ಪತ್ರಕರ್ತರಿಗೆ ಗುಡ್‌ನ್ಯೂಸ್‌: ಉಚಿತ ‘ಬಸ್‌ ಪಾಸ್’ ಪಡೆಯಲು ಗ್ರಾಮೀಣ ಪತ್ರಕರ್ತರಿಂದ ಆನ್’ಲೈನ್ ಅರ್ಜಿ ಆಹ್ವಾನ.!

Add a heading (55)

ಕರ್ನಾಟಕ ಸರ್ಕಾರವು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ವೃತ್ತಿಪರ ಚಟುವಟಿಕೆಗಳಿಗಾಗಿ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ಪತ್ರಕರ್ತರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರತಿನಿಧಿಸುವ ಮಾಧ್ಯಮ ಸಂಸ್ಥೆಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ನೋಂದಾಯಿತವಾಗಿರಬೇಕು.

2024-25ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತವಾಗಿ ಸಂಚರಿಸಲು ಪತ್ರಕರ್ತರಿಗೆ ಅವಕಾಶವಿದೆ.

ಅರ್ಹತೆ ಮತ್ತು ಅಗತ್ಯ ದಾಖಲೆಗಳೇನು?

ಗ್ರಾಮೀಣ ಪತ್ರಕರ್ತರು ಉಚಿತ ಬಸ್‌ ಪಾಸ್‌ ಪಡೆಯಲು ಈ ಕೆಳಗಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು:

ಯೋಜನೆಯ ವಿವರ:
ಅರ್ಜಿ ಸಲ್ಲಿಕೆ ಪ್ರಕ್ರಿಯೆ:

ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ ಪರಿಶೀಲಿಸಿ, ಅಗತ್ಯ ದಾಖಲೆಗಳೊಂದಿಗೆ ಕೇಂದ್ರ ಕಚೇರಿಗೆ ವರ್ಗಾಯಿಸಲಾಗುವುದು. ರಾಜ್ಯಮಟ್ಟದ ಆಯ್ಕೆ ಸಮಿತಿಯು ಪರಿಶೀಲನೆ ನಡೆಸಿ, ಆಯ್ಕೆಯಾದವರಿಗೆ ಬಸ್‌ ಪಾಸ್‌ ವಿತರಿಸಲಾಗುವುದು. ಸಾಮಾನ್ಯ ಮನರಂಜನಾ ವಾಹಿನಿಗಳು, ನಿಯತಕಾಲಿಕೆಗಳು, ಮತ್ತು ಮಾನ್ಯತೆ ಇಲ್ಲದ ಪತ್ರಕರ್ತರಿಗೆ ಈ ಯೋಜನೆಯಡಿ ಅವಕಾಶವಿಲ್ಲ.

ಅರ್ಜಿ ಎಲ್ಲಿ ಸಲ್ಲಿಕೆಮಾಡಬೇಕು:

ಆಸಕ್ತ ಮತ್ತು ಅರ್ಹ ಪತ್ರಕರ್ತರು ಗ್ರಾಮ ಒನ್‌ ಅಥವಾ ಕರ್ನಾಟಕ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್‌ ಮಾಡಿದ ದಾಖಲೆಗಳು ಮತ್ತು ಆನ್‌ಲೈನ್‌ ಅರ್ಜಿಯ ಮುದ್ರಿತ ಪ್ರತಿಯನ್ನು ಸ್ವಯಂ ದೃಢೀಕರಿಸಿ, ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

Exit mobile version