• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ವಾಪಸ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಧನ್ಯವಾದ ತಿಳಿಸಿದ ವಿದ್ಯಾರ್ಥಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2025 - 8:03 pm
in Flash News, ಕರ್ನಾಟಕ
0 0
0
Untitled design 2025 05 11t200026.272

ನವದೆಹಲಿ: ಶ್ರೀನಗರದಿಂದ ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.

ಪಾಕಿಸ್ತಾನದ ದಾಳಿ ನಡುವೆ ಉದ್ರಿಕ್ತ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜಮ್ಮುವಿನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಯಶಸ್ವಿ ಆಗಿದ್ದಾರೆ.

RelatedPosts

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!

ADVERTISEMENT
ADVERTISEMENT

ಪಾಕಿಸ್ತಾನವು ಅಧರ್ಮ ಮಾರ್ಗದಲ್ಲಿ ಭಾರತದ ಮೇಲೆ ದಾಳಿ ನಡೆಸುತ್ತಿದ್ದು, ಅದಕ್ಕೆ ಪ್ರತ್ಯುತ್ತರ ನೀಡಲಾಗುತ್ತಿದೆ. ಅಲ್ಲದೆ, ಕಣಿವೆ ರಾಜ್ಯದಲ್ಲಿನ ಎಲ್ಲರ ಜೀವ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ವಿದ್ಯಾರ್ಥಿಗಳ ತೆರವಿಗೆ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ನೆರವಾದ ಎಲ್ಲವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಈಗಾಗಲೇ ನವದೆಹಲಿ ತಲುಪಿದ್ದು, ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು.

ಶನಿವಾರ ಶ್ರೀನಗರದಿಂದ ಭದ್ರತೆಯ ನಡುವೆ ಬಸ್ ನಲ್ಲಿ ಜಮ್ಮುವಿಗೆ ಪ್ರಯಾಣಿಸಿದ್ದ ವಿದ್ಯಾರ್ಥಿಗಳು ಭಾನುವಾರ ಮಧ್ಯಾಹ್ನದ ಹೊತ್ತಿಗೆ ರೈಲಿನಲ್ಲಿ ದೆಹಲಿ ತಲುಪಿದರು. ವಿದ್ಯಾರ್ಥಿಗಳ ಸ್ಥಳಾಂತರ ಮತ್ತು ಪ್ರಯಾಣದ ಎಲ್ಲಾ ಪ್ರಕ್ರಿಯೆಗಳನ್ನು ಕೇಂದ್ರ ಸಚಿವರು ಖುದ್ದು ಉಸ್ತುವಾರಿ ವಹಿಸಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದರು.

ವಿದ್ಯಾರ್ಥಿಗಳು ನವದೆಹಲಿಗೆ ತಲುಪಿದ ನಂತರ ಅವರ ಉಸ್ತುವಾರಿಯನ್ನು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಅಧಿಕಾರಿಗಳೇ ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿ ಅವರ ಮನೆಗಳನ್ನು ತಲುಪುವವರೆಗೂ ನಾವು ಎಚ್ಚರಿಕೆ ವಹಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

“ಇಡೀ ದೇಶವು ಸವಾಲಿನ ಪರಿಸ್ಥಿತಿಯಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಮಾರ್ಗದರ್ಶನದಿಂದ ಮಾತ್ರ ಇದೆಲ್ಲಾ ಸಾಧ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಇಡೀ ಕೇಂದ್ರ ಸರ್ಕಾರದ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಮುಖ್ಯವಾಗಿ ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಸಚಿವಾಲಯದ ಅಧಿಕಾರಿಗಳನ್ನು ನಾನು ಶ್ಲಾಘಿಸುತ್ತೇನೆ. ನಮ್ಮ ಜನರ, ವಿಶೇಷವಾಗಿ ದೂರದ ಪ್ರದೇಶಗಳ ವಿದ್ಯಾರ್ಥಿಗಳ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸುರಕ್ಷಿತ ವಾಪಸ್, ವಿದ್ಯಾರ್ಥಿಗಳ ಸಂತಸ

ಶ್ರೀನಗರದಿಂದ ದೆಹಲಿಗೆ ಸುರಕ್ಷಿತವಾಗಿ ವಾಪಸ್ ಬಂದ ಬಗ್ಗೆ ಎಲ್ಲಾ ಹದಿಮೂರು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ನನ್ನದು ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮ. ನಾವು ಶ್ರೀನಗರದಲ್ಲಿದ್ದ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ತೀವ್ರ ಅನಿಶ್ಚಿತ ಮತ್ತು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ನೆರವಿನಿಂದ ನಾವು ಅಪಾಯದಿಂದ ಪಾರಾದೆವು. ಪ್ರಧಾನಿ ಮೋದಿಯವರ ಅವರ ಸ್ಪಷ್ಟ ಆದೇಶಗಳು ನಾವು ಸುರಕ್ಷಿತವಾಗಿ ವಾಪಸ್ ಆಗಿದ್ದೇವೆ. ನಮ್ಮನ್ನು ಯೋಗಕ್ಷೇಮ, ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ. ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಮ್ಮ ಸುರಕ್ಷಿತ ಪ್ರಯಾಣವನ್ನು ನಿಕಟವಾಗಿ ಗಮನಿಸುತ್ತಿದ್ದರು ಮತ್ತು ಅದು ನಮಗೆಲ್ಲರಿಗೂ ಬಹಳಷ್ಟು ಅನುಕೂಲವಾಯಿತು.

-ಹರ್ಷಿತ್,
ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಮ್ಮ ಪ್ರಧಾನಮಂತ್ರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ.

-ಭಾಗ್ಯಶ್ರೀ ಪ್ರಸಾದ್
ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1444 (10)

ಲಾಂಚ್ ಆಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ: ಕ್ಷಮೆ ಕೇಳಿದ ನಟ ಕಿರಣ್ ರಾಜ್

by ಶಾಲಿನಿ ಕೆ. ಡಿ
June 16, 2025 - 11:43 pm
0

1444 (8)

ಮೆಟಾದಿಂದ ವಾಟ್ಸಾಪ್‌ಗೆ ಜಾಹೀರಾತು: ಎರಡು ತಿಂಗಳಲ್ಲಿ ಹೊಸ ಬದಲಾವಣೆ!

by ಶಾಲಿನಿ ಕೆ. ಡಿ
June 16, 2025 - 11:23 pm
0

1444 (7)

ಬೆಂಗಳೂರಿಗರೇ ಎಚ್ಚರ..ಎಚ್ಚರ..ಎರಡು ದಿನ ಸಿಗೋದಿಲ್ಲಾ ಕಾವೇರಿ ವಾಟರ್!

by ಶಾಲಿನಿ ಕೆ. ಡಿ
June 16, 2025 - 11:07 pm
0

1444 (6)

“I Condom” ಎಂದ ಪಾಕ್ ಪ್ರಧಾನಿ: ಸೋಶಿಯಲ್‌ ಮೀಡಿಯಾದಲ್ಲಿ ಸಖತ್ ಟ್ರೋಲ್

by ಶಾಲಿನಿ ಕೆ. ಡಿ
June 16, 2025 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version