• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 20, 2026 - 11:56 am
in ಕರ್ನಾಟಕ
0 0
0
Untitled design 2026 06 20T115319.957

ಬೆಂಗಳೂರು (ಜೂನ್‌20): ರಾಜ್ಯದ ಹಿತಾಸಕ್ತಿಗೆ ಪೂರಕವಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕ್ಯಾಬಿನೆಟ್ ಸಭೆ ಕುರಿತು ಮಾತನಾಡಿದ ಅವರು, ಎರಡು ಇಲಾಖೆಗಳ ಪ್ರಸ್ತಾವನೆಗಳು ಸಚಿವ ಸಂಪುಟಕ್ಕೆ ಬಂದ ಬಳಿಕ ಸಿಎಂ ಡಿಕೆ ಶಿವಕುಮಾರ್ ಅವರ ಸಂಕಲ್ಪ ಏನಿದೆಯೋ ಅದನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ನೇಮಿಸುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ರಿಷಬ್ ಶೆಟ್ಟಿ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ರಾಜ್ಯದಲ್ಲಿ ಆರ್ಥಿಕ ಸ್ಥಿರತೆ ಕಾಪಾಡುವುದು, ಹೆಚ್ಚಿನ ಬಂಡವಾಳ ಹೂಡಿಕೆ ಆಕರ್ಷಿಸುವುದು ಹಾಗೂ ಉದ್ಯೋಗ ಸೃಷ್ಟಿ ಮಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು. ಐಟಿ-ಬಿಟಿ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತಿದೆ ಎಂದರು.

RelatedPosts

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಚಿತಾಗಾರಗಳಿಗೆ ಹೊಸ ನಿಯಮ: ಇನ್ನು ಅಧಿಕೃತ ವೆಬ್‌ಸೈಟ್‌ನಲ್ಲೇ ಬುಕ್ಕಿಂಗ್ ಕಡ್ಡಾಯ

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್

ADVERTISEMENT
ADVERTISEMENT

 ಜನಸ್ಪಂದನಾ ಕಾರ್ಯಕ್ರಮಕ್ಕೆ ಹೊಸ ರೂಪ

ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಸಣ್ಣ ಸಮಸ್ಯೆಗಳಿಗೆ ಜನರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗಳನ್ನು ಕಾಯುವ ಅಗತ್ಯವಿಲ್ಲ. ಸ್ಥಳೀಯ ಮುಖಂಡರ ಮೂಲಕವೇ ಪರಿಹಾರ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಲ್ಲಿ ತಪ್ಪಿಲ್ಲ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ಕಾರದ ಎಲ್ಲಾ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಮುಖ್ಯಮಂತ್ರಿಗಳ ಧ್ಯೇಯವಾಗಿದೆ ಎಂದರು. ಕೆಲವು ಸೌಲಭ್ಯಗಳು ಅನರ್ಹರಿಗೆ, ಹೊರರಾಜ್ಯದವರಿಗೆ ಹಾಗೂ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ತಲುಪುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಲೋಪಗಳನ್ನು ಸರಿಪಡಿಸಿ ಅರ್ಹರಿಗೆ ಮಾತ್ರ ಯೋಜನೆ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಡದಿ ಟೌನ್‌ಶಿಪ್‌ಗೆ ರೈತರ ಒಪ್ಪಿಗೆ ಇದೆ

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಸುಮಾರು 7,500 ಎಕರೆ ಪ್ರದೇಶದಲ್ಲಿ 6 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಗೆ ರೈತರು ಒಪ್ಪಿಗೆ ನೀಡಿದ್ದಾರೆ. ಉಳಿದ ಭೂಮಿಯ ಪ್ರಮಾಣ ಸುಮಾರು 1,300 ಎಕರೆ ಇರಬಹುದು ಎಂದು ತಿಳಿಸಿದರು. ಯಾವುದೇ ರೀತಿಯ ದಬ್ಬಾಳಿಕೆ ನಡೆಸಿಲ್ಲ. ಚನ್ನರಾಯಪಟ್ಟಣದಲ್ಲಿ ರೈತರು ವಿರೋಧ ವ್ಯಕ್ತಪಡಿಸಿದಾಗ ಸರ್ಕಾರ ಯೋಜನೆಯನ್ನು ಹಿಂಪಡೆದಿತ್ತು. ಈಗ ರೈತರು ಸ್ವಯಂಪ್ರೇರಿತರಾಗಿ ಭೂಮಿ ನೀಡಲು ಮುಂದೆ ಬಂದಿದ್ದಾರೆ. ಕಾನೂನು ಚೌಕಟ್ಟನ್ನು ಮೀರಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದರು.

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ನಡೆಸಲಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಅವರು ಪಾದಯಾತ್ರೆ ಮಾಡಲಿ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿಲ್ಲ. ಬೆಂಗಳೂರಿನಲ್ಲಿ 15 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯುತ್ತಿದೆ. ಬಿಡಿಎ ಮತ್ತು ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಮಂದಿ ಈ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎಂದರು.

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವದ ವಿರುದ್ಧ ಅಸಮಾಧಾನ ಹೊಂದಿದ್ದ ಶಾಸಕರೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಯಾವುದೇ ಆಮಿಷ ಒಡ್ಡಿಲ್ಲ. ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನವೇ ಇದಕ್ಕೆ ಕಾರಣ ಎಂದರು.

ವೋಟ್ ಚೋರಿ ಪ್ರಕರಣದ ಕುರಿತು ಈಗಾಗಲೇ 22 ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಬಿಜೆಪಿ ಮಾಜಿ ಶಾಸಕ ಮತ್ತು ಅವರ ಪುತ್ರರ ವಿರುದ್ಧ ದೂರು ದಾಖಲಾಗಿದೆ. ಆಪರೇಷನ್ ಕಮಲದ ಮೂಲಕ ಸರ್ಕಾರಗಳನ್ನು ಉರುಳಿಸುವ ರಾಜಕೀಯವನ್ನು ದೇಶಕ್ಕೆ ಪರಿಚಯಿಸಿದವರು ಬಿಜೆಪಿಯೇ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಕ್ರಾಸ್ ಮತದಾನದ ಕುರಿತು ದೆಹಲಿಗೆ ವರದಿ ನೀಡಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಯವಿಟ್ಟು ದೆಹಲಿಗೆ ಹೋಗಬೇಡಿ, ಹೋದರೆ ರಾಜೀನಾಮೆ ಕೇಳಬಹುದು ಎಂದು ವ್ಯಂಗ್ಯವಾಡಿದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 20T131152.126

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

by ದಿಶಾ ಕೆ. ಎಸ್.
June 20, 2026 - 1:12 pm
0

Untitled design (66)

NTA ಯಡವಟ್ಟು: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!

by ಕವಿತಾ
June 20, 2026 - 1:09 pm
0

Untitled design 2026 06 20T124455.859

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

by ಶಾಲಿನಿ ಕೆ. ಡಿ
June 20, 2026 - 12:46 pm
0

Untitled design (65)

ಟಿಕೆಟ್ ಇಲ್ಲದೆ ರೈಲು ಹತ್ತಿದ್ರೆ ₹500 ದಂಡ ಫಿಕ್ಸ್!

by ಕವಿತಾ
June 20, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T131152.126
    ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
  • Untitled design 2026 06 20T111538.301
    ಬೆಂಗಳೂರು ವಿದ್ಯುತ್ ಚಿತಾಗಾರಗಳಿಗೆ ಹೊಸ ನಿಯಮ: ಇನ್ನು ಅಧಿಕೃತ ವೆಬ್‌ಸೈಟ್‌ನಲ್ಲೇ ಬುಕ್ಕಿಂಗ್ ಕಡ್ಡಾಯ
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design (62)
    ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version