• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನೇ ಸಚಿವನಿದ್ದೇನೆ, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ನೀಡುತ್ತೇನೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 10:13 pm
in Flash News, ಕರ್ನಾಟಕ
0 0
0
Untitled design 2025 05 05t221235.052

ಚನ್ನಪಟ್ಟಣ, ಮೇ.05: “ನನ್ನ ಇಲಾಖೆಯಿಂದಲೇ ರೂ.158 ಕೋಟಿ ಅನುದಾನವನ್ನು ಚನ್ನಪಟ್ಟಣಕ್ಕೆ ನೀಡಿದ್ದೇನೆ. ಮೂರು ದಿನಗಳ ಹಿಂದೆಯಷ್ಟೇ ಒಂದಷ್ಟು ಅನುದಾನ ನೀಡಿದ್ದೇನೆ. ನಾನೇ ಸಚಿವನಿದ್ದೇನೆ. ಅಗತ್ಯ ಬಿದ್ದರೇ ಇನ್ನಷ್ಟು ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದರು. “ನೀಡಿದ ಅನುದಾನದಲ್ಲಿ ರಸ್ತೆ, ಸೇತುವೆಗಳನ್ನು ಚೆನ್ನಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಶಾಸಕರಾದ ಯೋಗೇಶ್ವರ್ ಅವರೂ ಒಪ್ಪಿದ್ದಾರೆ. ನನ್ನ ಕ್ಷೇತ್ರಕ್ಕೇ ರೂ.500 ಕೋಟಿಯೂ ಕೊಟ್ಟಿರಲಿಲ್ಲ. ಇಂತಹ ಸದಾವಕಾಶ ಚನ್ನಪಟ್ಟಣಕ್ಕೆ ಸಿಕ್ಕಿದೆ. ಕ್ಷೇತ್ರಕ್ಕೆ ಸಿಕ್ಕಿರುವ ಎಲ್ಲಾ ಯೋಜನೆಗಳು ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

ADVERTISEMENT
ADVERTISEMENT

“ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಸುಮಾರು ರೂ.500 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿ ಒಂದಷ್ಟು ಕೆಲಸಗಳು ನೆನೆಗುದಿಗೆ ಬಿದ್ದಿದ್ದವು. ಯಾವ ಕಾರಣಕ್ಕೆ ಕಾಮಗಾರಿಗಳು ಹಿಂದುಳಿದಿವೆ ಎಂದು ಪರಿಶೀಲನೆ ಮಾಡಲಾಯಿತು” ಎಂದರು.

“ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ ಕ್ಷೇತ್ರಕ್ಕೆ ಬರಬೇಕಾದ ಅನುದಾನ ಸೇರಿದಂತೆ ಇತರೇ ಅಭಿವೃದ್ಧಿ ವಿಚಾರಗಳ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

“2010 ರಿಂದಲೂ ಅರ್ಚಕರಹಳ್ಳಿ, ಸುಣ್ಣಘಟ್ಟ, ಜಿಗಣೇನಹಳ್ಳಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿತ್ತು. ಪ್ರಯೋಜನ ಪಡೆದವರು ಒಂದು ಚದರ ಅಡಿಗೆ ರೂ.200 ಪಾವತಿಸಿ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಂದಷ್ಟು ಜನರು ಮಾತ್ರ ಉಪಯೋಗ ಪಡೆದಿದ್ದು ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

“ಅಧಿಕಾರಿಗಳ ಬಳಿ ತಾಂತ್ರಿಕ ಕಾರಣಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸರ್ಕಾರ ಹಾಗೂ ಅಧಿಕಾರಿಗಳ ಮಟ್ಟದಲ್ಲಿ ಉಂಟಾಗಿರುವ ತೊಂದರೆಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಇತರೇ ವಿಚಾರಗಳನ್ನು ಕೆಡಿಪಿ ಸಭೆಯಲ್ಲಿ ಚಿಂತನೆ ಮಾಡಲಾಗುವುದು” ಎಂದು ಹೇಳಿದರು.

ಈ ಹಿಂದೆ ಸಾರ್ವಜನಿಕರು ನೀಡಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದೇ ಎಂದು ಕೇಳಿದಾಗ, “ದೇವಸ್ಥಾನಕ್ಕೆ ಅನುದಾನ ಸೇರಿದಂತೆ ವೈಯಕ್ತಿಕ ಅರ್ಜಿಗಳನ್ನೂ ವಿಲೇವಾರಿ ಮಾಡಲಾಗುತ್ತಿದೆ. 5 ಸಾವಿರ ಮನೆ ಮಂಜೂರಾಗಿದೆ.‌ 2500 ಅರ್ಜಿಗಳು ಬಂದಿದ್ದು ಇನ್ನೂ 2,500 ಮನೆಗಳು ಉಳಿದುಕೊಂಡಿವೆ. ವಸತಿ ಸಚಿವರಾದ ಜಮೀರ್ ಅವರು ಅಪಾರ್ಟ್ ಮೆಂಟ್ ಮಾದರಿಯಲ್ಲಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಚುನಾವಣೆ ಸಮಯದಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಪಟ್ಟಿ ಹಾಕಿಕೊಂಡು ಈಡೇರಿಸುತ್ತೇವೆ” ಎಂದು ಹೇಳಿದರು.

ಜಿಲ್ಲೆಗೆ ತಂದಿರುವ ಯೋಜನೆಗಳನ್ನು ಕುಮಾರಸ್ವಾಮಿ ನಾನು ಮಾಡಿರುವುದು ಎಂದು ಹೇಳುತ್ತಿದ್ದಾರೆ ಎಂದಾಗ, “ನಾನು ಹಾಗೂ ಯೋಗೇಶ್ವರ್ ಏನೂ ಕೆಲಸ ಮಾಡಿಲ್ಲ,‌ ಎಲ್ಲಾ ಅವರದ್ದೇ” ಎಂದರು‌.

ಬಿಡದಿ ಟೌನ್ ಶಿಪ್ ಬಗ್ಗೆ ಕೇಳಿದಾಗ, “ನಾನು ಇದನ್ನು ಮಾಡಿದ್ದಲ್ಲ. ಬಿಡದಿ ಸೇರಿದಂತೆ ಇತರೇ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ. ಅವರೆ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ. ನಮ್ಮ ಜಿಲ್ಲೆಯ ಜನ ಆಸ್ತಿ ಕಳೆದುಕೊಳ್ಳುತ್ತಾರೆ‌. ಆದರೆ ಅವರು ಏನು ಆಲೋಚನೆ ಮಾಡಿದ್ದಾರೋ ಅದಕ್ಕಿಂತ ಎರಡು, ಮೂರು ಪಟ್ಟು ಬೆಲೆ ಸಿಗುವಂತಹ ಕೆಲಸ ನಾನು ಮಾಡುತ್ತೇನೆ. ಜಯನಗರ, ಸದಾಶಿವ ನಗರ ಮಾದರಿ ಎಂದು ಹೇಳುತ್ತಾರಲ್ಲ. ಅದಕ್ಕಿಂತ ಒಳ್ಳೇ ಪರಿಸರ ಸೃಷ್ಟಿ ಮಾಡುತ್ತೇವೆ” ಎಂದರು.

ಬೆಂಗಳೂರು ಗ್ರಾಮಾಂತರ ಸಂಸದರು ಹಾಗೂ ಎಚ್.ಡಿ.ದೇವೇಗೌಡರು ಈ ಯೋಜನೆಯನ್ನು ಕೈ ಬಿಡಿ ಎಂದು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಸಿಕೊಳ್ಳಲಿ. ಸಿದ್ದರಾಮಯ್ಯ ಅವರಿಗೂ ನನಗೂ ಇದನ್ನು ಕೈ ಬಿಡುವ ಹಕ್ಕಿಲ್ಲ. ನಾನು ಇರುವ ತನಕ ಇದನ್ನು ಪ್ರಗತಿ ಮಾಡುತ್ತೇವೆ. ಇದನ್ನು ಡಿ ನೋಟಿಫಿಕೇಷನ್ ಮಾಡಲು ಬರುವುದಿಲ್ಲ” ಎಂದರು.

ಯೋಜನೆ ವಿರೋಧಿಸಿ ರೈತರ ಹೋರಾಟದ ಬಗ್ಗೆ ಕೇಳಿದಾಗ, “ಹೋರಾಟ ಮಾಡಲಿ. ಹೋರಾಟ ಮಾಡುವುದನ್ನು ತಪ್ಪು ಎನ್ನಲು ಆಗುವುದಿಲ್ಲ. ಜಾಸ್ತಿ ಪರಿಹಾರ ಕೇಳಿದರೆ ತಪ್ಪೇನಿಲ್ಲ. ಅವರ ಮಕ್ಕಳ ಕಾಲಕ್ಕೆ ಡಿ.ಕೆ.ಶಿವಕುಮಾರ್ ಒಳ್ಳೇ ಕೆಲಸ ಮಾಡಿದ್ದಾರೆ ಎಂದು ಅವರಿಗೆ ಅರ್ಥವಾಗುತ್ತದೆ. ರಾಮನಗರಕ್ಕೆ ಬಂದು ರೈತರ ದುಃಖ, ದುಮ್ಮಾನ, ನೋವು ನಲಿವು ಕೇಳುತ್ತೇನೆ” ಎಂದರು.

ಬೆಂಗಳೂರು ದಕ್ಷಿಣ ಜಿಲ್ಲೆ ನಾಮಕರಣ ಎಲ್ಲಿಗೆ ಬಂತು ಎಂದು ಕೇಳಿದಾಗ, “ಮುಹೂರ್ತ ನಿಗಧಿ ಮಾಡುತ್ತಿದ್ದೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T160024.910
    ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T105106.839
    ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version