ವಿಜಯಪುರ: ರಾತ್ರಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.
ಮೃತರಲ್ಲಿ ಪತಿ-ಪತ್ನಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದ್ದಾರೆ. ಮಲಗಿದ್ದಲ್ಲೇ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು:
- ಗುರುನಾಥ ಬಡಿಗೇರ
- ಜ್ಯೋತಿ ಬಡಿಗೇರ
- ಕಾಳಮ್ಮ ಬಡಿಗೇರ
- ಕೀರ್ತಿ ಬಡಿಗೇರ
ಈ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ಇದ್ದು, ಮನೆಯ ಮಾಲೀಕರು ದುರಸ್ತಿ ಕಾರ್ಯ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಭಾರೀ ಗಾಳಿ ಮತ್ತು ಮಳೆಯಿಂದ ಮನೆಯ ಮೇಲ್ಚಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದೆ.
ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ದಳ ಸುದ್ದಿ ತಿಳಿದ ತಕ್ಷಣ ಸಿಂದಗಿ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಂದರು. ಮುಸುಕಿದ ಮನೆಯ ಮಧ್ಯೆ ಸಿಲುಕಿದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲು ತುರ್ತು ಕಾರ್ಯಾಚರಣೆ ನಡೆಸಲಾಯಿತು.
ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಮುಗಿಲು ಮುಟ್ಟುವಂತೆ ಆಕ್ರಂದನ ಇಡುತ್ತಿದ್ದ ದೃಶ್ಯ ತುಂಬಾ ಹೃದಯವಿದ್ರಾವಕವಾಗಿತ್ತು.
ಪ್ರಸ್ತುತ ತಾಲೂಕು ಆಡಳಿತ ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಿಸುವ ಸಾಧ್ಯತೆ ಇದೆ.
ಈ ಘಟನೆಯು ಜಿಲ್ಲೆಯಲ್ಲಿ ಹಳೆಯ ಮನೆಗಳಲ್ಲಿ ವಾಸಿಸುವವರ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂಗಾರು ಮಳೆಗೆ ಮುಂಚಿತವಾಗಿ ಹಳೆಯ ಕಟ್ಟಡಗಳ ಪರಿಶೀಲನೆ ಮತ್ತು ದುರಸ್ತಿ ಕಾರ್ಯವನ್ನು ತೀವ್ರಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.
ಕೆಲವೊಮ್ಮೆ ಪ್ರಕೃತಿ ವಿಕೋಪಗಳು ಯಾವ ರೀತಿಯಾಗಿ ತನ್ನ ಭೀಕರತೆ ಮೆರೆಯುತ್ತವೆ ಎಂದರೆ ಮಲಗಿದ್ದ ಅಮಾಯಕ ಪ್ರಾಣಗಳನ್ನು ಹೊತ್ತೊಯ್ಯುತ್ತವೆ.