• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇತಿಹಾಸವು ಸಂಸ್ಕೃತಿ-ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 7:29 pm
in ಕರ್ನಾಟಕ
0 0
0
22215

ಖ್ಯಾತ ಇತಿಹಾಸ ತಜ್ಞ ವಿಕ್ರಮ್ ಸಂಪತ್‌ ಅವರು, ಇತಿಹಾಸವು ದೇಶದ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಪ್ರತಿಬಿಂಬಿಸುವ ಕನ್ನಡಿ ಎಂದು ಕರೆದು, ಇತಿಹಾಸದ ಮಹತ್ವವನ್ನು ಒತ್ತಿ ಹೇಳಿದರು.

ದಿವಂಗತ ಡಾ. ಪಾದೂರು ಗುರುರಾಜ ಭಟ್ ಅವರ ಜನ್ಮಶತಮಾನೋತ್ಸದ ಅಂಗವಾಗಿ ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್, ಉಡುಪಿಯ ಟೌನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

RelatedPosts

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು

ADVERTISEMENT
ADVERTISEMENT

Untitled design (16)

ಭಾರತದ ದೇಗುಲಗಳು ಮತ್ತು ಪರಂಪರೆಗೆ ಸಂಬಂಧಿಸಿದ ಐತಿಹಾಸಿಕ ನಿರೂಪಣೆಗಳ ಪುನರ್ ಪರಿಶೀಲನೆ ಮತ್ತು ಪುನರ್ ರಚನೆ ಕುರಿತ ಒಳನೋಟವುಳ್ಳ ಚರ್ಚೆ ಮತ್ತು ವಿಶ್ಲೇಷಣೆ ಕಾರ್ಯಕ್ರಮದ ಕೇಂದ್ರ ಬಿಂದುವಾಗಿತ್ತು. ಕಾರ್ಯಕ್ರಮದಲ್ಲಿ ವಿಕ್ರಮ್ ಸಂಪತ್ ಅವರು, ಐತಿಹಾಸಿಕ ಸಂಶೋಧನೆಗೆ ನೀಡಿದ ಕೊಡುಗೆಗಾಗಿ ಅವರಿಗೆ ಡಾ.ಪಾದೂರು ಗುರುರಾಜ ಭಟ್ ಜನ್ಮ ಶತಮಾನೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇತಿಹಾಸವು ಜನರ ಮನಸ್ಸನ್ನು ರೂಪಿಸುತ್ತದೆ. ಈ ಸತ್ಯವನ್ನು ನಮ್ಮ ವಸಹಾತುಶಾಹಿಗಳು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದರು. ಜಾರ್ಜ್ ಆರ್ವೆಲ್, ‘ಭೂತಕಾಲವನ್ನು ನಿಯಂತ್ರಿಸುವವರು ಭವಿಷ್ಯವನ್ನೂ ನಿಯಂತ್ರಿಸುತ್ತಾರೆ’ ಎಂದಿದ್ದರು’ ಎಂದು ಹೇಳಿದರು.

Whatsapp image 2025 03 10 at 7.17.21 pm

ಭಾರತದ ಶಿಕ್ಷಣ ಪದ್ಧತಿ ಮೇಲೆ ಮೆಕಾಲೆ ಅವರ ಪ್ರಭಾವವನ್ನು ಉಲ್ಲೇಖಿಸಿದ ಅವರು, ಬ್ರಿಟಿಷರಂತೆ ಯೋಚಿಸುವ ಮತ್ತು ವರ್ತಿಸುವ ಭಾರತೀಯರ ವರ್ಗವನ್ನು ರಚಿಸುವ ಉದ್ದೇಶದಿಂದಲೇ ಭಾರತಕ್ಕೆ ಇಂಗ್ಲಿಷ್ ಭಾಷೆಯನ್ನು ಪರಿಚಯಿಸಲಾಯ ಎಂದು ಹೇಳಿದರು. ಭಾರತದ ಇತಿಹಾಸವು ಹೆಚ್ಚಾಗಿ ದೆಹಲಿ-ಕೇಂದ್ರಿತವಾಗಿ ಉಳಿದಿದೆ. ಪ್ರಾಥಮಿಕವಾಗಿ ರಾಜಧಾನಿಯ ಆಡಳಿತಗಾರರ ಮೇಲೆ ಹೆಚ್ಚಿನ ಆದ್ಯತೆ ನೀಡಿದೆ. ಆದರೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ಪ್ರಮುಖ ಭಾಗಗಳನ್ನು ಮುಖ್ಯವಾಹಿನಿಯ ನಿರೂಪಣೆಗಳಲ್ಲಿ ಕಡೆಗಣಿಸಲಾಗಿದೆ ಎಂದು ಅವರು ವಿಷಾದಿಸಿದರು.

ರಾಣಿ ಅಬ್ಬಕ್ಕ ಅವರ ಉಡುಪು, ಅರಮನೆ ಮತ್ತು ಪರಂಪರೆಯ ಬಗ್ಗೆ ಇಟಾಲಿಯನ್ ಪ್ರವಾಸಿ ಪಿಯೆಟ್ರೋ ಡೆಲ್ಲಾ ವಾಲೆ ಅವರು ಐತಿಹಾಸಿಕ ಬರವಣಿಗೆಗಳನ್ನು ಬರೆದಿದ್ದಾರೆ. ಇಂಥ ದಾಖಲೆಗಳ ಹೊರತಾಗಿಯೂ, ರಾಣಿ ಅಬ್ಬಕ್ಕ ಅವರಂತಹ ಅನೇಕ ವ್ಯಕ್ತಿಗಳ ಬಗ್ಗೆ ಹಲವರಿಗೆ ಇನ್ನೂ ತಿಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

1741ರಲ್ಲಿ ನಡೆದ ಕೋಲಾಚೆಲ್ ಕದನದಲ್ಲಿ ತಿರುವಾಂಕೂರಿನ ರಾಜ ಮಾರ್ತಾಂಡ ವರ್ಮ ಅವರು ಡಚ್ ಈಸ್ಟ್ ಇಂಡಿಯಾ ಕಂಪನಿಯನ್ನು ನಿರ್ಣಾಯಕವಾಗಿ ಸೋಲಿಸಿದರು. ಇದು ಭಾರತದಲ್ಲಿ ಡಚ್ ವಸಾಹತುಶಾಹಿಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ನುಚ್ಚುನೂರು ಮಾಡಿದ ಐತಿಹಾಸಿಕ ಘಟನೆ ಎಂದು ನೆನಪಿಸಿಕೊಂಡರು.

ಅಂದು ಅವರು ಜಯಗಳಿಸದಿದ್ದರೆ, ನಾವು ಇಂದು ಕೆಲವು ಸ್ಥಳಗಳಲ್ಲಿ ಡಚ್ ಮಾತನಾಡುತ್ತಿದ್ದೆವು. ಕೇರಳದಲ್ಲಿ ಸಹ, ಇತಿಹಾಸದ ಈ ಅಧ್ಯಾಯದ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ಆರು ಶತಮಾನಗಳ ಕಾಲ ಅಸ್ಸಾಂ ಆಳಿದ ಅಹೋಮ್‌ ರಾಜಮನೆತನದ ಮರೆತುಹೋದ ಪರಂಪರೆಯ ಬಗ್ಗೆ ಪ್ರಸ್ತಾಪಿಸಿ, ಈ ರಾಜವಂಶದ ಬಗ್ಗೆ ನಮ್ಮಲ್ಲಿ ಎಷ್ಟು ಜನರಿಗೆ ತಿಳಿದಿದೆ ಎಂದು ಪ್ರಶ್ನಿಸಿದರು. ಭಾರತದ ಎಲ್ಲಾ ಪ್ರದೇಶಗಳನ್ನು ಪ್ರತಿನಿಧಿಸುವ ಸಮಗ್ರ, ಅಂತರ್ಗತ ಐತಿಹಾಸಿಕ ನಿರೂಪಣೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಅಂತರರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಡಾ. ಸುರೇಂದ್ರನಾಥ ಬೊಪ್ಪರಾಜು ಅವರು, ದೇವಾಲಯದ ವಾಸ್ತುಶಿಲ್ಪ, ಸಂಕೀರ್ಣ ಕೆತ್ತನೆಗಳು ಮತ್ತು ಪ್ರಾಚೀನ ಭಾರತೀಯ ಕುಶಲಕರ್ಮಿಗಳ ಕಲಾತ್ಮಕ ಪಾಂಡಿತ್ಯದ ಕುರಿತು ಆಳವಾದ ವಿಶ್ಲೇಷಣೆಯೊಂದಿಗೆ ಮಾಹಿತಿ ನೀಡಿದರು.

ಪದ್ಮಶ್ರೀ ಪುರಸ್ಕೃತ ಕೆ.ಕೆ. ಮಹಮ್ಮದ್ ಅವರು, ಪ್ರಾಚೀನ ದೇವಾಲಯಗಳ ಸಂರಕ್ಷಣೆ ಮತ್ತು ಜೀರ್ಣೋದ್ಧಾರದ ಕುರಿತು ಮಾತನಾಡಿದರು. ಮಧ್ಯಪ್ರದೇಶದ ಬಟೇಶ್ವರದಲ್ಲಿರುವ, ಆಕ್ರಮಣಗಳಿಂದಾಗಿ ನಾಶವಾವಾಗಿದ್ದ ಸುಮಾರು 7-8ನೇ ಶತಮಾನದ ಗುರ್ಜರ-ಪ್ರತಿಹಾರ ದೇವಾಲಯಗಳ ಪುನರುಜ್ಜೀವನ ಮತ್ತು ಪುನಶ್ಚೇತನಕ್ಕಾಗಿ ತಾವು ಮಾಡಿದ ಪ್ರಯತ್ನಗಳನ್ನು ಅವರು ವಿವರಿಸಿದರು.

ಟ್ರಸ್ಟ್‌ನ ಅಧ್ಯಕ್ಷ ಪ್ರೊ.ಪಿ.ಶ್ರೀಪತಿ ತಂತ್ರಿ ಅವರು ಮಾತನಾಡಿ, ‘ಸ್ವಾತಂತ್ರ್ಯದ ನಂತರದ ಭಾರತೀಯ ಇತಿಹಾಸದ ವಿಕಸನ ಮತ್ತು ಭವಿಷ್ಯದ ಪೀಳಿಗೆಗೆ ಶಿಕ್ಷಣ ನೀಡುವಲ್ಲಿ ನಿಷ್ಪಕ್ಷಪಾತ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವ ಅಗತ್ಯದತ್ತ ಕಾರ್ಯಕ್ರಮವು ಗಮನಹರಿಸಿದೆ. ಭಾರತದ ಐತಿಹಾಸಿಕ ಅಸ್ಮಿತೆ ಮತ್ತು ಸಮಕಾಲೀನ ಕಾಲದಲ್ಲಿ ಅದರ ಪ್ರಸ್ತುತತೆಯ ಕುರಿತು ಅರ್ಥಪೂರ್ಣ ಚರ್ಚೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದರು.

ಟ್ರಸ್ಟ್‌ನ ಕಾರ್ಯದರ್ಶಿ ವಿಶ್ವನಾಥ ಪಾದೂರು ಮಾತನಾಡಿ, ‘ಭಾರತದ ದೇವಾಲಯ ಪರಂಪರೆ, ಐತಿಹಾಸಿಕ ಸತ್ಯ, ಭಾರತದ ಸಾಂಸ್ಕೃತಿಕ ಅಸ್ಮಿತೆ ರೂಪಿಸುವಲ್ಲಿ ದೇವಾಲಯಗಳ ಪಾತ್ರದ ಕುರಿತು ಅರ್ಥಪೂರ್ಣ ಸಂವಾದವನ್ನು ಏರ್ಪಡಿಸುವುದು ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್‌ನ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮವು ಇತಿಹಾಸಕಾರರು, ವಿದ್ವಾಂಸರು, ವಾಸ್ತುಶಿಲ್ಪಿಗಳು ಮತ್ತು ಭಾರತದ ಶ್ರೀಮಂತ ಇತಿಹಾಸದ ಬಗ್ಗೆ ಆಸಕ್ತಿ ಹೊಂದಿರುವ ಉತ್ಸಾಹಿಗಳನ್ನು ಬೆಸೆಯುವ ಕೊಂಡಿಯಾಗಿ ಕಾರ್ಯನಿರ್ವಹಿಸಿತು ಎಂದರು.

ಡಾ.ಮಾಲತಿ ಕೃಷ್ಣಮೂರ್ತಿ ಅವರು, ಶಿಕ್ಷಕ ಮತ್ತು ಪ್ರಾಂಶುಪಾಲರಾಗಿದ್ದ ಗುರುರಾಜ್ ಭಟ್ ಅವರು ತಮ್ಮ ಮಾನವೀಯ ಧೋರಣೆಗೆ ಹೆಸರಾದವರು ಎಂದು ಸ್ಮರಿಸಿದರು. ತರಗತಿಯಲ್ಲಿನ ಅವರ ಪಾಂಡಿತ್ಯ ಪಾಠಗಳು ಹೇಗೆ ಆಳವಾಗಿ ಬೇರೂರಿವೆ ಮತ್ತು ಅವರ ಸರಳತೆ, ಕಠಿಣ ಪರಿಶ್ರಮ ಮತ್ತು ಸಹಾನುಭೂತಿಯು ತಮ್ಮ ಮೇಲೆ ಹೇಗೆ ಶಾಶ್ವತವಾದ ಪ್ರಭಾವ ಬೀರಿತು ಎಂಬುದನ್ನು ಒತ್ತಿಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T192535.999
    ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ
    May 30, 2026 | 0
  • Untitled design 2026 05 30T191642.819
    ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
    May 30, 2026 | 0
  • Untitled design 2026 05 30T183418.013
    ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾ*ವು
    May 30, 2026 | 0
  • Untitled design 2026 05 30T174428.787
    ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version