- ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಆದೇಶ…!
- 2024 ರ ಸುಪ್ರೀಂ ಕೋರ್ಟ್ ಆದೇಶವನ್ನ ಉಲ್ಲೇಖಿಸಿ ಹೊಸ ಸುತ್ತೋಲೆ…!
- ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ ಗಳು ಈ ಆದೇಶವನ್ನ ಪಾಲಿಸುವಂತೆ ಉಲ್ಲೇಖ…!
ತಮ್ಮ ಇಲಾಖೆಯಲ್ಲಿ ಯಾವುದೇ ಮುಂಜಾಗ್ರತೆ ಇಲ್ಲದೆ ಸಿಬ್ಬಂದಿಗಳು ಸಾಯ್ತಿದ್ರು. ಸಾರ್ವಜನಿಕರಿಗೆ ತೊಂದರೆ ಆಗ್ತಿದ್ರು. ಲೋಡ್ ಶೆಡ್ಡಿಂಗ್ ನಿಂದ ರೈತರು ಸಂಕಷ್ಟವಾಗುತ್ತಿದ್ರು. ಯಾವುದೇ ತಲೆಕೆಡೆಸಿ ಕೊಳ್ತಿಲ್ಲ. ಆದ್ರೆ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕೋಟ್ಯಾಂತರ ಜನರಿಗೆ ಶಾಕ್ ಕೊಡೋಕೆ ಇಂದನ ಇಲಾಖೆ ಮುಂದಾಗಿದೆ.
ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೊರಡಿಸಿರುವ ಆದೇಶವನ್ನು ಪಾಲಿಸುವ ಕುರಿತಾಗಿ ಬೆಸ್ಕಾಂ ಅಧಿಕೃತ ನೋಟಿಫಿಕೇಶನ್ ಒಂದನ್ನ ಈಗ ಹೊರಡಿಸಿದೆ.
ಇದು ಕೇವಲ ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಅನ್ವಯವಾಗದೇ ರಾಜ್ಯದ ಎಲ್ ಎಸ್ಕಾಂಗಳು ಪಾಲಿಸಬೇಕಾಗಿದೆ. ಸುಪ್ರೀಂ ಕೋರ್ಟ್ ತನ್ನ 2024ರ ಡಿ.17ರ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆದೇಶ ಮಾಡಿದೆ. ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ (ಮೈಸೂರು), ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸರಬರಾಜು ಸಹಕಾರ ಸೊಸೈಟಿ ಸೇರಿ ಆರೂ ಎಸ್ಕಾಂಗಳು ಒಸಿ ಪ್ರಮಾಣಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು. ಈ ಬಗ್ಗೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಎಲ್ಲಾ ನಿಯಮಗಳನ್ನು ಸ್ಪಷ್ಟವಾಗಿ ಎಸ್ಕಾಂಗಳು ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಹಿಂದೆ 2016 ರಲ್ಲೇ ಬೆಸ್ಕಾಂ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪತ್ರ ಕಡ್ಡಾಯ ಮಾಡಲಾಗಿತ್ತು. ಬಿಬಿಎಂಪಿಯು ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿರ್ಮಾಣ ಮಾಡಿರುವವರಿಗೆ ಅಥವಾ ಮಂಜೂರಾದ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರಿಗೆ ಸ್ವಾಧೀನಾನುಭವ ಪತ್ರ ನೀಡಿರಲಿಲ್ಲ. ಇದರಿಂದ 3 ಸಾವಿರಕ್ಕೂ ಹೆಚ್ಚು ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ದೊರೆತಿರಲಿಲ್ಲ.
2022ರಲ್ಲಿ ನಗರಾಭಿವೃದ್ಧಿ ಇಲಾಖೆ ಈ ನಿಯಮ ಸಡಿಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ದಾಖಲೆ ಇದ್ದರೆ ಸಾಕು ಎಂದು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಹಾಗೂ ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ವಿದ್ಯುತ್, ಕುಡಿಯುವ ನೀರು, ಒಳಚರಂಡಿ ಸಂಪರ್ಕ ನೀಡುತ್ತಿರುವ ಬಗ್ಗೆ ಬಿಬಿಎಂಪಿ ಸರ್ವೆ ನಡೆಸಿದ್ದು ಅಕ್ರಮ ಕಟ್ಟಡಗಳ ಪಟ್ಟಿ ಸಿದ್ದ ಗೊಳಿಸಿದೆ.
ಸುಪ್ರೀಂಕೋರ್ಟ್ ಹೇಳಿರುವುದೇನು ಅಂತ ನೋಡೋದಾದ್ರೆ…!?
- ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವಂತಿಲ್ಲ.
- ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಮಾಣ ಆಗುತ್ತಿರುವ ಕಟ್ಟಡವನ್ನು ನಿರಂತವಾಗಿ ಪರಿಶೀಲನೆ ನಡೆಸಬೇಕು.
- ಯಾವುದೇ ನಕ್ಷೆ ಉಲ್ಲಂಘನೆ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
- ಕಟ್ಟಡ ನಿರ್ಮಾಣ ಸ್ಥಳದಲ್ಲಿ ನಕ್ಷೆ ಮಂಜೂರಾತಿ ಪ್ರತಿಯೊಂದನ್ನು ಪ್ರದರ್ಶಿಸಬೇಕು.
- ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಬಳಿಕವಷ್ಟೇ ಸ್ವಾಧೀನಾನುಭವ ಪತ್ರ ವಿತರಣೆ ಮಾಡಬೇಕು.
- ಒಂದೊಮ್ಮೆ ನಕ್ಷೆ ಮಂಜೂರಾತಿ ನಿಯಮ ಉಲ್ಲಂಘಿಸಿ ನಿರ್ಮಾಣ ಆಗಿದ್ದರೆ ಕ್ರಮ ಕೈಗೊಳ್ಳಬೇಕು.
- ಜತೆಗೆ ಮುಖ್ಯವಾಗಿ ‘ಒಸಿ’ ವಿತರಣೆ ಬಳಿಕವಷ್ಟೇ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ, ಒಳಚರಂಡಿ ಸಂಪರ್ಕ ಕಲ್ಪಿಸಬೇಕು.
ಬಿಬಿಎಂಪಿ ಹಾಗೂ ಬೆಸ್ಕಾಂ ಹೊಸ ಮನೆ ಕಡೋರಿಗೆ ಶಾಕ್ ನೀಡಿದ್ದು, ಅಪ್ಪಿ ತಪ್ಪಿ ಎನಾದ್ರೂ ಒಸಿ ಜಾಗದಲ್ಲಿ ಮನೆ ಕಟ್ಟಿದ್ರೆ ಕತ್ತಲಲ್ಲೆ ಕಳೆಯಬೇಕಾಗೊದಂತು ಪಕ್ಕಾ.