• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2026 - 12:40 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
ಮಾಡುವ ಎಐ (2)

ತುಮಕೂರು: ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 10 ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಿಳಿಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಪುತ್ರ ಧನುಷ್ (10) ಎಂದು ಗುರುತಿಸಲಾಗಿದೆ.

ಧನುಷ್ ಬಿಳಿಗಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಎಂದಿನಂತೆ ಮಂಗಳವಾರ ಬೆಳಗ್ಗೆ ಶಾಲೆಗೆ ಬಂದಿದ್ದ ಧನುಷ್, ತರಗತಿಗಳು ಆರಂಭವಾಗುವ ಮುನ್ನ ತನ್ನ ಸ್ನೇಹಿತರೊಂದಿಗೆ ಶಾಲೆಯ ಆವರಣದ ಸಮೀಪ ಆಟವಾಡುತ್ತಿದ್ದ. ಇದೇ ವೇಳೆ ಶಾಲೆಯ ಪಕ್ಕದಲ್ಲಿರುವ ನಂದಿನಿ ಹಾಲಿನ ಡೈರಿ ಕಟ್ಟಡದ ಪಿಲ್ಲರ್ ಏಕಾಏಕಿ ಕುಸಿದು ಬಾಲಕನ ಮೇಲೆ ಬಿದ್ದಿದೆ.

RelatedPosts

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ವಾಯು ಮಾಲಿನ್ಯ ಪ್ರಮಾಣದಲ್ಲಿ ಇಳಿಕೆ.

ADVERTISEMENT
ADVERTISEMENT

ಪಿಲ್ಲರ್ ನೇರವಾಗಿ ಧನುಷ್‌ನ ತಲೆಯ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗ್ಗೆ ಸುಮಾರು 9.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಾಲಕನ ಸಾವಿಗೆ ಕಟ್ಟಡದ ಕಳಪೆ ಕಾಮಗಾರಿಯೇ ಕಾರಣವಾಗಿರಬಹುದು ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ನಂದಿನಿ ಡೈರಿ ಕಟ್ಟಡದ ನಿರ್ಮಾಣದ ಗುಣಮಟ್ಟದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಸಮೀಪ ನಿರ್ಮಾಣ ಹಂತದಲ್ಲಿದ್ದ ವಿಷ್ಣುಗಡ–ಪೀಪಲ್‌ಕೋಟಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಭೀಕರ ದುರಂತ ಸಂಭವಿಸಿದ್ದು, ದಿಢೀರ್ ನೀರು ಹಾಗೂ ಮಣ್ಣು-ಬಂಡೆಗಳ ತ್ಯಾಜ್ಯ ಒಳನುಗ್ಗಿದ ಪರಿಣಾಮ 7 ಕಾರ್ಮಿಕರು ಮೃತಪಟ್ಟಿದ್ದು, 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC) ಕೈಗೆತ್ತಿಕೊಂಡಿರುವ ಈ ಜಲವಿದ್ಯುತ್ ಯೋಜನೆಯಲ್ಲಿ ಗುರುವಾರ ಸಂಜೆ ಸುರಂಗದೊಳಗೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದ ನೀರು, ಮಣ್ಣು ಮತ್ತು ಕಲ್ಲುಗಳ ಮಿಶ್ರಣ ರಭಸದಿಂದ ಒಳಹೊಕ್ಕಿದೆ. ಕ್ಷಣಾರ್ಧದಲ್ಲಿ ಸುರಂಗದೊಳಗಿನ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಕಾರ್ಮಿಕರು ಪ್ರಾಣ ಉಳಿಸಿಕೊಳ್ಳಲು ಹರಸಾಹಸಪಟ್ಟಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಸುರಂಗದೊಳಗೆ ಒಟ್ಟು 22 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ನೀರಿನ ರಭಸಕ್ಕೆ ಕೆಲವರು ಸುರಂಗದ ಹೊರಭಾಗಕ್ಕೆ ತಳ್ಳಲ್ಪಟ್ಟರೆ, ಇನ್ನು ಹಲವರು ಒಳಗಡೆಯೇ ಸಿಲುಕಿಕೊಂಡಿದ್ದರು. ಘಟನೆ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF), ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF), ಇಂಡೋ-ಟಿಬೆಟನ್ ಗಡಿ ಪೊಲೀಸ್ (ITBP), ಸೇನೆ ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ರಕ್ಷಣಾ ತಂಡಗಳು ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ 20ಕ್ಕೂ ಹೆಚ್ಚು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಗಾಯಗೊಂಡ 14 ಮಂದಿಯನ್ನು ಗೋಪೇಶ್ವರ ಹಾಗೂ ಪೀಪಲ್‌ಕೋಟಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದಿಂದ ಘಟನೆಯ ಬಗ್ಗೆ ನಿರಂತರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ರಕ್ಷಣಾ ಕಾರ್ಯಕ್ಕೆ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ಗಾಯಾಳುಗಳಿಗೆ  ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಆದೇಶಿಸಿದ್ದಾರೆ.

ದುರಂತದಲ್ಲಿ ಜಾರ್ಖಂಡ್ ಹಾಗೂ ಛತ್ತೀಸ್‌ಗಢ ಮೂಲದ ಕಾರ್ಮಿಕರೂ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಸಿಎಂ ಧಾಮಿ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹಾಗೂ ಛತ್ತೀಸ್‌ಗಢ ಮುಖ್ಯಮಂತ್ರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಮತ್ತು ಚಿಕಿತ್ಸೆಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಭಾರಿ ಮಳೆಯೇ ದುರಂತಕ್ಕೆ ಕಾರಣ?

ಕಳೆದ ಹಲವು ದಿನಗಳಿಂದ ಚಮೋಲಿ ಜಿಲ್ಲೆಯಲ್ಲಿ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಪರ್ವತ ಪ್ರದೇಶಗಳಲ್ಲಿ ಭೂಕುಸಿತ, ನದಿಗಳ ನೀರಿನ ಮಟ್ಟ ಏರಿಕೆ ಹಾಗೂ ಮಣ್ಣು ಕುಸಿತದ ಘಟನೆಗಳು ಹೆಚ್ಚಾಗಿವೆ. ಇತ್ತೀಚೆಗಷ್ಟೇ ನೀತಿ ಕಣಿವೆ ಪ್ರದೇಶದಲ್ಲಿ ನದಿಯ ಪ್ರವಾಹಕ್ಕೆ ಸೇತುವೆಯೊಂದು ಕೊಚ್ಚಿಹೋಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮಳೆಯಿಂದ ಪರ್ವತ ಪ್ರದೇಶದಲ್ಲಿ ಜಮೆಯಾಗಿದ್ದ ಮಣ್ಣು ಮತ್ತು ಕಲ್ಲುಗಳು ನೀರಿನೊಂದಿಗೆ ಸುರಂಗದೊಳಗೆ ನುಗ್ಗಿರುವ ಸಾಧ್ಯತೆ ಇದೆ. ಘಟನೆಯ ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸುರಂಗದ ಸುರಕ್ಷತಾ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image add0d94f

ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್

by ಶಾಲಿನಿ ಕೆ. ಡಿ
August 18, 2026 - 4:46 pm
0

ChatGPT Image Aug 18, 2026, 04 33 55 PM

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

by ಕವಿತಾ
August 18, 2026 - 4:44 pm
0

ಮಾಡುವ ಎಐ (10)

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

by ಶಾಲಿನಿ ಕೆ. ಡಿ
August 18, 2026 - 4:40 pm
0

Image c8817e1c

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

by ಶಾಲಿನಿ ಕೆ. ಡಿ
August 18, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version