• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 3:47 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಣೆ

ಮಂಡ್ಯ: ರಾಜ್ಯದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ, ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಜನಸೇವೆಯಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾಜಿ ವಿಧಾನಸಭಾಧ್ಯಕ್ಷ ದಿವಂಗತ ಕೃಷ್ಣ ಅವರ 86ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ವಯಸ್ಸು, ಆರೋಗ್ಯ ಹಾಗೂ ಇಂದಿನ ರಾಜಕೀಯ ಪರಿಸ್ಥಿತಿಯನ್ನು ಉಲ್ಲೇಖಿಸಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

RelatedPosts

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫೈನಲ್ ಕೌಂಟ್‌ಡೌನ್: ಇಂದು ಹೈಕಮಾಂಡ್ ಮಹತ್ವದ ಸಭೆ

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

“ಈಗ ನನಗೆ 79 ವರ್ಷ. ನಮ್ಮ ಸರ್ಕಾರದ ಅವಧಿ ಪೂರ್ಣಗೊಳ್ಳುವ ವೇಳೆಗೆ ನನಗೆ 81-82 ವರ್ಷವಾಗಿರುತ್ತದೆ. ಆಗ ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಆರೋಗ್ಯವೂ ಅಷ್ಟಾಗಿ ಸಹಕರಿಸುವುದಿಲ್ಲ. ಆದ್ದರಿಂದ 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ,” ಎಂದು ಹೇಳಿದರು.

ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದರಿಂದ ರಾಜಕೀಯ ಜೀವನಕ್ಕೆ ವಿದಾಯ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಜನರ ಕಷ್ಟ-ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ನನ್ನ ಮುಂದಿನ ಬದುಕನ್ನೂ ಜನಸೇವೆಗೆ ಮೀಸಲಿಡುತ್ತೇನೆ,” ಎಂದು ತಿಳಿಸಿದರು.

ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ಅಭ್ಯರ್ಥಿಗೆ ಸಹಾಯ ಮಾಡಿ ಗೆಲ್ಲಿಸುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ ಎಂದು ಹೇಳಿದರು.

“ಇಂದು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಜನರಿಗೆ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಕೀಯ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲಿಲ್ಲದಂತಾಗಿದೆ. ಇದೇ ಕಾರಣದಿಂದ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ,” ಎಂದು ಅವರು ಹೇಳಿದರು.

ತಮ್ಮ ರಾಜಕೀಯ ಪಯಣವನ್ನು ಸ್ಮರಿಸಿದ ಸಿದ್ದರಾಮಯ್ಯ, 1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದ ವಿಚಾರವನ್ನು ನೆನಪಿಸಿಕೊಂಡರು. “2028ರ ವೇಳೆಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತವೆ. ಈ ಐದು ದಶಕಗಳಲ್ಲಿ ಗೆಲುವು-ಸೋಲು ಎರಡನ್ನೂ ಕಂಡಿದ್ದೇನೆ. ಆದರೆ ನಾನು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಎಂದಿಗೂ ನಡೆದುಕೊಂಡಿಲ್ಲ. ಆತ್ಮಸಾಕ್ಷಿಗೆ ದ್ರೋಹ ಮಾಡಿಲ್ಲ ಎಂಬ ತೃಪ್ತಿ ನನಗಿದೆ,” ಎಂದು ಹೇಳಿದರು.

ಮಾಜಿ ಸ್ಪೀಕರ್ ದಿವಂಗತ ಕೃಷ್ಣ ಅವರನ್ನು ಸ್ಮರಿಸಿದ ಅವರು, ಜನರು ಬಯಸುತ್ತಿದ್ದಾಗಲೇ ಅವರು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಆದರೆ ಅವರು ಬಿಟ್ಟುಹೋದ ರಾಜಕೀಯ ಆದರ್ಶಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಅಭಿಪ್ರಾಯಪಟ್ಟರು. ಇಂತಹ ನಾಯಕರ ನೆನಪಿನ ಕಾರ್ಯಕ್ರಮಗಳು ರಾಜ್ಯದಾದ್ಯಂತ ನಡೆಯಬೇಕು ಎಂದು ಆಶಿಸಿದರು.

ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಜನರ ಅಭಿಮಾನಕ್ಕೆ ತಾವು ಸದಾ ಋಣಿಯಾಗಿದ್ದರೂ ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಗೆಲುವು ಸಾಧಿಸಿ ಒಂಬತ್ತನೇ ಬಾರಿ ವಿಧಾನಸಭೆಗೆ ಪ್ರವೇಶಿಸಿದ್ದ ಸಿದ್ದರಾಮಯ್ಯ, 2018ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದರೂ ಬಾದಾಮಿ ಕ್ಷೇತ್ರದಿಂದ ಗೆದ್ದು ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. 1983ರಲ್ಲಿ ಲೋಕದಳ ಅಭ್ಯರ್ಥಿಯಾಗಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾದ ಅವರು, ಬಳಿಕ ಹಲವು ಚುನಾವಣೆಗಳಲ್ಲಿ ಗೆಲುವು-ಸೋಲುಗಳನ್ನು ಎದುರಿಸಿ ರಾಜ್ಯದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ತಮ್ಮ ರಾಜಕೀಯ ಬದುಕಿನ ಅಂತಿಮ ಹಂತದಲ್ಲಿಯೂ ಜನಸೇವೆ ಮುಂದುವರಿಸುವ ಬದ್ಧತೆಯನ್ನು ಪುನರುಚ್ಚರಿಸಿದ ಸಿದ್ದರಾಮಯ್ಯ, “ರಾಜ್ಯದ ಜನತೆ ಐದು ದಶಕಗಳ ಕಾಲ ನನ್ನನ್ನು ತಮ್ಮ ಮನೆಯ ಸದಸ್ಯನಂತೆ ಪ್ರೀತಿಸಿದ್ದಾರೆ. ಆ ಋಣವನ್ನು ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಚುನಾವಣೆಗಳಿಂದ ದೂರ ಉಳಿದರೂ ಜನರ ಪರವಾಗಿ ನನ್ನ ಹೋರಾಟ ಮುಂದುವರಿಯುತ್ತದೆ,” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಣೆ (2)

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

by ಶಾಲಿನಿ ಕೆ. ಡಿ
July 26, 2026 - 4:34 pm
0

ಣೆ (1)

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 4:13 pm
0

ಣೆ

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
July 26, 2026 - 3:47 pm
0

ಸ್ಕ್ವಾಶ್ (17)

ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 26, 2026 - 2:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಣೆ (2)
    ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
    July 26, 2026 | 0
  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version