• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಂದಿನ ಸಿಎಂ-ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಏನಾಯಿತು..? ಇಲ್ಲಿದೆ ಸಂಪೂರ್ಣ ಮಾಹಿತಿ

admin by admin
November 7, 2025 - 4:07 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 07t160605.247

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಇಂದು ವಿಧಾನಸೌಧದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆ, ಸಕ್ಕರೆ ಉದ್ಯಮದ ಸವಾಲುಗಳು ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ಜವಾಬ್ದಾರಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರವಾಗಿ ನಿಲ್ಲುವುದಾಗಿ ಭರವಸೆ ನೀಡಿದರು. “ನಾವು ರೈತರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಿದ್ದೇವೆ. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವಂತಹವುಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳೋಣ” ಎಂದು ಸಿಎಂ ಹೇಳಿದ್ದಾರೆ.

ಕಬ್ಬು ಬೆಳೆಗಾರರಿಗೆ ನೆರವು ನೀಡುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜಂಟಿ ಜವಾಬ್ದಾರಿಯಾಗಿದೆ ಎಂದು ಸಿಎಂ ಒತ್ತಿ ಹೇಳಿದರು. ಫೇರ್ ಅಂಡ್ ರೆಮ್ಯುನರೇಟಿವ್ ಪ್ರೈಸ್ (ಎಫ್‌ಆರ್ಪಿ) ನಿಗದಿಯು ಕೇಂದ್ರ ಸರ್ಕಾರದ ಕಾರ್ಯವಾಗಿದ್ದು, ಇದರಲ್ಲಿ ಸಾಗಾಟ ಮತ್ತು ಕಟಾವು ವೆಚ್ಚಗಳನ್ನು ಸೇರಿಸಲಾಗಿದೆ. ಕೇಂದ್ರ ಸರ್ಕಾರವು ದಿನಾಂಕ 06-05-2025ರಲ್ಲಿ ಎಫ್‌ಆರ್ಪಿಯನ್ನು ನಿಗದಿಪಡಿಸಿದ್ದು, ಇದು ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಆದರೆ, ಸಕ್ಕರೆಯ ಮಿನಿಮಮ್ ಸಪೋರ್ಟ್ ಪ್ರೈಸ್ (ಎಂಎಸ್ಪಿ) ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. “ಕೇಂದ್ರ ಸರ್ಕಾರದ ನೀತಿಗಳು ಸಮಸ್ಯೆಗಳನ್ನು ಹುಟ್ಟುಹಾಕಿವೆ” ಎಂದು ಮುಖ್ಯಮಂತ್ರಿ ಆರೋಪಿಸಿದರು.

RelatedPosts

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ

ADVERTISEMENT
ADVERTISEMENT

ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಮಾರಾಟ ಮಾಡುವ ವಿದ್ಯುತ್ ಮೇಲಿನ ತೆರಿಗೆಯ ಬಗ್ಗೆಯೂ ಚರ್ಚೆ ನಡೆಯಿತು. ಪ್ರಸ್ತುತ ಪ್ರತಿ ಯೂನಿಟ್‌ಗೆ 60 ಪೈಸೆ ತೆರಿಗೆ ನಿಗದಿಯಾಗಿದ್ದು, ಇದನ್ನು ಮರುಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದರು. ಇದರಿಂದ ಕಾರ್ಖಾನೆಗಳಿಗೆ ಆರ್ಥಿಕ ನೆರವು ಸಿಗಲಿದೆ ಎಂದು ಅವರು ಹೇಳಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, “ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆಗಳು ಮುಂದುವರೆದಿವೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿಲ್ಲ. ಮಹಾರಾಷ್ಟ್ರದಲ್ಲಿ ಪ್ರತಿ ಯೂನಿಟ್‌ಗೆ ರೂ. 6 ನೀಡಲಾಗುತ್ತಿದೆ. ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಬೇಕು” ಎಂದು ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ. ಇದಲ್ಲದೆ, ವಿದ್ಯುತ್ ಮಾರಾಟದ ಮೇಲಿನ 60 ಪೈಸೆ ತೆರಿಗೆಯನ್ನು ಕೈಬಿಡಬೇಕು ಎಂದರು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರವನ್ನು ಕನಿಷ್ಠ 25 ಕಿಮೀ ನಿಗದಿಪಡಿಸಬೇಕು ಎಂದು ಸಲಹೆ ನೀಡಿದರು.

ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣಕ್ಕೆ ಅನುಮತಿ ನೀಡುವಂತೆ ಪ್ರಧಾನಮಂತ್ರಿಗೆ ಮನವಿ ಮಾಡಬೇಕು ಎಂದು ಮಾಲೀಕರು ಒತ್ತಾಯಿಸಿದರು. “ಪ್ರಸ್ತುತ ರೈತರಿಗೆ ಎಫ್‌ಆರ್ಪಿ ಪ್ರಕಾರ ದರ ನೀಡಲಾಗುತ್ತಿದೆ. ಸೀಸನ್ ಮುಗಿದ ನಂತರ ಹೆಚ್ಚುವರಿ ಆದಾಯವಿದ್ದರೆ ಅದನ್ನು ರೈತರೊಂದಿಗೆ ಹಂಚಿಕೊಳ್ಳಲು ಸಿದ್ಧರಿದ್ದೇವೆ” ಎಂದು ಅವರು ಭರವಸೆ ನೀಡಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರು ಮಾತನಾಡಿ, ಎಥೆನಾಲ್‌ನ ಎಂಎಸ್ಪಿ ಹೆಚ್ಚಳಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದರು. “ಇದರಿಂದ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಸಕ್ಕರೆ ರನ್ ಮೇಲೆ ನಿರ್ಬಂಧ ಹೇರಿರುವುದರಿಂದ ಆರ್ಥಿಕ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆಟ್ರಿಕ್ ಟನ್ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಪರಿಷ್ಕರಿಸಿಲ್ಲ, ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಿದೆ” ಎಂದು ಅವರು ವಿವರಿಸಿದರು.

ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳು ಎಫ್‌ಆರ್ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟಪಡುತ್ತಿವೆಯಾದರೂ, ಕಾನೂನುಬದ್ಧವಾಗಿ ಪಾವತಿಸುತ್ತಿವೆ ಎಂದು ಅವರು ಹೇಳಿದರು. ಸಕ್ಕರೆ ಉತ್ಪಾದನೆ, ಮಾರಾಟ, ಎಥೆನಾಲ್ ಉತ್ಪಾದನೆ ಮತ್ತು ಬೆಲೆ ನಿಗದಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗದಿ ಎಲ್ಲವೂ ಕೇಂದ್ರ ಸರ್ಕಾರದ ಅಧೀನದಲ್ಲಿದೆ ಎಂದು ಕಾರ್ಖಾನೆ ಮಾಲೀಕರು ತಿಳಿಸಿದರು.

ಸಭೆಯಲ್ಲಿ ಕೇಂದ್ರದ ನೀತಿಗಳ ಬಗ್ಗೆಯೂ ಆಕ್ಷೇಪ ವ್ಯಕ್ತವಾಯಿತು. ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆಯಾದರೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರ ಸ್ಥಿತಿಯಲ್ಲಿವೆ ಎಂದು ಮಾಲೀಕರು ಹೇಳಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿದ್ದು, ಕಾರ್ಖಾನೆಗಳೂ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಈ ಸಭೆಯು ಕಬ್ಬು ಬೆಳೆಗಾರರ ಮತ್ತು ಸಕ್ಕರೆ ಉದ್ಯಮದ ನಡುವಿನ ಸಮನ್ವಯಕ್ಕೆ ಮಹತ್ವದ ಹೆಜ್ಜೆಯಾಗಿದೆ. ರಾಜ್ಯ ಸರ್ಕಾರವು ರೈತರ ಹಿತಕ್ಕಾಗಿ ಕೇಂದ್ರದೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಉದ್ದೇಶಿಸಿದೆ. ಇದರಿಂದ ಕರ್ನಾಟಕದ ಕಬ್ಬು ಉದ್ಯಮಕ್ಕೆ ಹೊಸ ದಿಕ್ಕು ಸಿಗುವ ನಿರೀಕ್ಷೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (91)

ಅಲಾಸ್ಕಾದಲ್ಲಿ ಭೀಕರ ವಿಮಾನ ದುರಂತ: 8 ಮಂದಿ ದುರ್ಮರಣ

by ಕವಿತಾ
August 21, 2026 - 3:21 pm
0

Untitled design 2026 08 21T143946.870

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

by ದಿಶಾ ಕೆ. ಎಸ್.
August 21, 2026 - 2:44 pm
0

Untitled design 2026 08 21T141105.833

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

by ದಿಶಾ ಕೆ. ಎಸ್.
August 21, 2026 - 2:11 pm
0

Untitled design 2026 08 21T135517.002

ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 1:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T143946.870
    ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
    August 21, 2026 | 0
  • Untitled design 2026 08 21T141105.833
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ
    August 21, 2026 | 0
  • Untitled design 2026 08 21T133338.280
    ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
    August 21, 2026 | 0
  • Untitled design 2026 08 21T111608.454
    ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ
    August 21, 2026 | 0
  • Untitled design 2026 08 21T105549.678
    ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version