ನಾಳೆ ರಂಜಾನ್‌ ಹಿನ್ನೆಲೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

11 (78)

ಬೆಂಗಳೂರು, ಮಾರ್ಚ್ 30: ರಂಜಾನ್ ಹಬ್ಬದ (Ramzan) ಪ್ರಯುಕ್ತ ಬೆಂಗಳೂರಿನ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಸೋಮವಾರ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಂಗಳೂರು ಸಂಚಾರಿ ಟ್ರಾಫಿಕ್ ಪೊಲೀಸರು (Bengaluru Traffic Police) ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಪರ್ಯಾಯ ಮಾರ್ಗಗಳು

ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಪ್ರಯಾಣಿಸುವವರು ಈ ಪರ್ಯಾಯ ಮಾರ್ಗಗಳನ್ನು ಬಳಸಬಹುದು.

ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಸಂಚರಿಸುವವರು, ಸ್ಪೆನ್ಸರ್ ರಸ್ತೆಯಲ್ಲಿ ಬಲ ತಿರುಗಿಕೊಂಡು, ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ, ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಾಗಬಹುದು.

ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು:

ಪಾರ್ಕಿಂಗ್ ನಿಷೇಧಿತ ಪ್ರದೇಶಗಳು

ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ವಾಹನ ನಿಲ್ಲಿಸುವುದನ್ನು ತಪ್ಪಿಸಬೇಕು.

ಪರ್ಯಾಯ ಪಾರ್ಕಿಂಗ್ ಸ್ಥಳಗಳು

ಈದ್ಗಾ ಮೈದಾನ ಹಾಗೂ ಬಿಲಾಲ್ ಮಾಸ್ಕ್ ಹತ್ತಿರ ಪ್ರಾರ್ಥನೆ ಸಲ್ಲಿಸುವವರು ಈ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಬಹುದು:

  1. ಈದ್ಗಾ ಮೈದಾನ ಹಾಗೂ ಬಿಲಾಲ್ ಮಸೀದಿ ಹತ್ತಿರ ಪ್ರಾರ್ಥನೆ ಸಲ್ಲಿಸುವವರು – ಅಲ್ಬನ್ಸ್ ಸ್ಕೂಲ್ ಕ್ರಾಸ್ ರಸ್ತೆ ಮತ್ತು ಪಿಲ್ಲಣ್ಣ ಗಾರ್ಡನ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
  2. ಉಮರ್ ಮಸೀದಿ ಹಾಗೂ ಅರೇಬಿಕ್ ಕಾಲೇಜ್ ಹತ್ತಿರ ಪ್ರಾರ್ಥನೆ ಸಲ್ಲಿಸುವವರು – ಉಮರ್ ಮಸೀದಿ 4ನೇ ಕ್ರಾಸ್ ರಸ್ತೆ ಮತ್ತು ಹೆಚ್.ಬಿ.ಆರ್ 9ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
  3. ಮುನಾವರ್ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸುವವರು – ಹೆಚ್.ಬಿ.ಆರ್ 80 ಅಡಿ ರಸ್ತೆ 1ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
ಸಾರ್ವಜನಿಕರಿಗೆ ವಿನಂತಿ

ನಿಶ್ಚಿತ ಮಾರ್ಗಗಳಲ್ಲೇ ಸಂಚರಿಸುವಂತೆ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ವಾಹನ ನಿಲ್ಲಿಸದಂತೆ ಸಾರ್ವಜನಿಕರಿಗೆ ವಿನಂತಿಸಲಾಗಿದೆ. ನಗರದಲ್ಲಿ ಸುಗಮ ಸಂಚಾರವನ್ನು ನಿರ್ವಹಿಸಲು ಸಂಚಾರಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ವಿನಂತಿಸಲಾಗಿದೆ. ಯಾವುದೇ ತೊಂದರೆಗಳಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಹಾಟ್‌ಲೈನ್ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

Exit mobile version