• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸಿದ್ದು ಬಜೆಟ್‌‌ನ 4 ಅತಿ ಪ್ರಮುಖ ವಿಶೇಷತೆಗಳು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 12:21 pm
in Flash News, ಕರ್ನಾಟಕ, ವಾಣಿಜ್ಯ
0 0
0
ಕರ್ನಾಟಕ ಬಜೆಟ್ 2025 26 (2)

ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲಿ 4 ಪ್ರಮುಖ ಅಂಶಗಳಿಗೆ ಪ್ರಾಮುಖ್ಯತೆ ನೀಡಿದ್ದು, ಇದರ ಹೈಲೈಟ್ಸ್‌‌ಗಳು ಇಲ್ಲಿದೆ. 

1. ಸಿದ್ದು ಬಜೆಟ್‌ ನಲ್ಲಿ ಆದಾಯ ಹೆಚ್ಚಳ ಹೆಚ್ಚಳಕ್ಕಾಗಿ..

ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಸರ್ಕಾರದ ಆದಾಯವನ್ನು ಹೆಚ್ಚಿಸಲು ಹಲವಾರು ಹೊಸ ಯೋಜನೆಗಳನ್ನು ಮತ್ತು ತೆರಿಗೆ ಪರಿಷ್ಕರಣೆಗಳನ್ನು ಪ್ರಸ್ತಾಪಿಸಲಾಗಿದೆ. ಸರ್ಕಾರ ಮದ್ಯದ ದರವನ್ನು ಹೆಚ್ಚಿಸುವ ಮೂಲಕ ಅಬಕಾರಿ ಇಲಾಖೆಯಿಂದ 40 ಸಾವಿರ ಕೋಟಿ ಆದಾಯವನ್ನು ಸಂಪಾದಿಸುವ ಗುರಿ ಹೊಂದಿದೆ. ಇದರಿಂದ ರಾಜ್ಯದ ಆದಾಯಕ್ಕೆ ಸಹಾಯವಾಗಲಿದೆ.

RelatedPosts

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

ADVERTISEMENT
ADVERTISEMENT

ನೌಕರರು ಮತ್ತು ವೃತ್ತಿಪರರ ಮೇಲೆ ವಿಧಿಸಲಾದ ಪ್ರೊಫೆಷನಲ್ ಟ್ಯಾಕ್ಸ್ ಅನ್ನು 200 ರೂಪಾಯಿಯಿಂದ 300 ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ ತೆರಿಗೆ ಆದಾಯದಲ್ಲಿ ಹೆಚ್ಚಳವಾಗಲಿದೆ.

ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಜಾಹೀರಾತುಗಳ ಆದಾಯವನ್ನು ಹೆಚ್ಚಿಸಲು ಹೊಸ ನೀತಿಗಳನ್ನು ಜಾರಿಗೆ ತರುವ ಯೋಜನೆಗಳನ್ನು ಸರ್ಕಾರ ಮುಂದಿಟ್ಟಿದೆ. ಇದು ಪಾಲಿಕೆಯ ನಿರ್ವಹಣೆಗೆ ಹೆಚ್ಚುವರಿ ಆದಾಯ ಒದಗಿಸುವ ಸಾಧ್ಯತೆ ಇದೆ.

ಸರ್ಕಾರ ಸೂರ್ಯನಗರ ಲೇಔಟ್‌ನಲ್ಲಿ ನಿವೇಶನಗಳನ್ನು ಹಂಚುವ ಮೂಲಕ ಆಸ್ತಿ ಮಾರಾಟದಲ್ಲಿ ನಿರೀಕ್ಷಿತ ಆದಾಯವನ್ನು ಪಡೆಯಲು ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರ ಮೋಟಾರು ವಾಹನ ತೆರಿಗೆಯಿಂದ 15 ಸಾವಿರ ಕೋಟಿ ರೂಪಾಯಿ ಆದಾಯವನ್ನು ಪಡೆಯುವ ಗುರಿ ಹೊಂದಿದ್ದು, ಇದು ಸಾರಿಗೆ ಇಲಾಖೆ ಮೂಲಕ ರಾಜ್ಯದ ಆರ್ಥಿಕ ಸ್ಥಿರತೆಯನ್ನೇ ಹೆಚ್ಚಿಸುವ ನಿರೀಕ್ಷೆ ಇದೆ.

ವಾಣಿಜ್ಯ ತೆರಿಗೆಯಿಂದ 1 ಲಕ್ಷ 5 ಸಾವಿರ ಕೋಟಿ ರೂಪಾಯಿ ಆದಾಯ ಪಡೆಯುವ ಉದ್ದೇಶ ಸರ್ಕಾರ ಹೊಂದಿದ್ದು, ಇದು ವ್ಯಾಪಾರ, ಉದ್ಯಮ, ಮತ್ತು ವ್ಯವಹಾರಿಕ ಚಟುವಟಿಕೆಗಳ ಮೇಲಿನ ಸುಧಾರಿತ ತೆರಿಗೆ ಯೋಜನೆಗಳ ಮೂಲಕ ಸಾಧ್ಯವಾಗಲಿದೆ.

ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 9 ಸಾವಿರ ಕೋಟಿ ರೂಪಾಯಿ ಆದಾಯವನ್ನು ಗಳಿಸಲು ಸರ್ಕಾರ ತಂತ್ರ ರೂಪಿಸಿದೆ. ಕಂದಾಯ ಇಲಾಖೆಯಿಂದ 24 ಸಾವಿರ ಕೋಟಿ ರೂಪಾಯಿ ಆದಾಯವನ್ನು ಪಡೆಯುವ ಗುರಿ ಸರ್ಕಾರ ಹೊಂದಿದ್ದು, ಹೂಡಿಕೆ ಯೋಜನೆಗಳ ಮೂಲಕ 10 ಲಕ್ಷ ಕೋಟಿಗೂ ಹೆಚ್ಚು ಆದಾಯ ನಿರೀಕ್ಷಿಸಲಾಗಿದೆ. 

2. ಬಜೆಟ್ ನಲ್ಲಿ ಮಲ್ಟಿಪ್ಲೆಕ್ಸ್ ಗೆ ಮೂಗುದಾರ..!

Multiplex theatre

ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ಏರಿಕೆಗೆ ಈಗ ನಿಯಂತ್ರಿಸಲು ಹೊರಟಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರವನ್ನು ಗರಿಷ್ಠ 200 ರೂ.ಮಿತಿಯೊಳಗೆ ಇಡಲು ಹೊಸ ನಿಯಮ ಜಾರಿಯಾಗಿದೆ. ಇದರಿಂದ, ಸ್ಟಾರ್ ನಟರ ಸಿನಿಮಾಗಳಿಗಾಗಿ ಸಾವಿರಗಟ್ಟಲೆ ಹೆಚ್ಚಿಸುತ್ತಿದ್ದ ಟಿಕೆಟ್ ದರಗಳಿಗೆ ಅಡ್ಡಬಿದ್ದಂತಾಗಿದೆ.

ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸರ್ಕಾರ ಟಿಕೆಟ್ ದರದ ಮೇಲಿನ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ಕರ್ನಾಟಕವೂ ಇದೇ ಮಾದರಿಯನ್ನು ಅನುಸರಿಸಿದೆ. 

ಇದೀಗ ಬಜೆಟ್‌ನಲ್ಲಿ ಘೋಷಿಸಿರುವ ಈ ನಿಯಮ 2017-18ರಲ್ಲಿ ಸಿದ್ದರಾಮಯ್ಯ ಸರ್ಕಾರದ ಸಮಯದಲ್ಲಿಯೇ ಜಾರಿಗೆ ತರುವ ಯತ್ನ ಮಾಡಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೋರ್ಟಿನಲ್ಲಿ ಈ ನಿರ್ಧಾರ ಹಿನ್ನಡೆ ಕಂಡಿತ್ತು. ಈಗ ಅದನ್ನು ಪುನಃ ಬಜೆಟ್‌ನಲ್ಲಿ ಸೇರಿಸಿ, ಸರಿಯಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

3. ಮತ್ತೆ ಎಣ್ಣೆ ರೇಟು ಜಾಸ್ತಿ..!

Whatsapp image 2024 08 27 at 11.18.30 am

ರಾಜ್ಯದಲ್ಲಿ ಮದ್ಯದ ದರವನ್ನು ಮತ್ತೊಮ್ಮೆ ಏರಿಸುವ ನಿರ್ಧಾರ ಫಿಕ್ಸ್ ಆಗಿದ್ದು, ನೆರೆರಾಜ್ಯಗಳ ದರವನ್ನು ಹೋಲುವ ರೀತಿಯಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ. ವಿಶೇಷವಾಗಿ, ಪ್ರೀಮಿಯಂ ಬ್ರಾಂಡ್ ಮದ್ಯದ ದರ ಹೆಚ್ಚಳ ಖಚಿತವಾಗಿದೆ. 

ದುಬಾರಿ ಬೆಲೆಯ ಮದ್ಯವಾದ ಸ್ಕಾಚ್ ವಿಸ್ಕಿ, ಜಾನಿ ವಾಕರ್, ಬ್ಲಾಕ್ ಡಾಗ್, 100 ಪೈಪರ್ಸ್, ಅಮೃತ್, ಗ್ಲೆನ್ ಫಿಡ್ಜ್, ರೆಡ್ ಲೇಬಲ್, ಬ್ಲಾಕ್ & ವೈಟ್, ಜಾಕ್ ಡೇನಿಯಲ್ ಮುಂತಾದ ಬ್ರಾಂಡ್‌ಗಳ ಮೌಲ್ಯ ಗಣನೀಯವಾಗಿ ಏರಲಿದೆ.

ಇದರೊಂದಿಗೆ, ರಾಜ್ಯ ಸರ್ಕಾರ ಮದ್ಯದ ಲೈಸೆನ್ಸ್ ಹರಾಜು ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ನಡೆಸಲು ಮುಂದಾಗಿದೆ. ಇದರಿಂದ ಲೈಸೆನ್ಸ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ ಮತ್ತು ಸರ್ಕಾರದ ಆದಾಯವೂ ಹೆಚ್ಚುವ ನಿರೀಕ್ಷೆಯಿದೆ.

4. ಸಿದ್ದು ಬಜೆಟ್ ನಲ್ಲಿ ಮುಸ್ಲಿಮರಿಗೆ ಬಂಪರ್..!

Ramdandp 1679217740

ರಾಜ್ಯ ಸರ್ಕಾರ 2 ಕೋಟಿ ರೂಪಾಯಿವರೆಗೆ ಇರುವ ಟೆಂಡರ್ ಗುತ್ತಿಗೆಗಳಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ವಿಶೇಷ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಿದೆ. ಇದು ಮುಸ್ಲಿಂ ಉದ್ಯಮಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹೊಸ ಅವಕಾಶಗಳನ್ನು ಒದಗಿಸಲಿದೆ. ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ, ಮುಸ್ಲಿಂ ಸಮುದಾಯದ ನಿವಾಸ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. 

ಮುಸ್ಲಿಂ ಮಹಿಳೆಯರ ಸರಳ ಮದುವೆಗಾಗಿ ಪ್ರತಿ ಕುಟುಂಬಕ್ಕೆ 50,000 ರೂ. ಅನುದಾನ ನೀಡುವ ಯೋಜನೆ ಘೋಷಿಸಲಾಗಿದೆ. ಈ ಯೋಜನೆ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಬಹಳ ನೆರವಾಗಲಿದೆ. ಮುಸ್ಲಿಂ ಸಮುದಾಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಲು, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳನ್ನು (ಎಂಜಿನಿಯರಿಂಗ್, ಮೆಡಿಕಲ್, ಲಾ ಇತ್ಯಾದಿ) ಕಲಿಯಲು ಸರ್ಕಾರ 5 ಲಕ್ಷದವರೆಗೆ 50% ಶುಲ್ಕ ಮರುಪಾವತಿಸಲು ನಿರ್ಧರಿಸಿದೆ. ವಿದೇಶದಲ್ಲಿ ಓದಲು ಇಚ್ಛಿಸುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಮನ್ನಾ ಅನುದಾನ 20 ಲಕ್ಷದಿಂದ 30 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. 

ರಾಜ್ಯದಲ್ಲಿ ವಕ್ಫ್ ಆಸ್ತಿಯ ರಕ್ಷಣೆ ಮತ್ತು ಅಭಿವೃದ್ಧಿಗೆ 150 ಕೋಟಿ ರೂಪಾಯಿ ಮೀಸಲಿಟ್ಟು, ಅದನ್ನು ಸಮುದಾಯ ಹಿತಕ್ಕಾಗಿ ಬಳಕೆ ಮಾಡಲಾಗುವುದು. ಮುಸ್ಲಿಂ ವಿದ್ಯಾರ್ಥಿಗಳಿಗೆ ಹಜ್ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕೇಂದ್ರವನ್ನು ಸ್ಥಾಪಿಸುವ ಮೂಲಕ ಓದುಗರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.

25,000 ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ. ಉಳ್ಳಾಲದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಪಿಯು ಕಾಲೇಜು ಸ್ಥಾಪನೆ ಮಾಡುವ ಮೂಲಕ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version