• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಗಭದ್ರಾ ಅಣೆಕಟ್ಟೆ ನೂತನ ಕ್ರೆಸ್ಟ್ ಗೇಟ್‌ಗಳ ತಯಾರಿಕೆ ಪ್ರಗತಿಯಲ್ಲಿದೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 10:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (63)

ಬೆಂಗಳೂರು, ಆ.20: “ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದರು.

“ಈಗಾಗಲೇ ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಎಂಜಿನಿಯರ್ ಅವರಿಗೆ ಕೆಲಸವನ್ನು ಇನ್ನೂ ವೇಗಗೊಳಿಸಿ ಎಂದು ಸೂಚನೆ ನೀಡಿದ್ದೇನೆ. ಗೇಟ್ ತಯಾರಿಸಲು ಬೇರೆಯವರಿಗೂ ಅವಕಾಶ ನೀಡಿ, ಇದರಿಂದ ಕೆಲಸ ಬೇಗ ಆಗುತ್ತದೆ ಎಂದು ಹೇಳಿದ್ದೇನೆ” ಎಂದು ತಿಳಿಸಿದರು.

RelatedPosts

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

ಕೂಸನ್ನೇ ಕೊಂದ ಕಟುಕ ತಂದೆ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

“ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ. ನೀರು ಕೊಟ್ಟರೆ ಗೇಟ್ ಅಳವಡಿಕೆ ಸಾಧ್ಯವಿಲ್ಲ. ಬೆಳೆಯ ಬಗ್ಗೆ ನಮ್ಮ ರೈತರಿಗೆ ಆತಂಕವಾಗಿದೆ. ನಾನು ಸಹ ಅಧಿಕಾರಿಗಳ ಬಳಿ ಮಾತನಾಡಿದೆ. ಆಗ ಅವರು ಅಣೆಕಟ್ಟು ಮುಖ್ಯವೇ? ಬೆಳೆ ಮುಖ್ಯವೇ? ಎಂದು ಕೇಳಿದರು. ಕುಡಿಯುವ ನೀರಿಗೆ ಹಾಗೂ ಕೈಗಾರಿಕೆಗಳಿಗೆ ನಾವು ಯಥಾಸ್ಥಿತಿಯಲ್ಲಿ ನೀರು ಹರಿಸುತ್ತೇವೆ. ಸ್ಟ್ರಚ್ಚರ್ ದುರಸ್ತಿ ಕೆಲಸಗಳನ್ನು ತುರ್ತಾಗಿ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ಕನ್ನಯ್ಯ ನಾಯ್ಡು ಅವರ ಸಲಹೆಯಂತೆ ಅಣೆಕಟ್ಟೆಯಲ್ಲಿ ಸಂಪೂರ್ಣ ನೀರು ಸಂಗ್ರಹ ಮಾಡದೇ 1,626 ಅಡಿ ಅಂದರೆ ಶೇ. 76 ರಷ್ಟು ನೀರು ಸಂಗ್ರಹ ಮಾಡಬೇಕು. ಒಟ್ಟು 80 ಟಿಎಂಸಿ ನೀರನ್ನು ಸಂಗ್ರಹ ಮಾಡಲು ತುಂಗಭದ್ರಾ ಮಂಡಳಿ ತೀರ್ಮಾನ ಮಾಡಿದೆ. ಈ ಮಂಡಳಿಯಲ್ಲಿ ನಮ್ಮ ರಾಜ್ಯದ ಯಾವುದೇ ಅಧಿಕಾರವಿಲ್ಲ. ಬೇರೆಯವರು ದುಡ್ಡು ನೀಡುತ್ತಾರೋ ಬಿಡುತ್ತಾರೋ, ನಾವೇ ದುಡ್ಡು ನೀಡಿ ಅಣೆಕಟ್ಟು ಉಳಿಸಿಕೊಳ್ಳಲು ತಯಾರಿದ್ದೇವೆ. ನಮ್ಮ ರೈತರ ಜೊತೆಗೆ ಅವರ ರೈತರನ್ನೂ ನಾವು ಉಳಿಸುತ್ತೇವೆ” ಎಂದರು.

ದುರಸ್ತಿ ವೆಚ್ಚ ನೀಡಲು ನಾವು ತಯಾರಿದ್ದೇವೆ, ಆದರೆ ಅವರು ತೆಗೆದುಕೊಳ್ಳುತ್ತಿಲ್ಲ

“ದುರಸ್ತಿ ವೆಚ್ಚ ಕರ್ನಾಟಕದ್ದು ಶೇ 66, ಆಂಧ್ರ ಹಾಗೂ ತೆಲಂಗಾಣ ಸೇರಿ 33 ರಷ್ಟು ಹಣ ನೀಡಬೇಕು. ಆದರೆ ಆಂಧ್ರದವರು ಹಣವನ್ನೇ ಮೀಸಲಿಟ್ಟಿರಲಿಲ್ಲ. ಅವರಿಂದ ಆನಂತರ ಹಣ ಪಡೆದರಾಯಿತು, ಅವರ ಪಾಲಿನ ಹಣವನ್ನೂ ನಾವೇ ನೀಡುತ್ತೇವೆ ಎಂದು ಅಧಿಕಾರಿಗಳಿಗೆ ಹೇಳಿದೆ. ನಾವು ದುಡ್ಡು ನೀಡಲು ಹೋದರೂ ಅವರು ತೆಗೆದುಕೊಳ್ಳಲು ತಯಾರಿಲ್ಲ. ನಮಗೆ, ನಮ್ಮ ರೈತರಿಗೆ ತೊಂದರೆಯಾಗುವುದು ಬೇಡ ಎಂದು ನಾವೇ ಹಣ ನೀಡಲು ಮುಂದಾದೆವು” ಎಂದರು.

“ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಾಣದ ಬಗ್ಗೆ ಆಂಧ್ರ ಮುಖ್ಯಮಂತ್ರಿಗಳ ಬಳಿ ಮಾತನಾಡಲು ನಾನು ಮೂರು ಭಾರಿ ಪ್ರಯತ್ನಪಟ್ಟೆ. ಆದರೆ ಸಾಧ್ಯವಾಗಲಿಲ್ಲ. ತಂಡವನ್ನು ಸಹ ಚರ್ಚೆ ನಡೆಸಲು ಕಳಿಸಿದ್ದೆ. ಆದರೆ ಅವರು ಮುಂದೆ ಬರಲಿಲ್ಲ. ಆಂಧ್ರ ಮುಖ್ಯಮಂತ್ರಿಯವರು ಏಕೆ ಸಮಯ ನೀಡಲಿಲ್ಲ ಎಂಬುದು ನನಗೆ ತಿಳಿದಿಲ್ಲ. ಏಕೆಂದರೆ ಹೆಚ್ಚಿನ ನೀರು ಅವರಿಗೆ ಹೋಗುತ್ತಿದೆಯಲ್ಲ ಎಂದು ಇರಬಹುದೇನೋ” ಎಂದರು.

“ಅಣೆಕಟ್ಟೆಯ ಸಂಗ್ರಹ ಸಾಮರ್ಥ್ಯ ಹೂಳಿನಿಂದಾಗಿ 105 ಟಿಎಂಸಿಗೆ ಕುಸಿದಿದೆ. ಆದ ಕಾರಣಕ್ಕೆ 11 ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಾವು ಯೋಜನೆ ರೂಪಿಸಿದ್ದೆವು. ಈ ಯೋಜನೆ ಅನುಮೋದನೆಗೆ ಮಂಡಳಿಯ ಮುಂದೆ 22.11.2024 ರಂದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಲ್ಲದೇ ಅನೇಕ ಸಭೆಗಳಲ್ಲಿ ಈ ವಿಚಾರ ಮಂಡಿಸಲಾಗಿದೆ. ಪತ್ರ ಬರೆದು ಒತ್ತಡ ಹಾಕಲಾಗಿದೆ. ಎರಡು ರಾಜ್ಯದ ಮುಖ್ಯಮಂತ್ರಿಗಳಿಗೆ 14.02.25 ರಂದು ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಮಂತ್ರಿಗಳ ಜೊತೆಯಲ್ಲಿಯೂ ನಾನು ಮಾತನಾಡಿದ್ದೇನೆ” ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಸಮೀಕ್ಷೆ

“ಕಬಿನಿ ಅಣೆಕಟ್ಟೆಯಲ್ಲೂ ಒಂದಷ್ಟು ತಾಂತ್ರಿಕ ದೋಷಗಳಿವೆ ಎಂದು ಹೇಳಿದ ಕಾರಣಕ್ಕೆ ಇಡೀ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸಮೀಕ್ಷೆ ನಡೆಸಿ ವರದಿ ತಯಾರಿಸಿ ಇಟ್ಟುಕೊಳ್ಳಲಾಗಿದೆ. ಒಂದು ಅಣೆಕಟ್ಟೆ ಗೇಟ್ ಗಳ ಆಯುಷ್ಯ 50 ವರ್ಷ ಎಂದು ಅನೇಕರು ಹೇಳುತ್ತಾರೆ. ಹೀಗಾಗಿ ಸುರಕ್ಷತೆ ಬಗ್ಗೆ ಗಮನ ಹರಿಸಿ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಕಳೆದ ವರ್ಷ 19ನೇ ಗೇಟ್ ಕಳಚಿಬಿದ್ದು ತೊಂದರೆಯಾಗಿತ್ತು. ಆಗ ಬದಲಿ ಸ್ಟಾಪ್ ಗೇಟ್ ಅನ್ನು ವಾರದಲ್ಲಿ ಅಳವಡಿಸಿ ಅನಾಹುತ ತಪ್ಪಿಸಲಾಗಿತ್ತು. ಆಗ ವಿರೋಧ ಪಕ್ಷದವರು ಸೇರಿದಂತೆ ಅನೇಕರು ಟೀಕೆ ಮಾಡಿದರು. ನಾನು ಟೀಕೆಗಳನ್ನು ಸಂತೋಷದಿಂದ ಸ್ವೀಕಾರ ಮಾಡಿದೆ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆʼ ಎಂದು ಹೇಳಿದ್ದೆ. ಆಗ ಕನ್ನಯ್ಯ ನಾಯ್ಡು ಎಂಬುವವರನ್ನು ಕರೆಸಿ ಜಿಂದಾಲ್ ಸೇರಿದಂತೆ ಇತರರ ಸಹಯೋಗದಲ್ಲಿ ಗೇಟ್ ಅಳವಡಿಸಲಾಯಿತು. ನಂತರ ರೈತರಿಗೂ ನೀರು ನೀಡಲಾಯಿತು. ಇದನ್ನು ಎಲ್ಲರೂ ಅಭಿನಂದಿಸಿದರು” ಎಂದರು.

“ಈ ಘಟನೆ ನಡೆದ ದಿನ ರಾತ್ರಿ ಅಧಿಕಾರಿಗಳು ಕರೆ ಮಾಡಿ ಪರಿಸ್ಥಿತಿ ವಿವರಿಸಿದರು. ಆಗ ನಾನು ಬೆಳಿಗ್ಗೆ 9 ಗಂಟೆಗೆಲ್ಲಾ ಸ್ಥಳದಲ್ಲಿದ್ದು ಪರಿಸ್ಥಿತಿ ಅವಲೋಕಿಸಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಬಳಿಯೂ ಚರ್ಚೆ ಮಾಡಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನಮ್ಮ ರಾಜ್ಯಕ್ಕೆ ಮಾತ್ರವಿಲ್ಲ. ತುಂಗಭದ್ರಾ ಮಂಡಳಿಯ ಬಳಿ ಚರ್ಚೆ ಮಾಡಬೇಕಾಗುತ್ತದೆ. ಮೂರು ರಾಜ್ಯಗಳು ಸೇರಿ ತೀರ್ಮಾನ ಮಾಡಬೇಕಾಗುತ್ತದೆ” ಎಂದರು.

“ಅಣೆಕಟ್ಟು ಸುರಕ್ಷತೆಯ ಬಗ್ಗೆ ಬಜಾಲ್ ಸಮಿತಿಯು ವರದಿ ನೀಡಿ ಕೂಡಲೇ ಎಲ್ಲಾ ಗೇಟ್ ಗಳನ್ನು ಬದಲಾವಣೆ ಮಾಡಬೇಕು ಎಂದು ಸಲಹೆ ನೀಡಿದೆ. ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು ಎಂದು ಹೇಳಿದರು. ನಾವು ಸಹ ಎಲ್ಲಾ ಗೇಟ್ ಗಳನ್ನು ಬದಲಾವಣೆ ಮಾಡಲು ತೀರ್ಮಾನ ತೆಗೆದುಕೊಂಡೆವು. ಇದಕ್ಕೆ ಕನಿಷ್ಠ 8 ತಿಂಗಳು ಬೇಕಾಗುತ್ತದೆ” ಎಂದರು.

“1945 ರಲ್ಲಿ ಪ್ರಾರಂಭವಾದ ತುಂಗಭದ್ರಾ ಜಲಾಶಯ ಯೋಜನೆಯಿಂದ 1953 ರಲ್ಲಿ ಕಾಲುವೆಗೆ ನೀರು ಹರಿಸಲು ಪ್ರಾರಂಭ ಮಾಡಲಾಯಿತು. ನಮ್ಮ ರಾಜ್ಯದ ಪಾಲು 138.99 ಟಿಎಂಸಿ, ಆಂಧ್ರ ಮತ್ತು ತೆಲಂಗಾಣಕ್ಕೆ 73 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಸೇರಿ ಒಟ್ಟು 3.75 ಲಕ್ಷ ಹೆಕ್ಟೇರ್ ಸೇರಿದಂತೆ 9.26 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಹಂಚಿಕೆ ಮಾಡಲಾಗುತ್ತಿದೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version