• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಕುರ್ಚಿ ಕದನ: ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ದಿಢೀರ್ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 12:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 26T121612.006

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ವಿಷಯ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳ ನಡುವೆ ನಡೆಯುತ್ತಿರುವ ಕಿತ್ತಾಟಕ್ಕೆ ಈಗ ದಲಿತ ನಾಯಕರೂ ಸೇರ್ಪಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಇಂದು ನಿಗದಿಯಾಗಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದುಪಡಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ನಿನ್ನೆ ತಡರಾತ್ರಿ ಡಿ.ಕೆ. ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಭೆಯ ಬಗ್ಗೆ ಹೊರಗೆ ಯಾವುದೇ ಮಾಹಿತಿ ನೀಡದಿದ್ದರೂ, ಸಭೆಯ ನಂತರ ಜಾರಕಿಹೊಳಿ ಅವರ ನಡೆ ಗಮನ ಸೆಳೆದಿದೆ. ಸಭೆ ಬಳಿಕ, ಸತೀಶ್ ಜಾರಕಿಹೊಳಿ ತಮ್ಮ ಆಪ್ತರಿಗೆ ಡಿಕೆ ಶಿವಕುಮಾರ್ ಭೇಟಿಯ ವಿಷಯ ಪ್ರಸ್ತಾಪಿಸಿದ್ದಾರಂತೆ ಎನ್ನುವ ಮಾಹಿತಿ ಹೊರಬಿದ್ದಿದೆ.

RelatedPosts

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ! ಆಫೀಸ್ ಮುಗಿಸಿ ಬರುವವರೇ ಎಚ್ಚರ

ರಾಜೀನಾಮೆ ಬೆನ್ನಲ್ಲೇ ಭಾವುಕ ಪೋಸ್ಟ್! ಕರುನಾಡ ಜನತೆಗೆ ಕೈಮುಗಿದ ಸಿದ್ದು

ADVERTISEMENT
ADVERTISEMENT

ಈ ಗುಪ್ತ ಸಭೆಯ ಮುಂದಿನ ದಿನವೇ ಜಾರಕಿಹೊಳಿ ಮನೆಯಲ್ಲಿ ನಿಗದಿಯಾಗಿದ್ದ ಡಿನ್ನರ್ ಮೀಟಿಂಗ್ ದಿಢೀರ್ ರದ್ದು ಮಾಡಲಾಗಿದೆ. ಡಿನ್ನರ್ ಮೀಟಿಂಗ್‌ಗೆ ಹಲವು ನಾಯಕರು ಆಹ್ವಾನಿಸಿದ್ದರೂ, ಏಕಾಏಕಿ ರದ್ದಾಗಿದೆ ಎಂಬ ಸುದ್ದಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ.

ಈ ರದ್ದತಿಗೆ ಕಾರಣ ಏನು? ಡಿಕೆ ಶಿವಕುಮಾರ್ ಅವರೊಂದಿಗಿನ ಚರ್ಚೆಯಲ್ಲಿ ಯಾವುದಾದರೂ ಒಪ್ಪಂದಕ್ಕೆ ಬ್ರೇಕ್ ಬಿದ್ದಿದೆಯೇ? ಅಥವಾ ದಲಿತ ಸಿಎಂ ಒತ್ತಡ ಹೆಚ್ಚಾದ ಕಾರಣವೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ-ಮಲ್ಲಿಕಾರ್ಜುನ್‌ ಖರ್ಗೆ ದಿಢೀರ್ ಭೇಟಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಈಗ ಸಂಪೂರ್ಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣ ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಖರ್ಗೆ ಅವರ ರಾಜಾಜಿನಗರ ನಿವಾಸದಲ್ಲಿ ಸುಮಾರು ಒಂದು ಗಂಟೆ ಕಾಲ ನಡೆದ ಈ ಗೌಪ್ಯ ಮಾತುಕತೆಯಲ್ಲಿ ರಾಜ್ಯದ ರಾಜಕೀಯ ಬಿಕ್ಕಟ್ಟು, ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಡಿ.ಕೆ.ಶಿ ಬಣದಿಂದ ಪಕ್ಷಕ್ಕೆ ಆಗುತ್ತಿರುವ ತೀವ್ರ ಹಾನಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಖರ್ಗೆಯವರ ಗಮನಕ್ಕೆ ತಂದಿದ್ದಾರೆ ಎಂಬುದು ಆಂತರಿಕ ಮಾಹಿತಿ. ಇತ್ತೀಚೆಗೆ ಡಿ.ಕೆ.ಶಿ ಬಣದ ಕೆಲವು ಶಾಸಕರು ಮತ್ತು ಸಚಿವರು ಸಾರ್ವಜನಿಕವಾಗಿ ಸಿಎಂ ವಿರುದ್ಧ ಹರಿಹಾಯ್ದಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಎಂಬ ಆರೋಪ ಮಾಡಿದ್ದಾರೆ. ಇದು ಪಕ್ಷದ ಒಗ್ಗಟ್ಟಿಗೆ ಧಕ್ಕೆ ತಂದಿದೆ ಎಂಬುದು ಸಿದ್ದರಾಮಯ್ಯ ಅವರ ವಾದ.

ಹೈಕಮಾಂಡ್‌ನಿಂದ ಸಂಧಾನ ಸೂತ್ರ

ಸಿಎಂ ಭೇಟಿಗೂ ಮುನ್ನವೇ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರ ರವಾನಿಸಿದೆ. ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಸೇರಿದಂತೆ ದೆಹಲಿಯ ಉನ್ನತ ನಾಯಕರು ಇಬ್ಬರು ಬಣದ ನಾಯಕರನ್ನು ಶಾಂತಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲ. ಆದರೆ ಸೂಕ್ತ ಸಮಯದಲ್ಲಿ ಎಲ್ಲವನ್ನೂ ಬಗೆಹರಿಸಲಾಗುವುದು. ಅಗತ್ಯ ಬಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಾಗುವುದು ಎಂದು ರಾಹುಲ್ ಗಾಂಧಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂಬುದು ಆಪ್ತ ಮೂಲಗಳ ಮಾಹಿತಿ.

ತನ್ವೀರ್ ಸೇಠ್ ವಿಶ್ವಾಸ

ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಒಂದೆರಡು ದಿನಗಳಲ್ಲಿ ಪವರ್ ಶೇರಿಂಗ್ ಗೊಂದಲ ಸಂಪೂರ್ಣ ಬಗೆಹರಿಯುತ್ತದೆ. ಪಕ್ಷ ಒಗ್ಗಟ್ಟಿನಿಂದ ಇದೆ, ಯಾರೂ ದೊಡ್ಡ ತೊಂದರೆ ಪಡುವಂತಿಲ್ಲ. ಹೈಕಮಾಂಡ್ ಎಲ್ಲವನ್ನೂ ನೋಡಿಕೊಳ್ಳುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿ ಬಣದಲ್ಲಿ ಆತ್ವರ

ಇತ್ತ ಡಿ.ಕೆ. ಶಿವಕುಮಾರ್ ಬಣದಲ್ಲಿ ತೀವ್ರ ಅಸಮಾಧಾನ ಮುಂದುವರಿದಿದ್ದು, 2.5 ವರ್ಷ ಪೂರ್ತಿಯಾಗುವ ಮೊದಲೇ ಸಿಎಂ ಬದಲಾವಣೆ ಮಾಡಿ ಎಂಬ ಒತ್ತಡ ಜೋರಾಗಿದೆ. ಇದಕ್ಕೆ ಸಿದ್ದರಾಮಯ್ಯ 5 ವರ್ಷ ಪೂರ್ತಿ ನಾನೇ ಸಿಎಂ ಆಗಿರುತ್ತೇನೆ ಎಂದು ಸವಾಲು ಹಾಕಿದ್ದಾರೆ. ಇಬ್ಬರು ಬಣದ ಶಾಸಕರಲ್ಲಿ, ಡಿ.ಕೆ.ಶಿ ಬಣ ಸ್ವಲ್ಪ ಮೇಲುಗೈ ಸಾಧಿಸಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿ.ಕೆ.ಶಿ ಅವರು ಗುರುವಾರ ರಾತ್ರಿ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಉತ್ಸವಮೂರ್ತಿಯನ್ನು ಮನೆಗೆ ಕರೆಸಿಕೊಂಡು ಸಂಕಲ್ಪ ಪೂಜೆ ಮಾಡಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಈಗ ಎಲ್ಲರ ದೃಷ್ಟಿ ದೆಹಲಿಯ ಕಡೆಗೆ. ಒಂದೆರಡು ದಿನಗಳಲ್ಲಿ ಯಾವ ನಿರ್ಧಾರ ಬರುತ್ತದೆ, ಯಾರ ಕೈ ಮೇಲಾಗುತ್ತದೆ ಎಂಬುದೇ ಕಾಂಗ್ರೆಸ್ ಕಾರ್ಯಕರ್ತರ ಪ್ರಶ್ನೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 28T231948.397

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

by ಶ್ರೀದೇವಿ ಬಿ. ವೈ
May 28, 2026 - 11:29 pm
0

BeFunky collage 2026 05 28T225823.500

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

by ಶ್ರೀದೇವಿ ಬಿ. ವೈ
May 28, 2026 - 10:59 pm
0

BeFunky collage 2026 05 28T223105.372

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

by ಶ್ರೀದೇವಿ ಬಿ. ವೈ
May 28, 2026 - 10:31 pm
0

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version