• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 1:09 pm
in ಕರ್ನಾಟಕ
0 0
0
Web Photo Editor 2026 07 12T124808.436

ಬೆಂಗಳೂರು, ಜು.12: ಲಿಂಗಾಯತ-ವೀರಶೈವರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ, ನಾವು ಎಂದೆಂದೂ ಒಂದೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ವಿಜಯನಗರದ ಸುಜ್ಞಾನಮಂದಿರದಲ್ಲಿಂದು ನಡೆದ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದ ಅವರು, ಕೆಲವರು ಪದೇ ಪದೇ ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ಎಂದು ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬುದನ್ನು ನಾವು ಅರಿಯಬೇಕು. ಒಡಕು ಮೂಡಿಸುವವರ ವಿರುದ್ಧ ಎಚ್ಚರದಿಂದ ಇರಬೇಕು ಎಂದರು.

ಕೆಲವರು ಸ್ವಾರ್ಥಕ್ಕಾಗಿ ಧರ್ಮ, ಧರ್ಮಗಳ ನಡುವೆ ಒಡಕು ಉಂಟು ಮಾಡುತ್ತಿದ್ದರೆ, ಮತ್ತೆ ಕೆಲವರು ಜಾತಿ ಜಾತಿಗಳ ನಡುವೆ ವೈಮನಸ್ಯ ಹುಟ್ಟು ಹಾಕುವ ಕೆಲಸ ಮಾಡುತ್ತಿದ್ದಾರೆ. ವೀರಶೈವ ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ನಾವೆಂದೆಂದೂ ಒಂದೇ ಎಂದರು.
ವೀರಶೈವ ಮತ್ತು ಲಿಂಗಾಯತರು ಬೇರೆ ಬೇರೆ ಅಲ್ಲ, ಒಂದೇ ಎಂದು ತುಮಕೂರು ಸಿದ್ದಗಂಗಾಮಠದ ಪರಮಪೂಜ್ಯ ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಹೇಳಿದ್ದಾರೆ. ನಮ್ಮ ಸಮಾಜ ಅದನ್ನು ಪಾಲಿಸಬೇಕು ಎಂದರು.

RelatedPosts

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ADVERTISEMENT
ADVERTISEMENT

ನಾವು ಉದ್ಯೋಗ ನೀಡುವವರಾಗಬೇಕು
ಈ ಸ್ಪರ್ಧಾತ್ಮಕ ಯುಗದಲ್ಲಿ, ಜ್ಞಾನಾಧಾರಿತ ಸಮಾಜದಲ್ಲಿ ವಿದ್ಯಾವಂತ ಮತ್ತು ಬುದ್ಧಿವಂತರಷ್ಟೇ ಗೆಲ್ಲಲು ಸಾಧ್ಯ. ನಮ್ಮ ಸಮಾಜದ ಯುವಜನರು ಬಾಹ್ಯ ಮೋಹಗಳಿಗೆ ಒಳಗಾಗದೆ ಶ್ರದ್ಧೆಯಿಂದ ಓದಿ, ಉನ್ನತ ಗುರಿ ಇಟ್ಟುಕೊಂಡು ಉದ್ಯಮಪತಿಗಳಾಗಿ ಉದ್ಯೋಗ ನೀಡುವವರಾಗಬೇಕೇ ಹೊರತು, ಉದ್ಯೋಗ ಬೇಡುವವರಾಗಬಾರದು ಎಂದರು.
ಇಂದು ಆಧುನಿಕ ತಂತ್ರಜ್ಞಾನ ಅಗಾಧವಾಗಿ ಬೆಳೆಯುತ್ತಿದೆ. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ನಂತಹ ಆವಿಷ್ಕಾರಗಳಿಂದ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೊಸತನಕ್ಕೆ ಒಗ್ಗಿಕೊಳ್ಳುವ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಈಶ್ವರ ಖಂಡ್ರೆ ಸಲಹೆ ನೀಡಿದರು.

ವೀರಶೈವ ಮಠಗಳ ಕೊಡುಗೆ ಅಪಾರ

ವೀರಶೈವ-ಲಿಂಗಾಯತ ಮಠಗಳು ಈ ನಾಡಿಗೆ ದೊಡ್ಡ ಕೊಡುಗೆ ಕೊಟ್ಟಿವೆ. ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದಿಂದ ಎಲ್ಲ ಜಾತಿ ಧರ್ಮ, ಮತ ಪಂಥದವರಿಗೂ ಗುಣಮಟ್ಟದ ಶಿಕ್ಷಣ ನೀಡಿ ಸಮಾಜದ ಮುಖ್ಯ ವಾಹಿನಿಗೆ ತಂದಿದೆ. ವೀರಶೈವರಾಗಲೀ, ಲಿಂಗಯತರಾಗಲೀ ಎಂದಿಗೂ ಬೇಡಿದವರಲ್ಲ. ಅವರೆಲ್ಲರೂ ನೀಡಿದವರು. ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಎಂಬ ತತ್ವ ಅನುಷ್ಠಾನದೊಂದಿಗೆ ದುಡಿಯುತ್ತಿದ್ದರು, ದುಡಿದು ಗಳಿಸುತ್ತಿದ್ದರು, ಗಳಿಸಿದ್ದನ್ನು ಉಳಿಸುತ್ತಿದ್ದರು, ಉಳಿಸಿದ್ದನ್ನು ದಾಸೋಹದ ಮೂಲಕ ಸಮಾಜಕ್ಕೆ ನೀಡುತ್ತಿದ್ದರು. ನೀವೆಲ್ಲರೂ ಈ ಸಮಾಜಕ್ಕೆ ಕೊಡುಗೆ ನೀಡುವವರಾಗಬೇಕು ಎಂದರು.

ಶಿವಶರಣರು, ಬಸವಾದಿ ಪ್ರಮಥರು 12ನೇ ಶತಮಾನದಲ್ಲಿಯೇ ಸಮ ಸಮಾಜದ ಕನಸು ಕಂಡಿದ್ದರು. ಸರ್ವರಿಗೂ ಲೇಸನ್ನು ಬಯಸುವ ಸಮಾಜ ಯಾವುದಾದರೂ ಇದ್ದರೆ ಅದು ನಮ್ಮ ವೀರಶೈವ ಲಿಂಗಾಯತ ಸಮಾಜ ಮಾತ್ರ. ಹೀಗಾಗಿ ಇಂದಿನ ಪೀಳಿಗೆ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ನಮ್ಮ ಸಮುದಾಯ ಐ.ಎ.ಎಸ್. ಐ,ಪಿ.ಎಸ್. ಸೇರಿದಂತೆ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಪಾಸಾಗಿ ಉನ್ನತ ಹುದ್ದೆ ಅಲಂಕರಿಸುವುದು ತುಂಬಾ ಕಡಿಮೆ. ಹೀಗಾಗಿ ನಮ್ಮ ವೀರಶೈವ ಲಿಂಗಾಯಿತ ಸಮುದಾಯದ ನಿವೃತ್ತ ಐ.ಎ.ಎಸ್. ಐ.ಪಿ.ಎಸ್. ಅಧಿಕಾರಿಗಳು, ಕೆ.ಎ.ಎಸ್. ಅಧಿಕಾರಿಗಳು ಮತ್ತು ಉದ್ಯಮಿಗಳು ಸೇರಿ ಒಂದು ಟ್ರಸ್ಟ್ ರಚಿಸಿ ಜಿಲ್ಲೆಗೊಂದು ತರಬೇತಿ ಕೇಂದ್ರ ತೆರೆದು ಸಮಾಜದ ಆಕಾಂಕ್ಷಿಗಳಿಗೆ ತರಬೇತಿ ನೀಡಬೇಕು ಎಂದರು.

ಸರ್ವಶ್ರೇಷ್ಠ ಎಂಜಿನಿಯರ್ ಯಾರು ಎಂದರೆ ಸರ್.ಎಂ.ವಿಶ್ವೇಶ್ವರಯ್ಯನವರ ಹೆಸರು ಹೇಳುತ್ತೇವೆ. ನಿಮ್ಮ ತಂದೆ, ತಾಯಿ, ಅಣ್ಣ, ತಮ್ಮ ಎಂಜಿನಿಯರ್ ಆಗಿದ್ದರೂ ನೀವು ಅವರ ಹೆಸರು ಹೇಳಲ್ಲ. ಈ ಜಗತ್ತು ಸಾಧಕರನ್ನು ಮಾತ್ರ ಸ್ಮರಿಸುತ್ತದೆ. ಹೀಗಾಗಿ ನೀವೆಲ್ಲರೂ ಸಾಧಕರಾಗಬೇಕು.
ಯುವಶಕ್ತಿ ಅಣುಶಕ್ತಿಗಿಂತಲೂ ಮಿಗಿಲಾದ್ದು, ಯುವಶಕ್ತಿಗೆ ಸೂಕ್ತ ಮಾರ್ಗದರ್ಶನ ನೀಡಿದರೆ ಅಸಾಧ್ಯವಾದ್ದನ್ನೂ ಸಾಧಿಸಿ ತೋರಿಸುತ್ತಾರೆ. ಹೀಗಾಗಿ ಪಾಲಕರು ತಮ್ಮ ಮಕ್ಕಳು ದುಶ್ಚಟ, ದುರ್ಗುಣಗಳ ದಾಸರಾಗುತ್ತಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ವಿದ್ಯೆಯ ಜೊತೆಗೆ ಬುದ್ಧಿ ಕಲಿಸುವ ಕಾರ್ಯವನ್ನು ಗುರುಗಳು ಮಾಡಬೇಕು ಎಂದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 12T141135.828 (1)

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

by ದಿಶಾ ಕೆ. ಎಸ್.
July 12, 2026 - 2:52 pm
0

Web Photo Editor 2026 07 12T124808.436

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

by ದಿಶಾ ಕೆ. ಎಸ್.
July 12, 2026 - 2:09 pm
0

Web Photo Editor 2026 07 12T124808.436

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

by ದಿಶಾ ಕೆ. ಎಸ್.
July 12, 2026 - 1:58 pm
0

Web Photo Editor 2026 07 12T124808.436

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

by ದಿಶಾ ಕೆ. ಎಸ್.
July 12, 2026 - 1:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (25)
    ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ
    July 12, 2026 | 0
  • Image (20)
    ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    July 12, 2026 | 0
  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version