ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

Untitled design 2026 06 08T130648.195

ಹಾಸನ, ಜೂನ್ 8: ಹಾಸನ ನಗರದಲ್ಲಿ ಬೆಂಗಳೂರಿನ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ. ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಮಂಜೇಶ್ ಯಾರು?
ಹತ್ಯೆಯಾದ ವ್ಯಕ್ತಿ ಬೆಂಗಳೂರಿನ ಮಂಜೇಶ್ (43) ಎಂಬ ರೌಡಿಶೀಟರ್. ಇವನ ತಾಯಿ ಹಾಸನ ಮೂಲದವರಾಗಿದ್ದು, ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದನು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದ ಈತನ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿವೆ. ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಹಂತಕರು ಆತನ ಮೇಲೆ ದಾಳಿ ನಡೆಸಿದ್ದಾರೆ.

ನ್ಯಾಯಾಲಯದ ಮುಂಭಾಗವೇ ಕಣವಾಯ್ತು
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಂದ ಹಲವಾರು ದುಷ್ಕರ್ಮಿಗಳು ಮಂಜೇಶ್ ಮೇಲೆ ದಾಳಿ ಮಾಡಿದ್ದಾರೆ. ತಮ್ಮೊಂದಿಗೆ ತಂದಿದ್ದ ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಮುಖದ ಗುರುತು ಸಿಗದಂತೆ ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಹಳೆಯ ವೈಷಮ್ಯವೇ ಕಾರಣ?
ಮಂಜೇಶ್ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಶಂಕಿಸಲಾಗಿದೆ. ಬೆಂಗಳೂರಿನ ಗುಂಡು ಮತ್ತು ಕೊಲೆ ಪ್ರಕರಣಗಳಲ್ಲಿ ಈತನ ಹೆಸರು ಇತ್ತು. ಕೆಲವು ವರ್ಷಗಳ ಹಿಂದೆ ಮಂಜೇಶ್ ಮತ್ತು ಇನ್ನೊಂದು ಗ್ಯಾಂಗ್ ನಡುವೆ ಜಗಳ ನಡೆದಿತ್ತು. ಅದರ ಪ್ರತೀಕಾರವಾಗಿಯೇ ಈ ಹತ್ಯೆ ನಡೆಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಜೇಶ್ ವಿರುದ್ಧ ಬೆಂಗಳೂರಿನಲ್ಲಿ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರ ಪರಿಶೀಲನೆ:
ಘಟನಾ ಸ್ಥಳಕ್ಕೆ ಹಾಸನ ನಗರ ಠಾಣೆಯ ಪೊಲೀಸರು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಭಿಸಲಾಗಿದೆ.

Exit mobile version