ಜಿ ರಾಮ್ ಜಿಯಲ್ಲಿ ಸೀತಾ ರಾಮ, ಕೌಶಲ್ಯ ರಾಮ ಇಲ್ಲ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

Untitled design 2026 01 27T142558.559

ಮನರೇಗಾ ರದ್ದು ಮಾಡಿ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿದ್ದಾರೆ. ದುರುದ್ದೇಶದಿಂದ ರಾಮ್ ಹೆಸರು ಬರುವ ರೀತಿ ಮಾಡಿದ್ದಾರೆ. ಅಲ್ಲಿ ಸೀತಾ ರಾಮ, ಕೌಶಲ್ಯ ರಾಮ, ದಶರತ ರಾಮ ಇಲ್ಲ. ಮನಹೋಹನ್ ಸಿಂಗ್ ಇದ್ದಾಗ ಈ ಕಾಯ್ದೆ ಮಾಡಲಾಗಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಅನೇಕ ಕಾಯ್ದೆ ಜಾರಿಗೊಂಡಿತ್ತು‌. ಬಡವರು, ದಲಿತರು, ಅಲ್ಪಸಂಖ್ಯಾತರು, ರೈತರ ಬಗ್ಗೆ ಕಾಂಗ್ರೆಸ್ ಮಾತ್ರ ಚಿಂತನೆ ಮಾಡುತ್ತದೆ. ಬಿಜೆಪಿ ಎಲ್ಲಾ ಕಾರ್ಯಕ್ರಮ ನಾಶ ಮಾಡಿ ಉದ್ಯೋಗ ಸಿಗದಂತೆ ಮಾಡಿದ್ದಾರೆ. ಬಡವರಿಗೆ ಹಣಕಾಸು ಸಿಗಬಾರದು, ಅವರು ಸೇವಕರಾಗಿ ಇರಬೇಕು ಎಂಬ ಉದ್ದೇಶದಿಂದ ಆರ್‌ಎಸ್ಎಸ್ ಮಾರ್ಗದರ್ಶನ ಮಾಡಿ ಕಾಯ್ದೆ ರದ್ದು ಮಾಡಲಾಗಿದೆ‌ ಎಂದು ಕಾಂಗ್ರೆಸ್‌ ನಾಯಕರು ವಾಗ್ವಾದ ನಡೆಸಿದ್ದಾರೆ.

ಮನರೇಗಾದಲ್ಲಿ ಉದ್ಯೋಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ತೀರ್ಮಾನ ಆಗುತ್ತಿತ್ತು. ಆದರೆ ಜಿ ರಾಮ್ ಜಿ ಯಲ್ಲಿ, ದೆಹಲಿಯಲ್ಲಿ ಎಲ್ಲ ತೀರ್ಮಾನ ಆಗುತ್ತದೆ. ನೀವು ಉದ್ದೇಶಿಸಿದ ಕಡೆ ಕೆಲಸ ಸಿಗಲ್ಲ ಎಂದು ಪ್ರತಿಭಟನೆಯಲ್ಲಿ ವಿವರಿಸದರು.
ಒಂದು ಪಂಚಾಯತಿಗೆ ಒಂದು ಕೋಟಿ ಸಿಗ್ತಾ ಇತ್ತು. ಆದರೆ ಇನ್ಮುಂದೆ ಸಿಗುವುದಿಲ್ಲ. ಕಾಯ್ದೆ ಜಾರಿಗೆ 40% ರಾಜ್ಯ ಸರ್ಕಾರ ಹಾಗೂ ಕೇಂದ್ರ 60% ಅನುದಾನ ನೀಡಬೇಕಾಗಿದೆ. ಕೇಂದ್ರದ ನೀತಿಯಿಂದಾಗಿ ಅನೇಕ ರಾಜ್ಯಗಳು ಕಷ್ಟದಲ್ಲಿವೆ. ಹೀಗಾಗಿ ಇಡೀ ದೇಶದಲ್ಲಿ ಇದರ ವಿರುದ್ಧ ಪ್ರತಿಭಟನೆ ನಡೆಯಲಿದೆ. ವಿಬಿ ಜಿ ರಾವ್ ಜಿ ರದ್ದು ಮಾಡಿ ಮನರೇಗಾ ಪುನಸ್ಥಾಪನೆ ಮಾಡುವವರೆಗೆ ಹೋರಾಟ ಮಾಡಲಾಗುತ್ತದೆ ಎಂದು ರಾಜ್ಯ ಕೈ ನಾಯಕರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದರ ಹಿಂದೆ ಆರ್‌ಎಸ್‌ಎಸ್‌ ಇದೆ, ಬಡವರು ಬಲಯುತವಾಗಬಾರದು ಎಂಬುವುದು ಉದ್ದೇಶವಾಗಿದೆ. ಸಮಾಜದಲ್ಲಿ ಅಸಮಾನತೆ ಇರಬೇಕು ಎಂಬುದು ಆರ್ ಎಸ್ ಎಸ್ ಹುನ್ನಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಾತ್ಮಾ ಗಾಂಧಿಯನ್ನು ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಹತ್ಯೆ ಮಾಡಿದೆ. ಇನ್ನು ನಾವು ಬಿಡಬೇಕಾ ? ಬಿಜೆಪಿ ಪ್ರತಿದಿನ ಸುಳ್ಳು ಹೇಳುತ್ತಿದೆ. ಮನರೇಗಾ ರದ್ದು ವಿಚಾರವಾಗಿ ನಾವು ವಿಶೇಷ ಅಧಿವೇಶನ ಕರೆದಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Exit mobile version