ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

ಬೆಂಗಳೂರು: ನಗರದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಶಾಲಾ ಬಸ್ ಮತ್ತು ಸ್ಕೂಟರ್ ನಡುವೆ ನಡೆದ ಈ ಭೀಕರ ಅಪಘಾತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಗರದ ಸಿಎಆರ್ (CAR) ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ನಾಗನಗೌಡ ಅವರು ಇಂದು ಬೆಳಿಗ್ಗೆ ತಮ್ಮ ಇಬ್ಬರು ಮಕ್ಕಳಾದ ವರ್ಷ (2 ವರ್ಷ) ಮತ್ತು ಭಾನು (4 ವರ್ಷ) ರನ್ನು ಸ್ಕೂಟರ್‌ನಲ್ಲಿ ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಅತಿ ವೇಗವಾಗಿ ಬಂದ ‘ಅಜ್ ಮೋನಿ’ ಶಾಲೆಯ ಬಸ್, ಏಕಾಏಕಿ ತಿರುವು ಪಡೆದು ಸ್ಕೂಟರ್‌ ಮೇಲೆ ಹರಿಸಿದೆ. ದುರದೃಷ್ಟವಶಾತ್, ಶಾಲಾ ಬಸ್‌ನ ಚಕ್ರಗಳು ಮಕ್ಕಳ ಮೇಲೆ ಹರಿದಿದ್ದು, ಮಕ್ಕಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದ ಕೂಡಲೇ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ (DCP Traffic North) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.  ಅಜ್ ಮೋನಿ ಶಾಲಾ ಬಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಭೀಕರ ಘಟನೆಯೊಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮನೆಯೊಳಗೆ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ.

35 ವರ್ಷದ ಮನೀಶ್ ಕುಮಾರ್ ಎಂಬುವವರು ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ದಂಪತಿ ತಮ್ಮ ಮೂವರು ಪುಟ್ಟ ಮಕ್ಕಳನ್ನು ಹತ್ಯೆಗೈದಿದ್ದಾರೆ ಎನ್ನುವುದು ಹೊರಬಂದಿದೆ.

ಮೃತ ಮಕ್ಕಳನ್ನು ಹನಿ (8), ಪ್ರಿಯಾಂಶಿ (5) ಮತ್ತು ಪ್ರತೀಕ್ (3) ಎಂದು ಗುರುತಿಸಲಾಗಿದೆ. ಈ ದಂಪತಿ 2018ರಲ್ಲಿ ವಿವಾಹವಾಗಿದ್ದು, ಮದುವೆಯ ಬಳಿಕ ಸಂತೋಷದಿಂದ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..

ಕತ್ತು ಹಿಸುಕಿ ಮಕ್ಕಳ ಹತ್ಯೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿ ಮೊದಲು ತಮ್ಮ ಮೂವರು ಮಕ್ಕಳನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆಗೈದಿದ್ದಾರೆ. ನಂತರ ಮನೀಶ್ ಕುಮಾರ್ ವಿದ್ಯುತ್ ವೈರ್ ಹಿಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ನಡೆದ ಮನೆಯೊಳಗೆ ಐವರ ಮೃತದೇಹಗಳು ಪತ್ತೆಯಾಗಿದ್ದು, ನೆರೆಹೊರೆಯವರು ಮನೆ ಬಾಗಿಲು ತೆರೆದಿರದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಈ ದಾರುಣ ಘಟನೆ ಬೆಳಕಿಗೆ ಬಂದಿದೆ.

ಸೆಲ್ಫಿ ವಿಡಿಯೋ ಮತ್ತು ಡೆತ್ ನೋಟ್ ಪತ್ತೆ

ಆತ್ಮಹತ್ಯೆಗೂ ಮುನ್ನ ಮನೀಶ್ ಕುಮಾರ್ ಸೆಲ್ಫಿ ವಿಡಿಯೋ ಮಾಡಿದ್ದು, ಆ ವಿಡಿಯೋದಲ್ಲಿ “ನಮ್ಮ ಸಾವಿಗೆ ನಾವೇ ಕಾರಣ, ಯಾರೂ ಜವಾಬ್ದಾರರಲ್ಲ” ಎಂದು ಹೇಳಿರುವುದು ತಿಳಿದುಬಂದಿದೆ. ಅಲ್ಲದೆ ಮನೆಯಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದಲ್ಲಿಯೂ ಇದೇ ಮಾತುಗಳನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ವಿಡಿಯೋ ಮತ್ತು ಡೆತ್ ನೋಟ್ ಆಧಾರವಾಗಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Exit mobile version