• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನೇ ಸಚಿವನಿದ್ದೇನೆ, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ನೀಡುತ್ತೇನೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 10:13 pm
in Flash News, ಕರ್ನಾಟಕ
0 0
0
Untitled design 2025 05 05t221235.052

ಚನ್ನಪಟ್ಟಣ, ಮೇ.05: “ನನ್ನ ಇಲಾಖೆಯಿಂದಲೇ ರೂ.158 ಕೋಟಿ ಅನುದಾನವನ್ನು ಚನ್ನಪಟ್ಟಣಕ್ಕೆ ನೀಡಿದ್ದೇನೆ. ಮೂರು ದಿನಗಳ ಹಿಂದೆಯಷ್ಟೇ ಒಂದಷ್ಟು ಅನುದಾನ ನೀಡಿದ್ದೇನೆ. ನಾನೇ ಸಚಿವನಿದ್ದೇನೆ. ಅಗತ್ಯ ಬಿದ್ದರೇ ಇನ್ನಷ್ಟು ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದರು. “ನೀಡಿದ ಅನುದಾನದಲ್ಲಿ ರಸ್ತೆ, ಸೇತುವೆಗಳನ್ನು ಚೆನ್ನಾಗಿ ನಿರ್ಮಾಣ ಮಾಡಲಾಗಿದೆ. ಇದನ್ನು ಶಾಸಕರಾದ ಯೋಗೇಶ್ವರ್ ಅವರೂ ಒಪ್ಪಿದ್ದಾರೆ. ನನ್ನ ಕ್ಷೇತ್ರಕ್ಕೇ ರೂ.500 ಕೋಟಿಯೂ ಕೊಟ್ಟಿರಲಿಲ್ಲ. ಇಂತಹ ಸದಾವಕಾಶ ಚನ್ನಪಟ್ಟಣಕ್ಕೆ ಸಿಕ್ಕಿದೆ. ಕ್ಷೇತ್ರಕ್ಕೆ ಸಿಕ್ಕಿರುವ ಎಲ್ಲಾ ಯೋಜನೆಗಳು ಜಾರಿಯಾಗುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

RelatedPosts

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ADVERTISEMENT
ADVERTISEMENT

“ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಸುಮಾರು ರೂ.500 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿ ಒಂದಷ್ಟು ಕೆಲಸಗಳು ನೆನೆಗುದಿಗೆ ಬಿದ್ದಿದ್ದವು. ಯಾವ ಕಾರಣಕ್ಕೆ ಕಾಮಗಾರಿಗಳು ಹಿಂದುಳಿದಿವೆ ಎಂದು ಪರಿಶೀಲನೆ ಮಾಡಲಾಯಿತು” ಎಂದರು.

“ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ ಕ್ಷೇತ್ರಕ್ಕೆ ಬರಬೇಕಾದ ಅನುದಾನ ಸೇರಿದಂತೆ ಇತರೇ ಅಭಿವೃದ್ಧಿ ವಿಚಾರಗಳ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು” ಎಂದು ಹೇಳಿದರು.

“2010 ರಿಂದಲೂ ಅರ್ಚಕರಹಳ್ಳಿ, ಸುಣ್ಣಘಟ್ಟ, ಜಿಗಣೇನಹಳ್ಳಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿತ್ತು. ಪ್ರಯೋಜನ ಪಡೆದವರು ಒಂದು ಚದರ ಅಡಿಗೆ ರೂ.200 ಪಾವತಿಸಿ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಂದಷ್ಟು ಜನರು ಮಾತ್ರ ಉಪಯೋಗ ಪಡೆದಿದ್ದು ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

“ಅಧಿಕಾರಿಗಳ ಬಳಿ ತಾಂತ್ರಿಕ ಕಾರಣಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸರ್ಕಾರ ಹಾಗೂ ಅಧಿಕಾರಿಗಳ ಮಟ್ಟದಲ್ಲಿ ಉಂಟಾಗಿರುವ ತೊಂದರೆಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಇತರೇ ವಿಚಾರಗಳನ್ನು ಕೆಡಿಪಿ ಸಭೆಯಲ್ಲಿ ಚಿಂತನೆ ಮಾಡಲಾಗುವುದು” ಎಂದು ಹೇಳಿದರು.

ಈ ಹಿಂದೆ ಸಾರ್ವಜನಿಕರು ನೀಡಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದೇ ಎಂದು ಕೇಳಿದಾಗ, “ದೇವಸ್ಥಾನಕ್ಕೆ ಅನುದಾನ ಸೇರಿದಂತೆ ವೈಯಕ್ತಿಕ ಅರ್ಜಿಗಳನ್ನೂ ವಿಲೇವಾರಿ ಮಾಡಲಾಗುತ್ತಿದೆ. 5 ಸಾವಿರ ಮನೆ ಮಂಜೂರಾಗಿದೆ.‌ 2500 ಅರ್ಜಿಗಳು ಬಂದಿದ್ದು ಇನ್ನೂ 2,500 ಮನೆಗಳು ಉಳಿದುಕೊಂಡಿವೆ. ವಸತಿ ಸಚಿವರಾದ ಜಮೀರ್ ಅವರು ಅಪಾರ್ಟ್ ಮೆಂಟ್ ಮಾದರಿಯಲ್ಲಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಚುನಾವಣೆ ಸಮಯದಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಪಟ್ಟಿ ಹಾಕಿಕೊಂಡು ಈಡೇರಿಸುತ್ತೇವೆ” ಎಂದು ಹೇಳಿದರು.

ಜಿಲ್ಲೆಗೆ ತಂದಿರುವ ಯೋಜನೆಗಳನ್ನು ಕುಮಾರಸ್ವಾಮಿ ನಾನು ಮಾಡಿರುವುದು ಎಂದು ಹೇಳುತ್ತಿದ್ದಾರೆ ಎಂದಾಗ, “ನಾನು ಹಾಗೂ ಯೋಗೇಶ್ವರ್ ಏನೂ ಕೆಲಸ ಮಾಡಿಲ್ಲ,‌ ಎಲ್ಲಾ ಅವರದ್ದೇ” ಎಂದರು‌.

ಬಿಡದಿ ಟೌನ್ ಶಿಪ್ ಬಗ್ಗೆ ಕೇಳಿದಾಗ, “ನಾನು ಇದನ್ನು ಮಾಡಿದ್ದಲ್ಲ. ಬಿಡದಿ ಸೇರಿದಂತೆ ಇತರೇ ಟೌನ್ ಶಿಪ್ ಗಳ ನೋಟಿಫಿಕೇಷನ್ ಮಾಡಿದವರು ಕುಮಾರಸ್ವಾಮಿ. ಅವರೆ ಡಿ ನೋಟಿಫಿಕೇಷನ್ ಮಾಡಬಹುದಿತ್ತು, ನಾವು ಈಗ ಅದನ್ನು ಮಾಡಲು ಹೋಗುವುದಿಲ್ಲ. ನಮ್ಮ ಜಿಲ್ಲೆಯ ಜನ ಆಸ್ತಿ ಕಳೆದುಕೊಳ್ಳುತ್ತಾರೆ‌. ಆದರೆ ಅವರು ಏನು ಆಲೋಚನೆ ಮಾಡಿದ್ದಾರೋ ಅದಕ್ಕಿಂತ ಎರಡು, ಮೂರು ಪಟ್ಟು ಬೆಲೆ ಸಿಗುವಂತಹ ಕೆಲಸ ನಾನು ಮಾಡುತ್ತೇನೆ. ಜಯನಗರ, ಸದಾಶಿವ ನಗರ ಮಾದರಿ ಎಂದು ಹೇಳುತ್ತಾರಲ್ಲ. ಅದಕ್ಕಿಂತ ಒಳ್ಳೇ ಪರಿಸರ ಸೃಷ್ಟಿ ಮಾಡುತ್ತೇವೆ” ಎಂದರು.

ಬೆಂಗಳೂರು ಗ್ರಾಮಾಂತರ ಸಂಸದರು ಹಾಗೂ ಎಚ್.ಡಿ.ದೇವೇಗೌಡರು ಈ ಯೋಜನೆಯನ್ನು ಕೈ ಬಿಡಿ ಎಂದು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಸಿಕೊಳ್ಳಲಿ. ಸಿದ್ದರಾಮಯ್ಯ ಅವರಿಗೂ ನನಗೂ ಇದನ್ನು ಕೈ ಬಿಡುವ ಹಕ್ಕಿಲ್ಲ. ನಾನು ಇರುವ ತನಕ ಇದನ್ನು ಪ್ರಗತಿ ಮಾಡುತ್ತೇವೆ. ಇದನ್ನು ಡಿ ನೋಟಿಫಿಕೇಷನ್ ಮಾಡಲು ಬರುವುದಿಲ್ಲ” ಎಂದರು.

ಯೋಜನೆ ವಿರೋಧಿಸಿ ರೈತರ ಹೋರಾಟದ ಬಗ್ಗೆ ಕೇಳಿದಾಗ, “ಹೋರಾಟ ಮಾಡಲಿ. ಹೋರಾಟ ಮಾಡುವುದನ್ನು ತಪ್ಪು ಎನ್ನಲು ಆಗುವುದಿಲ್ಲ. ಜಾಸ್ತಿ ಪರಿಹಾರ ಕೇಳಿದರೆ ತಪ್ಪೇನಿಲ್ಲ. ಅವರ ಮಕ್ಕಳ ಕಾಲಕ್ಕೆ ಡಿ.ಕೆ.ಶಿವಕುಮಾರ್ ಒಳ್ಳೇ ಕೆಲಸ ಮಾಡಿದ್ದಾರೆ ಎಂದು ಅವರಿಗೆ ಅರ್ಥವಾಗುತ್ತದೆ. ರಾಮನಗರಕ್ಕೆ ಬಂದು ರೈತರ ದುಃಖ, ದುಮ್ಮಾನ, ನೋವು ನಲಿವು ಕೇಳುತ್ತೇನೆ” ಎಂದರು.

ಬೆಂಗಳೂರು ದಕ್ಷಿಣ ಜಿಲ್ಲೆ ನಾಮಕರಣ ಎಲ್ಲಿಗೆ ಬಂತು ಎಂದು ಕೇಳಿದಾಗ, “ಮುಹೂರ್ತ ನಿಗಧಿ ಮಾಡುತ್ತಿದ್ದೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

Untitled design (66)

ನಾಳೆ ನಾಗರ ಪಂಚಮಿ: ಇದು ಶ್ರಾವಣ ಮಾಸದ ಮೊದಲ ಹಬ್ಬ

by ಕವಿತಾ
August 16, 2026 - 5:14 pm
0

Untitled design (64)

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

by ಕವಿತಾ
August 16, 2026 - 4:50 pm
0

Untitled design (63)

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

by ಕವಿತಾ
August 16, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version