್ರಾಹಕರು ಯಾವುದೇ ಆತಂಕವಿಲ್ಲದೆ ನಮ್ಮ ಉತ್ಪನ್ನಗಳನ್ನು ಬಳಸಿ,” ಎಂದು ಎಂಡಿ ಶಿವಸ್ವಾಮಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ನಂದಿನಿ ಬ್ರಾಂಡ್‌ಗೆ ಅಪಾರ ವಿಶ್ವಾಸವಿದ್ದು, ಹಾಲು ಮತ್ತು ಹಾಲಿನ ಉತ್ಪನ್ನಗಳ ಕ್ಷೇತ್ರದಲ್ಲಿ ಇದು ಪ್ರಮುಖ ಸ್ಥಾನವನ್ನು ಹೊಂದಿದೆ. ಇಂತಹ ಸಂದರ್ಭದಲ್ಲಿ ಆಧಾರರಹಿತ ಆರೋಪಗಳು ಹರಿದಾಡುತ್ತಿರುವುದು ವಿಷಾದನೀಯ ಎಂದು ಕೆಎಂಎಫ್ ಅಭಿಪ್ರಾಯಪಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

Untitled design 2026 06 19T131753.127

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 19, 2026 - 1:19 pm
0

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version