ಆಪರೇಷನ್ ಸಿಂಧೂರ: ಸೈನಿಕರ ಶೌರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶಹಬ್ಬಾಶ್

ಸೇನೆಗೆ ಸೆಲ್ಯೂಟ್ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್

Befunky collage (71)

ನಮ್ಮ ಸಶಸ್ತ್ರ ಪಡೆಗಳ ಧೈರ್ಯಕ್ಕೆ ನಾನು ಸಲಾಂ ಹೇಳುತ್ತೇನೆ, ಅವರು ಸಿಂಧೂರ್ ಕಾರ್ಯಾಚರಣೆಯ ಹಿಂದಿನ ಅಸಾಧಾರಣ ಶೌರ್ಯವನ್ನು ತೋರಿದ್ದಾರೆ. ಅವರ ವೀರೋಚಿತ ಕ್ರಮವು ಭಾರತವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂಬುದನ್ನು ಮತ್ತೊಮ್ಮೆ ದೃಢಪಡಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ Xನಲ್ಲಿ ಟ್ವೀಟ್ ಮಾಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿಯು ಕೇವಲ ನಿರಪರಾಧಿ ಜೀವಗಳ ಮೇಲೆ ಮಾತ್ರವಲ್ಲ, ಭಾರತದ ಕನಸುಗಳು ಮತ್ತು ಆತ್ಮದ ಮೇಲೆ ದಾಳಿಯಾಗಿತ್ತು. ನಮ್ಮ ಧೀರ ಸೈನಿಕರ ಒಂದೊಂದು ಪ್ರಯತ್ನವೂ ಬಲಿಪಶುಗಳಿಗೆ, ಅವರ ಕುಟುಂಬಗಳಿಗೆ ಮತ್ತು ಶಾಂತಿ ಮತ್ತು ಮಾನವೀಯತೆಯಲ್ಲಿ ನಂಬಿಕೆಯಿರುವ ಪ್ರತಿಯೊಬ್ಬ ಭಾರತೀಯನಿಗೆ ನ್ಯಾಯ ಒದಗಿಸುವ ಶಪಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT
ADVERTISEMENT

ಕರ್ನಾಟಕವು ರಾಷ್ಟ್ರದೊಂದಿಗೆ ಸೇರಿ ನಮ್ಮ ಪಡೆಗಳೊಂದಿಗೆ ಅಚಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುತ್ತದೆ. ನಿಮ್ಮ ಶೌರ್ಯ, ತ್ಯಾಗ ಮತ್ತು ನಮ್ಮ ಸಾರ್ವಭೌಮತೆಯನ್ನು ರಕ್ಷಿಸಲು ಅಚಲವಾದ ಬದ್ಧತೆಗೆ ನಾವು ಹೆಮ್ಮೆಪಡುತ್ತೇವೆ ಎಂದು ಸಶಸ್ತ್ರ ಪಡೆಗಳಿಗೆ ಮತ್ತು ಭಾರತ ಸರ್ಕಾರದ ಜೊತೆಗಿರುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಭಾರತವು ಶಕ್ತಿ ಮತ್ತು ಒಗ್ಗಟ್ಟಿನೊಂದಿಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಸಿಎಂ ಸಿದ್ದರಾಯ್ಯ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

Exit mobile version