ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮಂಡಳಿಯ ಕಚೇರಿಯಲ್ಲಿ 26-27 ನೇ ಸಾಲಿನ ಸಾಂದೀಪಿನಿ ಶಿಷ್ಯವೇತನ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಮುಂದುವರಿದ ಜನಾಂಗ ಎನ್ನಿಸಿಕೊಂಡ ಬ್ರಾಹ್ಮಣರಲ್ಲೂ ಸಾಕಷ್ಟು ಬಡವರಿದ್ದಾರೆ. ಬಡ ಬ್ರಾಹ್ಮಣರ ಅಭಿವೃದ್ಧಿಗೆ ಮಂಡಳಿ ಹಲವಾರು ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೆ ತಂದಿದೆ. ಕಿರುಸಾಲ ಯೋಜನೆ, ಪ್ರತಿಭಾ ಪುರಸ್ಕಾರ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹೀಗೆ ವಿವಿಧ ಕಾರ್ಯಕ್ರಮಗಳ ಮೂಲಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಡ ಬ್ರಾಹ್ಮಣರ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ನೆರವಾಗುತ್ತಿದೆ.
ಈ ಯೋಜನೆಗಳಿಂದ ಹೆಚ್ಚೆಚ್ಚು ಜನರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಾಲ ವಸೂಲಾತಿ ಪ್ರಮಾಣ 98% ಆಗಿದೆ ಎನ್ನುವುದು ಸಂತಸದ ವಿಷಯ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಉತ್ತಮ ಶಿಕ್ಷಣ ಪಡೆಯಲಿ ಎನ್ನುವ ಉದ್ದೇಶದಿಂದ ಸಾಂದೀಪಿನಿ ಶಿಷ್ಯವೇತನ ಯೋಜನೆ ತರಲಾಗಿದ್ದು, ವಿದ್ಯಾವಂತರಾಗಿ ಬದುಕು ಕಟ್ಟಿಕೊಳ್ಳಲು ಇದು ಸಹಕಾರಿಯಾಗಲಿದೆ. ಇನ್ನೂ ಹೆಚ್ಚಿನ ಜನರಿಗೆ ಸಹಾಯ ನೀಡಲು 100 ಕೋಟಿ ರೂ ಅನುದಾನ ಅಗತ್ಯವಿದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಅಸಗೋಡು ಜಯಸಿಂಹ,ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಕೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
