• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿ ರೂಪಿಸಿ: ಆರ್.ಅಶೋಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 7:06 pm
in Flash News, ಕರ್ನಾಟಕ
0 0
0
Untitled design 2025 04 13t190506.894

ಬೆಂಗಳೂರು, ಏಪ್ರಿಲ್ 13 : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು.

RelatedPosts

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ಪಕ್ಷ, ಜಾತಿ, ಧರ್ಮ ಒಡೆಯುವುದರಲ್ಲಿ ನಂ.1 ಆಗಿದ್ದಾರೆ. ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದರು.

ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದು ಹಳೆ ಕಾಂಗ್ರೆಸ್. ಈಗಿನ ಕಾಂಗ್ರೆಸ್ ನಲ್ಲಿ ಹಳಬರು ಇಲ್ಲ‌. ಈ ಕಾಂಗ್ರೆಸ್ ಒಕ್ಕಲಿಗರು, ಲಿಂಗಾಯತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ‌. ಈಗಲೂ ಸಮಯವಿದೆ. ಆರು ತಿಂಗಳು ತಡವಾದರೂ ಪರವಾಗಿಲ್ಲ‌‌. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ಮತ್ತೆ ರೂಪಿಸಲಿ ಎಂದು ಆಗ್ರಹಿಸಿದರು.

ಈ ವರದಿಗೆ 150 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ಅಧಿಕಾರಿ ಕಾಂತರಾಜು ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಡಿಕ್ಟೇಶನ್ ಮಾಡಿಸಿ ವರದಿ ಬರೆಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ಹಣವನ್ನು ಯಾರು ತಿಂದಿದ್ದಾರೆ ಎಂದು ತನಿಖೆ ಮಾಡಬೇಕಿದೆ. ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ವರದಿ ಮಾಡಲಾಗಿದೆ ಎಂದರು.

ಹಳ್ಳಿಕಾರ್, ಕುಂಚಿಟಿಗರನ್ನು ಬೇರೆ ಮಾಡಲಾಗಿದೆ. ರೆಡ್ಡಿ ಲಿಂಗಾಯತರನ್ನು ಪ್ರತ್ಯೇಕ ಮಾಡಲಾಗಿದೆ. ಇಂತಹ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದನ್ನು ಸಚಿವರು ಒಪ್ಪಿದರೆ ಆಯಾ ಸಮುದಾಯದ ಜನರು ಅವರನ್ನು ಒಪ್ಪುವುದಿಲ್ಲ. ಈ ವರದಿಯಿಂದಾಗಿ ಕಾಂಗ್ರೆಸ್ ನಲ್ಲೇ ದಂಗೆ ಆರಂಭವಾಗಲಿದೆ. ಸಮುದಾಯಗಳ ಜನರು ಮುಂದಿನ ಚುನಾವಣೆಯಲ್ಲಿ ಇವರನ್ನು ಹತ್ತಿರ ಸೇರಿಸುವುದಿಲ್ಲ. ಒಕ್ಕಲಿಗ ಸ್ವಾಮೀಜಿಯವರು ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇದೇ ರೀತಿ ಬೇರೆ ಸಮುದಾಯದವರೂ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು ಸ್ಥಾಪಿಸಿದ್ದರು‌. ಆದರೆ ಬಳಿಕ ಇಟಲಿ ಮೂಲದ ಸೋನಿಯಾ ಗಾಂಧಿ ಹಾಗೂ ಮಕ್ಕಳು 5 ಸಾವಿರ ಕೋಟಿ ಆಸ್ತಿ ಲೂಟಿ ಮಾಡಿದ್ದಾರೆ. ಅದು ದೇಶದ ಆಸ್ತಿಯೇ ಹೊರತು, ಇಟಲಿಯ ಆಸ್ತಿಯಲ್ಲ. ಈ ನಿಟ್ಟಿನಲ್ಲಿ ಇಡಿ ಉತ್ತಮ ಕೆಲಸ ಮಾಡಿದೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಮೀಸಲಾತಿ ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಕ್ಕೆ ಅಧಿಕಾರವಿಲ್ಲ‌. ಜೊತೆಗೆ ಒಟ್ಟು ಮೀಸಲಾತಿ 50% ಗಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ. ಹೆಚ್ಚಿನ ಮೀಸಲಾತಿಯನ್ನು ಯಾವ ಕಾನೂನಿನಡಿ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಲಿ. ಬಿಜೆಪಿ ಇದ್ದಾಗ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ತೆಗೆದು ಬೇರೆಯವರಿಗೆ ನೀಡಲಾಗಿತ್ತು ಎಂದರು‌.

ಬಿಜೆಪಿ-ಜೆಡಿಎಸ್ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ಹಾಲಿನ ದರ, ಡೀಸೆಲ್, ವಿದ್ಯುತ್ ಮೊದಲಾದ ದರಗಳನ್ನು ಕಾಂಗ್ರೆಸ್ ಏರಿಸಿದೆ. ಕಾಂಗ್ರೆಸ್ ಎಲ್ಲೂ ದರ ಇಳಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಪಾರ್ಕಿಂಗ್, ಕಸ ಶುಲ್ಕ ಮಾಡಲಾಗಿದೆ. ಬೆಂಗಳೂರಿನ ಜನರನ್ನು ತೆರಿಗೆಯಿಂದಲೇ ಹಿಂಡುತ್ತಿದ್ದಾರೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (14)

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 30, 2026 - 7:38 am
0

Untitled design 2026 07 30T071448.734

ಅತಿಯಾದ ಕ್ಯಾಫಿನ್, ಎನರ್ಜಿ ಡ್ರಿಂಕ್ಸ್ ನಿಮ್ಮ ಹೃದಯದ ಲಯಕ್ಕೆ ಅಪಾಯವೇ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
July 30, 2026 - 7:16 am
0

Untitled design 2026 07 30T063858.913

ರಾಶಿಫಲ: ಈ ರಾಶಿಯವರ ಮಾತು ಸಮಸ್ಯೆಗೆ ಕಾರಣವಾಗಬಹುದು, ಕೆಲವರಿಗೆ ಧನ ಲಾಭ

by ಶಾಲಿನಿ ಕೆ. ಡಿ
July 30, 2026 - 6:39 am
0

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (14)
    ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    July 30, 2026 | 0
  • Your paragraph text (20)
    ಬರ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನೀರು ಕೊಡುವಂತೆ ಆದೇಶಿಸುವುದು ಎಷ್ಟು ಸರಿ?: ಪರಮೇಶ್ವರ್‌ ಕಿಡಿ
    July 29, 2026 | 0
  • Your paragraph text (17)
    ತಮಿಳುನಾಡಿಗೆ ಕಾವೇರಿ ನೀರು, ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ: ರೈತರಿಗೆ ವಿಜಯೇಂದ್ರ ಕರೆ
    July 29, 2026 | 0
  • Your paragraph text (16)
    ಬಂಗಾರದ ಬೆಲೆಯಲ್ಲಿ ಇಳಿಕೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ
    July 29, 2026 | 0
  • Your paragraph text (14)
    ಬಸ್‌ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ: ಕಾನ್ಸ್ಟೇಬಲ್‌ಗೆ ಹಿಗ್ಗಾಮುಗ್ಗಾ ಥಳಿತ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version