• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 10:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 13T223057.697

RelatedPosts

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

ADVERTISEMENT
ADVERTISEMENT

ಬೆಂಗಳೂರು, ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು ನಡೆಯುವ ನೈತಿಕ ಪೊಲೀಸ್‌ಗಿರಿ ವಿರುದ್ಧ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಟ್ಟುನಿಟ್ಟಿನ ನಿಲುವು ತಳೆದಿದೆ. ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡುವ ಘಟನೆಗಳನ್ನು ತಡೆಯಲು ಯುವ ಕಾಂಗ್ರೆಸ್ ಕಾರ್ಯಕರ್ತರು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದಾರೆ ಎಂದು ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ತಿಳಿಸಿದ್ದಾರೆ.

ಪ್ರತಿ ವರ್ಷ ವ್ಯಾಲೆಂಟೈನ್ಸ್ ಡೇ ಸಂದರ್ಭ ಪಾರ್ಕ್‌ಗಳು, ಮಾಲ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡಲಾಗುತ್ತದೆ ಎಂಬ ಆರೋಪಗಳು ಕೇಳಿಬರುತ್ತವೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಹಾಗೂ ಇತರೆ ಹಿಂದೂ ಪರ ಸಂಘಟನೆಗಳು ಸಂಸ್ಕೃತಿ ಹೆಸರಿನಲ್ಲಿ ಪ್ರತಿಭಟನೆ ನಡೆಸಿ, ಕೆಲವೆಡೆ ದಾಂಧಲೆ ನಡೆಸಿದ ಉದಾಹರಣೆಗಳಿವೆ. ಈ ಬಾರಿ ಅಂತಹ ಯಾವುದೇ ಸಮಾಜಘಾತುಕ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ಮಂಜುನಾಥ್ ಗೌಡ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆ ಮತ್ತು ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಪ್ರೇಮಿಗಳ ಸುರಕ್ಷತೆಯ ಹೊಣೆಗಾರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ಸಂವಿಧಾನದ 21ನೇ ವಿಧಿ ಪ್ರತಿ ಪ್ರಜೆಗೆ ‘ಜೀವನ ಮತ್ತು ವೈಯಕ್ತಿಕ ಸ್ವಾತಂತ್ರ್ಯ’ದ ಹಕ್ಕನ್ನು ನೀಡುತ್ತದೆ. ಗೌರವಯುತವಾಗಿ ಬದುಕುವ ಹಕ್ಕು ಮತ್ತು ಸಂಗಾತಿಯನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವೂ ಅದರಲ್ಲಿ ಒಳಗೊಂಡಿದೆ. ಸುಪ್ರೀಂ ಕೋರ್ಟ್ ಸಹ ಪ್ರೀತಿ ಮತ್ತು ವಿವಾಹ ಆಯ್ಕೆ ವೈಯಕ್ತಿಕ ಸ್ವಾತಂತ್ರ್ಯದ ಭಾಗ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಪ್ರೇಮಿಗಳ ಹಕ್ಕುಗಳಿಗೆ ಧಕ್ಕೆ ತರುವ ಯಾವುದೇ ಕಾನೂನುಬಾಹಿರ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಮಂಜುನಾಥ್ ಗೌಡ ತಿಳಿಸಿದ್ದಾರೆ.

“ಪ್ರೇಮಿಗಳು ಧೈರ್ಯದಿಂದ ಹಾಗೂ ಮುಕ್ತವಾಗಿ ಓಡಾಡಬಹುದು. ಯಾರಿಗೂ ಹೆದರಬೇಕಿಲ್ಲ. ನಿಮ್ಮ ರಕ್ಷಣೆಗೆ ನಾವು ಇದ್ದೇವೆ,” ಎಂದು ಅವರು ಭರವಸೆ ನೀಡಿದ್ದಾರೆ. ಪೊಲೀಸ್ ಇಲಾಖೆ ಕೂಡ ಇಂತಹ ಗೂಂಡಾಗಿರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಇಲಾಖೆ ವಿಫಲವಾದರೆ ಯುವ ಕಾಂಗ್ರೆಸ್ ಕಾರ್ಯಕರ್ತರೇ ಪ್ರೇಮಿಗಳ ಪರವಾಗಿ ನಿಲ್ಲಲಿದ್ದಾರೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಪ್ರೇಮಿಗಳ ದಿನದಂದು ಕೆಲವು ಸಂಘಟನೆಗಳು ಹೂವು ಮತ್ತು ಉಡುಗೊರೆ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸುವ ಘಟನೆಗಳು ವರದಿಯಾಗಿವೆ. ಇದರಿಂದ ಬಡ ವ್ಯಾಪಾರಿಗಳಿಗೆ ನಷ್ಟವಾಗುತ್ತದೆ. ಈ ಬಾರಿ ಅಂತಹ ದಾಳಿಗಳನ್ನು ತಡೆಯಲು ಯುವ ಕಾಂಗ್ರೆಸ್ ಸಜ್ಜಾಗಿದೆ.

ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುವ ಶಕ್ತಿಗಳಿಗೆ ತಕ್ಕ ಉತ್ತರ ನೀಡಲಾಗುತ್ತದೆ. ಪರಸ್ಪರ ಸಮ್ಮತಿಯೊಂದಿಗೆ ಪ್ರೀತಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಯುವ ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (3)

ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ

by ಶಾಲಿನಿ ಕೆ. ಡಿ
July 23, 2026 - 5:22 pm
0

ಟಿ (2)

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 23, 2026 - 4:57 pm
0

ಟಿ (1)

NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ

by ಶಾಲಿನಿ ಕೆ. ಡಿ
July 23, 2026 - 4:29 pm
0

ಟಿ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

by ಶಾಲಿನಿ ಕೆ. ಡಿ
July 23, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (3)
    ಅತಿ ಎತ್ತರದ ₹200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸಿದ್ಧತೆ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • ಟಿ (1)
    NEET ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ವಕೀಲರ ಬೆಂಬಲ
    July 23, 2026 | 0
  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
  • Untitled design 2026 07 23T153603.474
    ನೀಟ್ ಅಕ್ರಮ ವಿರೋಧಿಸಿ ಅಣ್ಣಾ ಹಜಾರೆ ಮೌನ ಸತ್ಯಾಗ್ರಹ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version